ಕ್ರೀಡೆ

ಏಕದಿನ ವಿಶ್ವಕಪ್‌: ಫೈನಲ್‌ನಲ್ಲಿ ಈ ತಂಡ 65ಕ್ಕೆ ಆಲ್‌ಔಟ್‌ ಆಗುತ್ತೆ; ಮಾರ್ಷ್‌ ಭವಿಷ್ಯ

ನವದೆಹಲಿ : ಐಸಿಸಿ ಏಕದಿನ ವಿಶ್ವಕಪ್‌-2023 ಫೈನಲ್‌ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಎದುರಾಗಲಿವೆ. ಈ ಪಂದ್ಯ ನರೇಂದ್ರ ಮೊದಿ ಕ್ರೀಡಾಂಗಣದಲ್ಲಿ ಭಾನುವಾರ ಭಾರತೀಯ ಕಾಲಮಾನ ಮದ್ಯಾಹ್ನ 2ಕ್ಕೆ ಆರಂಭವಾಗಲಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಭಾನುವಾರ ನಡೆಯಲಿರುವ ಫೈನಲ್‌ ಪಂದ್ಯದ ಬಗ್ಗೆ ಆಸ್ಟ್ರೇಲಿಯಾ ಸ್ಟಾರ್‌ ಆಲ್‌ ರೌಂಡರ್‌ ಮಿಚೆಲ್‌ ಮಾರ್ಷ್‌  ಅವರು ಇದೀಗ ಫೈನಲ್‌ ಬಗ್ಗೆ ಭವಿಷ್ಯ ನುಡಿದಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಐಪಿಎಲ್‌-2023ರಲ್ಲಿ ಡೆಲ್ಲಿ ಕ್ಯಾಫಿಟಲ್ಸ್‌ ಪ್ರೋಡ್ಕಾಸ್ಟ್‌ ಕಾರ್ಯಕ್ರಮದಲ್ಲಿ  ವಿಶ್ವಕಪ್‌ ಫೈನಲ್‌ ಕುರಿತಂತೆ ನೀಡಿದ್ದ ಹೇಳಿಕೆ ಭಾರೀ ವೈರಲ್‌ ಆಗಿದ್ದು, ಫೈನಲ್‌ ಪಂದ್ಯಕ್ಕೂ ಮುನ್ನಾ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ವಿಶ್ವಕಪ್‌-2023ರಲ್ಲಿ ಆಸ್ಟ್ರೇಲಿಯಾ ತಂಡ ಅಜೇಯವಾಗಿ ಉಳಿಯಲಿದ್ದು, ಫೈನಲ್‌ ನಲ್ಲಿ ಭಾರತವನ್ನು ಮಣಿಸಲಿದೆ. ಆಸ್ಟ್ರೇಲಿಯಾ ತಂಡವು ಫೈನಲ್‌ನಲ್ಲಿ ಭಾರತ ವಿರುದ್ಧ 450 ರನ್‌ಗಳನ್ನು ಕೇವಲ 2 ವಿಕೆಟ್‌ ಕಳೆದುಕೊಂಡು ಕಲೆಹಾಕಿದರೆ, ಭಾರತ ಕೇವಲ 65 ರನ್‌ ಗಳಿಗೆ ಆಲ್‌ಔಟ್‌ ಆಗಲಿದೆ ಎಂದು ಬವಿಷ್ಯ ನುಡಿದಿದ್ದರು.

ಈ ಬಾರಿಯ ವರ್ಲ್ಡ್‌ ಕಪ್‌ನಲ್ಲಿ  ಭಾರತ ತಂಡವು ಅಜೇಯ ದಾಖಲೆಗಳನ್ನು ದಾಖಲಿಸಿದ್ದು, ಒಂದೇ ಒಂದು ಪಂದ್ಯದಲ್ಲಿಯೂ ಸೋಲದೇ ಫೈನಲ್‌ ಪ್ರವೇಶ ಪಡೆದಿರುವ ಭಾರತ ತಂಡದ ಬಗ್ಗೆ ಮಾರ್ಷ್‌ರ ಹೇಳಿಕೆ ವಿವಾದವನ್ನು ಪಡೆದುಕೊಂಡಿದೆ.

ಲೀಗ್‌ನಲ್ಲಿ ಹೀನಾಯ ಸೋಲುಗಳ ಬಳಿಕ ಕಮ್‌ಬ್ಯಾಕ್‌ ಮಾಡಿದ ಆಸ್ಟ್ರೇಲಿಯಾ ತಂಡ ಸೆಮಿಸ್‌ನಲ್ಲಿ ದ. ಆಫ್ರಿಕಾ ವಿರುದ್ಧ ಜಯ ದಾಖಲಿಸಿ ಫೈನಲ್‌ ತಲುಪಿದೆ.

ವರ್ಲ್ಡ್‌ ಕಪ್‌ ಆರಂಭದ ಪಂದ್ಯದಲ್ಲಿ ಭಾರತ ಮತ್ತು ಆಸೀಸ್‌ ಮುಖಾಮುಖಿಯಾಗಿತ್ತು. ಆ ಪಂದ್ಯದಲ್ಲಿ ಭಾರತ ಭರ್ಜರಿ ಜಯ ದಾಖಲಿಸಿತ್ತು.

andolanait

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

3 hours ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

3 hours ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

3 hours ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

3 hours ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

13 hours ago