ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಓಪನರ್ ಶಿಖರ್ ಧವನ್ ಅವರು ಪತ್ನಿ ಆಯೇಷಾ ಮುಖರ್ಜಿಗೆ ವಿಚ್ಛೇದನ ನೀಡಿದ್ದಾರೆ.
ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಬುಧವಾರ ಶಿಖರ್ ಮತ್ತು ಆಯೇಷಾ ವಿಚ್ಛೇದನವನ್ನು ಮಂಜೂರು ಮಾಡಿದೆ.
2012ರಲ್ಲಿ ಶಿಖರ್ ಧವನ್ ಹಾಗೂ ಆಯೇಷಾ ಮುಖರ್ಜಿ ಮದುವೆಯಾಗಿದ್ದರು. ಈ ದಂಪತಿಗೆ ಜೋರಾವರ್ ಎಂಬ ಮಗನಿದ್ದಾನೆ. ಆಯೇಷಾಗೆ ಇದು ಎರಡನೇ ಮದುವೆಯಾಗಿದ್ದು, ಶಿಖರ್ ಗಿಂತ 10 ವರ್ಷ ದೊಡ್ಡವರು.
ಪುತ್ರನಿಂದ ಬೇರೆಯಾಗಿ ವರ್ಷಗಟ್ಟಲೆ ಬದುಕುವಂತೆ ಒತ್ತಾಯಿಸಿ ಪತ್ನಿ ಮಾನಸಿಕ ಹಿಂಸೆ ಕೊಟ್ಟಿದ್ದಾರೆ ಎಂದು ಶಿಖರ್ ಆರೋಪಿಸಿದ್ದರು. ಈ ಆರೋಪಗಳನ್ನು ಆಯೇಷಾ ಸಮರ್ಥನೆ ಮಾಡಿಕೊಳ್ಳಲು ವಿಫಲರಾಗಿದ್ದಾರೆ ಎಂದು ಕೋರ್ಟ್ ಹೇಳಿದೆ. ವಿಚ್ಛೇದನ ಅರ್ಜಿಯಲ್ಲಿ ಪತ್ನಿ ವಿರುದ್ಧ ಧವನ್ ಮಾಡಿರುವ ಎಲ್ಲಾ ಆರೋಪಗಳನ್ನು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಹರೀಶ್ ಕುಮಾರ್ ಒಪ್ಪಿಕೊಂಡಿದ್ದಾರೆ.
ಮಗನ ಖಾಯಂ ಕಸ್ಟಡಿಗೆ ಸಂಬಂಧಿಸಿದಂತೆ ಕೋರ್ಟ್ ಯಾವುದೇ ಆದೇಶ ನೀಡಿಲ್ಲ. ಆದರೆ ಧವನ್ಗೆ ತನ್ನ ಮಗನನ್ನು ಭೇಟಿ ಮಾಡಲು ಮತ್ತು ವೀಡಿಯೋ ಕರೆ ಮೂಲಕ ಮಾತನಾಡುವ ಹಕ್ಕನ್ನು ಕೋರ್ಟ್ ನೀಡಿದೆ. ಪ್ರಸ್ತುತ ಆಯೇಷಾ ಅವರು ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ಎರಡರ ಪೌರತ್ವವನ್ನು ಅವರು ಹೊಂದಿದ್ದಾರೆ.
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…
ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ…
ಕುಗ್ರಾಮಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ ಬಿಹಾರದ ಪಟ್ನಾ ಜಿಲ್ಲೆಯ ದರ್ಭಾಂಗಾದ ಭುರವನ್ ಗ್ರಾಮದ ರಮಣ್ ಕಿಶೋರ್ ಅವರದ್ದು ಒಂದು ಸಾಧಾರಣ…
ಕೆ.ಬಿ.ರಮೇಶನಾಯಕ ಧಾರ್ಮಿಕತೆ ಹೆಸರಿನಲ್ಲಿ ನಿಷೇಧ ಹೇರಿದ್ದ ವಿಡಿಯೋ, ಫೋಟೋ ಚಿತ್ರೀಕರಣಕ್ಕೂ ಅವಕಾಶ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಹೆಸರಾಂತ ದೇವಸ್ಥಾನಗಳಿಗೆ…
ಹೇಮಂತ್ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ…