ಕ್ರೀಡೆ

ಏಕದಿನ ವಿಶ್ವಕಪ್‌: ಫೈನಲ್‌ನಲ್ಲಿ ಈ ತಂಡ 65ಕ್ಕೆ ಆಲ್‌ಔಟ್‌ ಆಗುತ್ತೆ; ಮಾರ್ಷ್‌ ಭವಿಷ್ಯ

ನವದೆಹಲಿ : ಐಸಿಸಿ ಏಕದಿನ ವಿಶ್ವಕಪ್‌-2023 ಫೈನಲ್‌ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಎದುರಾಗಲಿವೆ. ಈ ಪಂದ್ಯ ನರೇಂದ್ರ ಮೊದಿ ಕ್ರೀಡಾಂಗಣದಲ್ಲಿ ಭಾನುವಾರ ಭಾರತೀಯ ಕಾಲಮಾನ ಮದ್ಯಾಹ್ನ 2ಕ್ಕೆ ಆರಂಭವಾಗಲಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಭಾನುವಾರ ನಡೆಯಲಿರುವ ಫೈನಲ್‌ ಪಂದ್ಯದ ಬಗ್ಗೆ ಆಸ್ಟ್ರೇಲಿಯಾ ಸ್ಟಾರ್‌ ಆಲ್‌ ರೌಂಡರ್‌ ಮಿಚೆಲ್‌ ಮಾರ್ಷ್‌  ಅವರು ಇದೀಗ ಫೈನಲ್‌ ಬಗ್ಗೆ ಭವಿಷ್ಯ ನುಡಿದಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಐಪಿಎಲ್‌-2023ರಲ್ಲಿ ಡೆಲ್ಲಿ ಕ್ಯಾಫಿಟಲ್ಸ್‌ ಪ್ರೋಡ್ಕಾಸ್ಟ್‌ ಕಾರ್ಯಕ್ರಮದಲ್ಲಿ  ವಿಶ್ವಕಪ್‌ ಫೈನಲ್‌ ಕುರಿತಂತೆ ನೀಡಿದ್ದ ಹೇಳಿಕೆ ಭಾರೀ ವೈರಲ್‌ ಆಗಿದ್ದು, ಫೈನಲ್‌ ಪಂದ್ಯಕ್ಕೂ ಮುನ್ನಾ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ವಿಶ್ವಕಪ್‌-2023ರಲ್ಲಿ ಆಸ್ಟ್ರೇಲಿಯಾ ತಂಡ ಅಜೇಯವಾಗಿ ಉಳಿಯಲಿದ್ದು, ಫೈನಲ್‌ ನಲ್ಲಿ ಭಾರತವನ್ನು ಮಣಿಸಲಿದೆ. ಆಸ್ಟ್ರೇಲಿಯಾ ತಂಡವು ಫೈನಲ್‌ನಲ್ಲಿ ಭಾರತ ವಿರುದ್ಧ 450 ರನ್‌ಗಳನ್ನು ಕೇವಲ 2 ವಿಕೆಟ್‌ ಕಳೆದುಕೊಂಡು ಕಲೆಹಾಕಿದರೆ, ಭಾರತ ಕೇವಲ 65 ರನ್‌ ಗಳಿಗೆ ಆಲ್‌ಔಟ್‌ ಆಗಲಿದೆ ಎಂದು ಬವಿಷ್ಯ ನುಡಿದಿದ್ದರು.

ಈ ಬಾರಿಯ ವರ್ಲ್ಡ್‌ ಕಪ್‌ನಲ್ಲಿ  ಭಾರತ ತಂಡವು ಅಜೇಯ ದಾಖಲೆಗಳನ್ನು ದಾಖಲಿಸಿದ್ದು, ಒಂದೇ ಒಂದು ಪಂದ್ಯದಲ್ಲಿಯೂ ಸೋಲದೇ ಫೈನಲ್‌ ಪ್ರವೇಶ ಪಡೆದಿರುವ ಭಾರತ ತಂಡದ ಬಗ್ಗೆ ಮಾರ್ಷ್‌ರ ಹೇಳಿಕೆ ವಿವಾದವನ್ನು ಪಡೆದುಕೊಂಡಿದೆ.

ಲೀಗ್‌ನಲ್ಲಿ ಹೀನಾಯ ಸೋಲುಗಳ ಬಳಿಕ ಕಮ್‌ಬ್ಯಾಕ್‌ ಮಾಡಿದ ಆಸ್ಟ್ರೇಲಿಯಾ ತಂಡ ಸೆಮಿಸ್‌ನಲ್ಲಿ ದ. ಆಫ್ರಿಕಾ ವಿರುದ್ಧ ಜಯ ದಾಖಲಿಸಿ ಫೈನಲ್‌ ತಲುಪಿದೆ.

ವರ್ಲ್ಡ್‌ ಕಪ್‌ ಆರಂಭದ ಪಂದ್ಯದಲ್ಲಿ ಭಾರತ ಮತ್ತು ಆಸೀಸ್‌ ಮುಖಾಮುಖಿಯಾಗಿತ್ತು. ಆ ಪಂದ್ಯದಲ್ಲಿ ಭಾರತ ಭರ್ಜರಿ ಜಯ ದಾಖಲಿಸಿತ್ತು.

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

10 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

10 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

11 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

12 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

12 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

13 hours ago