ಕ್ರೀಡೆ

ಪ್ರತಿಷ್ಠಿತ ಲಾರೆಸ್‌ ವರ್ಷದ ಕ್ರೀಡಾಪಟು ಪ್ರಶಸ್ತಿ ಪಡೆದ ಮೆಸ್ಸಿ

ಪ್ಯಾರಿಸ್‌: ಅರ್ಜೆಂಟೀನಾ ಫುಟ್‌ಬಾಲ್‌ ತಂಡದ ನಾಯಕ ಲಯೊನೆಲ್‌ ಮೆಸ್ಸಿ, ಪ್ರತಿಷ್ಠಿತ ಲಾರೆಸ್‌ ವರ್ಷದ ಕ್ರೀಡಾಪಟು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಫುಟ್‌ಬಾಲ್‌ ವಿಶ್ವಕಪ್‌ ವಿಜೇತ ನಾಯಕ ಮೆಸ್ಸಿ, ಅರ್ಜೆಂಟೀನಾದ ಪರವಾಗಿ ಲಾರೆಸ್‌ ವರ್ಷದ ವಿಶ್ವ ತಂಡ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಮೂಲಕ ಒಂದೇ ಸಾಲಿನಲ್ಲಿ ಲಾರೆಸ್‌ ವರ್ಷದ ಕ್ರೀಡಾಪಟು ಹಾಗೂ ವರ್ಷದ ತಂಡ ಪ್ರಶಸ್ತಿ ಗದ್ದ ಮೊಟ್ಟ ಮೊದಲ ಕ್ರೀಡಾಪಟು ಎನಿಸಿದ್ದಾರೆ.

https://twitter.com/LaureusSport/status/1655692463061839875?s=20

ಇದರೊಂದಿಗೆ ಮೆಸ್ಸಿ, ಎರಡನೇ ಬಾರಿಗೆ ಲಾರೆಸ್‌ ವರ್ಷದ ಕ್ರೀಡಾಪಟು ಗೆದ್ದ ಸಾಧನೆ ಮಾಡಿದ್ದಾರೆ. ಈ ಹಿಂದೆ 2020 ರಲ್ಲಿ ದಿಗ್ಗಜ ಫಾರ್ಮುಲಾ ಒನ್‌ ಚಾಲಕ ಲೂಯಿಸ್‌ ಹ್ಯಾಮಿಲ್ಟನ್‌ ಜೊತೆ ಪ್ರತಿಷ್ಠಿತ ಪ್ರಶಸ್ತಿ ಹಂಚಿಕೊಂಡಿದ್ದರು.

ಪ್ರಶಸ್ತಿ ಕುರಿತು ಪ್ರತಿಕ್ರಿಯಿಸಿದ 35 ವರ್ಷದ ಮೆಸ್ಸಿ, ಫೆಡರರ್‌, ನಡಾಲ್‌, ಶುಮಾಕರ್‌, ಜೊಕೊವಿಕ್‌, ಬೋಲ್ಟ್‌ ಸೇರಿದಂತೆ ದಿಗ್‌ಜರ ಸಾಲಿನಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.

andolanait

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

6 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

6 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

6 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

6 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

6 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

6 hours ago