ಕ್ರೀಡೆ

ಏಕದಿನ ವಿಶ್ವಕಪ್‌: ಫೈನಲ್‌ನಲ್ಲಿ ಈ ತಂಡ 65ಕ್ಕೆ ಆಲ್‌ಔಟ್‌ ಆಗುತ್ತೆ; ಮಾರ್ಷ್‌ ಭವಿಷ್ಯ

ನವದೆಹಲಿ : ಐಸಿಸಿ ಏಕದಿನ ವಿಶ್ವಕಪ್‌-2023 ಫೈನಲ್‌ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಎದುರಾಗಲಿವೆ. ಈ ಪಂದ್ಯ ನರೇಂದ್ರ ಮೊದಿ ಕ್ರೀಡಾಂಗಣದಲ್ಲಿ ಭಾನುವಾರ ಭಾರತೀಯ ಕಾಲಮಾನ ಮದ್ಯಾಹ್ನ 2ಕ್ಕೆ ಆರಂಭವಾಗಲಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಭಾನುವಾರ ನಡೆಯಲಿರುವ ಫೈನಲ್‌ ಪಂದ್ಯದ ಬಗ್ಗೆ ಆಸ್ಟ್ರೇಲಿಯಾ ಸ್ಟಾರ್‌ ಆಲ್‌ ರೌಂಡರ್‌ ಮಿಚೆಲ್‌ ಮಾರ್ಷ್‌  ಅವರು ಇದೀಗ ಫೈನಲ್‌ ಬಗ್ಗೆ ಭವಿಷ್ಯ ನುಡಿದಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಐಪಿಎಲ್‌-2023ರಲ್ಲಿ ಡೆಲ್ಲಿ ಕ್ಯಾಫಿಟಲ್ಸ್‌ ಪ್ರೋಡ್ಕಾಸ್ಟ್‌ ಕಾರ್ಯಕ್ರಮದಲ್ಲಿ  ವಿಶ್ವಕಪ್‌ ಫೈನಲ್‌ ಕುರಿತಂತೆ ನೀಡಿದ್ದ ಹೇಳಿಕೆ ಭಾರೀ ವೈರಲ್‌ ಆಗಿದ್ದು, ಫೈನಲ್‌ ಪಂದ್ಯಕ್ಕೂ ಮುನ್ನಾ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ವಿಶ್ವಕಪ್‌-2023ರಲ್ಲಿ ಆಸ್ಟ್ರೇಲಿಯಾ ತಂಡ ಅಜೇಯವಾಗಿ ಉಳಿಯಲಿದ್ದು, ಫೈನಲ್‌ ನಲ್ಲಿ ಭಾರತವನ್ನು ಮಣಿಸಲಿದೆ. ಆಸ್ಟ್ರೇಲಿಯಾ ತಂಡವು ಫೈನಲ್‌ನಲ್ಲಿ ಭಾರತ ವಿರುದ್ಧ 450 ರನ್‌ಗಳನ್ನು ಕೇವಲ 2 ವಿಕೆಟ್‌ ಕಳೆದುಕೊಂಡು ಕಲೆಹಾಕಿದರೆ, ಭಾರತ ಕೇವಲ 65 ರನ್‌ ಗಳಿಗೆ ಆಲ್‌ಔಟ್‌ ಆಗಲಿದೆ ಎಂದು ಬವಿಷ್ಯ ನುಡಿದಿದ್ದರು.

ಈ ಬಾರಿಯ ವರ್ಲ್ಡ್‌ ಕಪ್‌ನಲ್ಲಿ  ಭಾರತ ತಂಡವು ಅಜೇಯ ದಾಖಲೆಗಳನ್ನು ದಾಖಲಿಸಿದ್ದು, ಒಂದೇ ಒಂದು ಪಂದ್ಯದಲ್ಲಿಯೂ ಸೋಲದೇ ಫೈನಲ್‌ ಪ್ರವೇಶ ಪಡೆದಿರುವ ಭಾರತ ತಂಡದ ಬಗ್ಗೆ ಮಾರ್ಷ್‌ರ ಹೇಳಿಕೆ ವಿವಾದವನ್ನು ಪಡೆದುಕೊಂಡಿದೆ.

ಲೀಗ್‌ನಲ್ಲಿ ಹೀನಾಯ ಸೋಲುಗಳ ಬಳಿಕ ಕಮ್‌ಬ್ಯಾಕ್‌ ಮಾಡಿದ ಆಸ್ಟ್ರೇಲಿಯಾ ತಂಡ ಸೆಮಿಸ್‌ನಲ್ಲಿ ದ. ಆಫ್ರಿಕಾ ವಿರುದ್ಧ ಜಯ ದಾಖಲಿಸಿ ಫೈನಲ್‌ ತಲುಪಿದೆ.

ವರ್ಲ್ಡ್‌ ಕಪ್‌ ಆರಂಭದ ಪಂದ್ಯದಲ್ಲಿ ಭಾರತ ಮತ್ತು ಆಸೀಸ್‌ ಮುಖಾಮುಖಿಯಾಗಿತ್ತು. ಆ ಪಂದ್ಯದಲ್ಲಿ ಭಾರತ ಭರ್ಜರಿ ಜಯ ದಾಖಲಿಸಿತ್ತು.

andolanait

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

6 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

6 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

7 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

9 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

10 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

10 hours ago