ಹೊಸದಿಲ್ಲಿ : ಮೂರು ದಿನಗಳ ಕಾಲ ಭಾರತ ಪ್ರವಾಸಕ್ಕೆ ಆಗಮಿಸಿರುವ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರು ಸೋಮವಾರ ಬೆಳಗ್ಗೆ ಬಂದಿಳಿದಿದ್ದಾರೆ, ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಭದ್ರತೆ, ಉನ್ನತ ಮಟ್ಟದ ಸಭೆಗಳಿಗೆ ಸಿದ್ಧವಾಗಿದೆ.
ತಮ್ಮ ಪ್ರವಾಸದ ಅಂತಿಮ ಹಂತವಾಗಿ ದಿಲ್ಲಿಗೆ ಆಗಮಿಸಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ನಿರೀಕ್ಷೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ,
ಮೆಸ್ಸಿ ಮತ್ತು ಅವರ ಪರಿವಾರವು ಇಂದು ಚಾಣಕ್ಯಪುರಿಯಲ್ಲಿರುವ ದಿ ಲೀಲಾ ಪ್ಯಾಲೇಸ್ಗೆ ಭೇಟಿ ನೀಡಲಿದ್ದು, ಅಲ್ಲಿ ಅವರಿಗಾಗಿಯೇ ಸಂಪೂರ್ಣ ಒಂದು ಮಹಡಿಯನ್ನು ಕಾಯ್ದಿರಿಸಲಾಗಿದೆ. ಅರ್ಜೆಂಟೀನಾದ ಮೆಸ್ಸಿ ತಂಡಕ್ಕೆ ಹೋಟೆಲ್ನ ಪ್ರೆಸಿಡೆನ್ಸಿ ಸೂಟ್ಗಳನ್ನು ನೀಡಲಾಗಿದ್ದು, ಒಂದು ರಾತ್ರಿ ವಾಸ್ತವ್ಯಕ್ಕೆ 3.5 ಲಕ್ಷದಿಂದ 7 ಲಕ್ಷ ರೂ.ಗಳವರೆಗೆ ಇರುತ್ತದೆ ಎಂದು ವರದಿಯಾಗಿದೆ.
ಇದನ್ನು ಓದಿ: ಆರ್.ಟಿ.ವಿಠ್ಠಲಮೂರ್ತಿ ಅವರ ಬೆಂಗಳೂರು ಡೈರಿ : ರಾಜ್ಯ ಕಾಂಗ್ರೆಸ್ನ ಗೊಂದಲ, ವರಿಷ್ಠರ ಪ್ಲಾನ್ ವಿಫಲ
ಮೆಸ್ಸಿ ಅವರ ಜೊತೆ ವಿಶೇಷ ಸಂವಾದಕ್ಕೆ ಕೆಲವು ಕಾರ್ಪೊರೇಟ್ಗಳು ಫುಟ್ಬಾಲ್ ಐಕಾನ್ ಅನ್ನು ಭೇಟಿ ಮಾಡುವ ಅವಕಾಶಕ್ಕಾಗಿ 1 ಕೋಟಿ ರೂ.ವರೆಗೆ ಖರ್ಚು ಮಾಡುತ್ತಿವೆ ಎಂದು ದಿಲ್ಲಿ ಸುದ್ದಿವಾಹಿನಿಗಳು ವರದಿ ಮಾಡಿವೆ. ದೆಹಲಿಯಲ್ಲಿ ಅವರ ಸಂಕ್ಷಿಪ್ತ ಭೇಟಿಯ ಸಮಯದಲ್ಲಿ, ಮೆಸ್ಸಿ ಭಾರತದ ಮುಖ್ಯ ನ್ಯಾಯಾಧೀಶರು, ಹಲವಾರು ಸಂಸದರು ಮತ್ತು ಕ್ರಿಕೆಟಿಗರು ಹಾಗೂ ಒಲಿಂಪಿಕ್ ಮತ್ತು ಪ್ಯಾರಾಲಿಂಪಿಕ್ ಪದಕ ವಿಜೇತರು ಸೇರಿದಂತೆ ಭಾರತೀಯ ಕ್ರೀಡಾ ತಾರೆಯರ ಆಯ್ದ ಗುಂಪನ್ನು ಭೇಟಿ ಮಾಡಲಿದ್ದಾರೆ.
ವಿಶ್ವ ಪುಟ್ ಬಾಲ್ ದಿಗ್ಗಜ ಲಿಯೋನಲ್ ಮೆಸ್ಸಿ ನಿನ್ನೆ ಮುಂಬೈನಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೊಲ್ಕರ್ ಹಾಗೂ ಭಾರತದ ಫುಟ್ ಬಾಲ್ ದಂತಕಥೆ ಸುನಿಲ್ ಚೆಟ್ರಿ ಜೊತೆಗೆ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹಬ್ಬವನ್ನುಂಟು ಮಾಡಿದ್ದರು.
ರಾಜ್ಯದ ಜಲಮೂಲಗಳ ಸ್ಥಿತಿ ಇಂದು ಶೋಚನೀಯವಾಗಿದೆ. ಅಂಕಿ-ಅಂಶಗಳ ಪ್ರಕಾರ ಕಳೆದ ಎರಡು ದಶಕಗಳಲ್ಲಿ ಅತಿಕ್ರಮಣದಿಂದಾಗಿ ನಗರ ಪ್ರದೇಶದ ಕೆರೆಗಳ ವಿಸ್ತೀರ್ಣ…
ಬೇಸಿಗೆಯ ತಾಪ ಹೆಚ್ಚಾದಂತೆ ರಾಜ್ಯದ ಹಲವೆಡೆ ಜನರು ಒಂದು ಬಿಂದಿಗೆ ನೀರಿಗಾಗಿ ವಾರಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಹೀಗಿರುವಾಗ, ಮೈಸೂರು…
ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರ ರಾಜೀನಾಮೆಗೆ ಬಿಗಿಪಟ್ಟು • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ತಾಲ್ಲೂಕು ವೀರಶೈವ ಲಿಂಗಾಯತ ಮಹಾ…
ಹೈದರಾಬಾದ್ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ,…
65 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹ; ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್ ಮೇವು ಲಭ್ಯ - ನವೀನ್ ಡಿಸೋಜ ಮಡಿಕೇರಿ…
ಪುರುಷರೂ ಎಚ್ಪಿವಿ ಲಸಿಕೆ ಪಡೆಯುವುದು ಸುರಕ್ಷಿತ: ಡಾ.ಯೋಗೇಂದ್ರಕುಮಾರ್ ಸಲಹೆ • ಹೇಮಂತ್ಕುಮಾರ್ ಮಂಡ್ಯ : ಹೆಣ್ಣು ಮಕ್ಕಳನ್ನು ಬಾಧಿಸುತ್ತಿರುವ ಗರ್ಭಕಂಠ…