ಕ್ರೀಡೆ

ಕ್ರಿಕೆಟಿಗರಾದ ವಿರಾಟ್‌ ಕೊಹ್ಲಿ, ಧೋನಿ ಪತ್ನಿ & ಮಕ್ಕಳ ಕುರಿತು ‘ಸ್ತ್ರೀ ದ್ವೇಷಿ’ ಹೇಳಿಕೆ : FIR ದಾಖಲಿಸುವಂತೆ ಮಹಿಳಾ ಆಯೋಗ ಆಗ್ರಹ

ನವದೆಹಲಿ: ಕ್ರಿಕೆಟಿಗರಾದ ಮಹೇಂದ್ರ ಸಿಂಗ್‌ ಧೋನಿ ಹಾಗೂ ವಿರಾಟ್‌ ಕೊಹ್ಲಿ ಅವರ ಪತ್ನಿ ಮತ್ತು ಮಕ್ಕಳನ್ನು ಗುರಿಯಾಗಿಸಿ ‘ಸ್ತ್ರೀ ದ್ವೇಷಿ’ ಹೇಳಿಕೆಗಳನ್ನು ನೀಡುವವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿ ದೆಹಲಿ ಮಹಿಳಾ ಆಯೋಗವು (ಡಿಸಿಡಬ್ಲ್ಯೂ) ನಗರ ಪೊಲೀಸರಿಗೆ ನೋಟಿಸ್‌ ನೀಡಿದೆ.

ಧೋನಿ ಅವರ 7 ವರ್ಷದ ಮಗಳು ಮತ್ತು ಕೊಹ್ಲಿ ಅವರ ಎರಡು ವರ್ಷದ ಮಗಳನ್ನು ಗುರಿಯಾಗಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಹಂಚಿಕೊಳ್ಳುತ್ತಿರುವವರ ವಿರುದ್ಧ ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

‘ಎರಡೂ ಮಕ್ಕಳು ಮತ್ತು ಅವರ ತಾಯಿಯಂದಿರ ಕುರಿತಂತೆ ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟರ್‌ನಲ್ಲಿ ಹಂಚಿಕೆಯಾಗಿರುವ ಪೋಸ್ಟ್‌ಗಳು ಅಶ್ಲೀಲ, ಸ್ತ್ರೀದ್ವೇಷಿ ಮತ್ತು ನಿಂದನಾತ್ಮಕವಾಗಿವೆ. ಇದು ಅತ್ಯಂತ ಗಂಭೀರ ವಿಷಯವಾಗಿದ್ದು, ತುರ್ತಾಗಿ ಕ್ರಮ ಕೈಗೊಳ್ಳಬೇಕಿದೆ’ ಎಂದು ಆಯೋಗವು ತನ್ನ ನೋಟಿಸ್‌ನಲ್ಲಿ ತಿಳಿಸಿದೆ. ತೆಗೆದುಕೊಳ್ಳಲಾದ ಕ್ರಮದ ಕುರಿತು ವಿಸ್ತೃತ ವರದಿಯನ್ನು ಜನವರಿ 16ರ ಒಳಗಾಗಿ ನೀಡುವಂತೆ ಹೇಳಲಾಗಿದೆ. ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್‌ ಅವರು ಇದೇ ವಿಚಾರವಾಗಿ ಬುಧವಾರ ಟ್ವೀಟ್‌ ಮಾಡಿದ್ದರು.’ದೇಶದ ಇಬ್ಬರು ಹಿರಿಯ ಆಟಗಾರರಾದ ವಿರಾಟ್‌ ಕೊಹ್ಲಿ ಮತ್ತು ಧೋನಿ ಅವರ ಮಕ್ಕಳ ಚಿತ್ರಗಳನ್ನು ಟ್ವಿಟರ್‌ನ ಕೆಲವು ಖಾತೆಗಳಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಅಸಭ್ಯವಾಗಿ ಕಾಮೆಂಟ್‌ ಹಾಕಲಾಗುತ್ತಿದೆ. 7 ವರ್ಷ ಮತ್ತು 2 ವರ್ಷದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲವಾಗಿ ಕಾಮೆಂಟ್ ಮಾಡಲಾಗುತ್ತಿದೆ. ನಿಮಗೆ ಆಟಗಾರ ಇಷ್ಟವಾಗದಿದ್ದರೆ, ಅವರ ಹೆಣ್ಣು ಮಕ್ಕಳನ್ನು ನಿಂದಿಸುವಿರಾ? ಎಫ್‌ಐಆರ್‌ ದಾಖಲಿಸುವಂತೆ ಪೊಲೀಸರಿಗೆ ನೋಟಿಸ್‌ ನೀಡಲಾಗಿದೆ’ ಎಂದು ಸ್ವಾತಿ ತಿಳಿಸಿದ್ದರು.

andolanait

Recent Posts

ಹುಬ್ಬಳ್ಳಿ | ದಲಿತ ಯುವಕನ ಜೊತೆ ಮದುವೆ : ಗರ್ಭಿಣಿ ಮಗಳನ್ನ ಕೊಂದ ಪೋಷಕರು

ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಮಗಳನ್ನು ಸ್ವಂತ ತಂದೆ ಸೇರಿ ಇತರರು ಕೊಲೆ ಮಾಡಿ ಗಂಡನ…

12 mins ago

ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…

1 hour ago

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ…

1 hour ago

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…

2 hours ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

3 hours ago

ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

3 hours ago