ಕ್ರೀಡೆ

ಮಿರಾಜ್‌ ಆಲ್‌ರೌಂಡ್‌ ಆಟಕ್ಕೆ ಮಂಕಾದ ಅಫ್ಘನ್‌: ಬಾಂಗ್ಲಾದೇಶಕ್ಕೆ 6 ವಿಕೆಟ್‌ ಜಯ!

ಧರ್ಮಶಾಲಾ : ಬೌಲಿಂಗ್ ಮತ್ತು ಬ್ಯಾಟಿಂಗ್ ವಿಭಾಗದಲ್ಲಿ ಆಲ್‌ರೌಂಡ್ ಪ್ರದರ್ಶನ ನೀಡಿದ ಬಾಂಗ್ಲಾದೇಶ ತಂಡ ಅಫ್ಘಾನಿಸ್ತಾನ ವಿರುದ್ಧ 6 ವಿಕೆಟ್‌ಗಳ ಗೆಲುವು ದಾಖಲಿಸಿದೆ.

ಶನಿವಾರ (ಅ. 7)ದಂದು ಧರ್ಮಶಾಲಾದ ಎಚ್‌ಪಿಸಿಎ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್‌ನ ಮೂರನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ಅಫ್ಘಾನಿಸ್ತಾನ ವಿರುದ್ಧ ಭರ್ಜರಿ ಗೆಲುವಿನ ಮೂಲಕ ಶುಭಾರಂಭ ಮಾಡಿದೆ.

ಅಫ್ಘಾನಿಸ್ತಾನ ತಂಡ ನೀಡಿದ 157 ರನ್‌ಗಳ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 34.4 ಓವರ್‌ಗಳಲ್ಲಿ ಕೇವಲ 4 ವಿಕೆಟ್‌ ಕಳೆದುಕೊಂಡು ಗುರಿ ಮುಟ್ಟಿತು.

ಅಫ್ಘಾನಿಸ್ತಾನ ತಂಡದ ಪರ ಬ್ಯಾಟಿಂಗ್‌ನಲ್ಲಿ ರಹಮಾನುಲ್ಲಾ ಗುರ್ಬಾಜ್ 62 ಎಸೆತಗಳಲ್ಲಿ 4 ಬೌಂಡರಿ ಮತ್ತು 1 ಸಿಕ್ಸರ್ ಸಮೇತ 47 ರನ್ ಗಳಿಸಿದರೆ, ಇಬ್ರಾಹಿಂ ಝದ್ರಾನ್ 25 ಗಳಿಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 47 ರನ್‌ಗಳ ಜೊತೆಯಾಟವಾಡಿತು. ನಂತರ ಬಂದ ರಹಮತ್ ಶಾ 18 ರನ್, ನಾಯಕ ಹಶ್ಮತುಲ್ಲಾ ಶಾಹಿದಿ 18 ರನ್, ನಜಿಬುಲ್ಲಾ ಝದ್ರಾನ್ 5 ರನ್, ಮೊಹಮ್ಮದ್ ನಬಿ 6 ರನ್, ಅಜ್ಮತುಲ್ಲಾ ಒಮರ್ಜಾಯ್ 22 ರನ್, ರಶೀದ್ ಖಾನ್ 9 ರನ್ ಗಳಿಸಿ ತಂಡ 150ರ ಗಡಿ ತಲುಪಲು ಸಹಾಯ ಮಾಡಿದರು.

ಬೌಲಿಂಗ್‌ನಲ್ಲಿ ಬಾಂಗ್ಲಾದೇಶ ತಂಡದ ಪರ ನಾಯಕ ಶಕೀಬ್ ಅಲ್ ಹಸನ್ 8 ಓವರ್‌ಗಳಲ್ಲಿ 30 ರನ್ ನೀಡಿ 3 ವಿಕೆಟ್ ಪಡೆದರೆ, ಮೆಹದಿ ಹಸನ್ ಮಿರಾಜ್ 9 ಓವರ್‌ಗಳಲ್ಲಿ 25 ರನ್ ನೀಡಿ 3 ವಿಕೆಟ್ ಕಬಳಿಸಿದರು. ಉಳಿದಂತೆ ಶೋರಿಫುಲ್ ಇಸ್ಲಾಂ 2 ವಿಕೆಟ್ ಕಬಳಿಸಿದರೆ, ತಸ್ಕಿನ್ ಅಹ್ಮದ್ ಮತ್ತು ಮುಸ್ತಫಿಜುರ್ ರಹಮಾನ್ ತಲಾ ಒಂದೊಂದು ವಿಕೆಟ್ ಪಡೆದರು.

157 ರನ್‌ಗಳ ಗುರಿ ಪಡೆದು ಬ್ಯಾಟಿಂಗ್ ಆರಂಭಿಸಿದ ಬಾಂಗ್ಲಾದೇಶ ತಂಡದ ತಂಝೀದ್ ಹಸನ್ 5 ರನ್ ಗಳಿಸಿ ಔಟಾದರು. ನಂತರ ಲಿಟ್ಟನ್ ದಾಸ್ ಕೂಡ 13 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಬಳಿಕ ಜೊತೆಗೂಡಿದ ಮೆಹದಿ ಹಸನ್ ಮಿರಾಜ್ ಮತ್ತು ನಜ್ಮುಲ್ ಹೊಸೈನ್ ಶಾಂಟೋ 3ನೇ ವಿಕೆಟ್‌ಗೆ 97 ರನ್‌ಗಳ ಜೊತೆಯಾಟ ನಿರ್ಮಿಸಿ ಗೆಲುವಿನ ಸನಿಹ ಕೊಂಡೊಯ್ದರು.

ಮೆಹದಿ ಹಸನ್ ಮಿರಾಜ್ 73 ಎಸೆತಗಳಲ್ಲಿ 5 ಬೌಂಡರಿಗಳ ಸಹಾಯದಿಂದ 57 ರನ್ ಬಾರಿಸಿ ಔಟಾದರೆ, ನಾಯಕ ಶಕೀಬ್ ಅಲ್ ಹಸನ್ 14 ರನ್ ಗಳಿಸಿ ನರ್ಗಮಿಸಿದರು.

ನಜ್ಮುಲ್ ಹೊಸೈನ್ ಶಾಂಟೋ 83 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸಮೇತ ಅಜೇಯ 59 ರನ್ ಗಳಿಸಿದರೆ, ಮುಶ್ಫಿಕರ್ ರಹೀಂ ಔಟಾಗದೇ 2 ರನ್ ಗಳಿಸಿ ತಂಡಕ್ಕೆ ಜಯ ತಂದುಕೊಟ್ಟರು.

ಬೌಲಿಂಗ್‌ ಮತ್ತು ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶಣ ನೀಡಿದ ಮೆಹದಿ ಹಸನ್ ಮಿರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

andolanait

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

9 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

10 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

11 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

11 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

12 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

12 hours ago