ಕ್ರೀಡೆ

ಕ್ರಿಕೆಟಿಗರಾದ ವಿರಾಟ್‌ ಕೊಹ್ಲಿ, ಧೋನಿ ಪತ್ನಿ & ಮಕ್ಕಳ ಕುರಿತು ‘ಸ್ತ್ರೀ ದ್ವೇಷಿ’ ಹೇಳಿಕೆ : FIR ದಾಖಲಿಸುವಂತೆ ಮಹಿಳಾ ಆಯೋಗ ಆಗ್ರಹ

ನವದೆಹಲಿ: ಕ್ರಿಕೆಟಿಗರಾದ ಮಹೇಂದ್ರ ಸಿಂಗ್‌ ಧೋನಿ ಹಾಗೂ ವಿರಾಟ್‌ ಕೊಹ್ಲಿ ಅವರ ಪತ್ನಿ ಮತ್ತು ಮಕ್ಕಳನ್ನು ಗುರಿಯಾಗಿಸಿ ‘ಸ್ತ್ರೀ ದ್ವೇಷಿ’ ಹೇಳಿಕೆಗಳನ್ನು ನೀಡುವವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿ ದೆಹಲಿ ಮಹಿಳಾ ಆಯೋಗವು (ಡಿಸಿಡಬ್ಲ್ಯೂ) ನಗರ ಪೊಲೀಸರಿಗೆ ನೋಟಿಸ್‌ ನೀಡಿದೆ.

ಧೋನಿ ಅವರ 7 ವರ್ಷದ ಮಗಳು ಮತ್ತು ಕೊಹ್ಲಿ ಅವರ ಎರಡು ವರ್ಷದ ಮಗಳನ್ನು ಗುರಿಯಾಗಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಹಂಚಿಕೊಳ್ಳುತ್ತಿರುವವರ ವಿರುದ್ಧ ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

‘ಎರಡೂ ಮಕ್ಕಳು ಮತ್ತು ಅವರ ತಾಯಿಯಂದಿರ ಕುರಿತಂತೆ ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟರ್‌ನಲ್ಲಿ ಹಂಚಿಕೆಯಾಗಿರುವ ಪೋಸ್ಟ್‌ಗಳು ಅಶ್ಲೀಲ, ಸ್ತ್ರೀದ್ವೇಷಿ ಮತ್ತು ನಿಂದನಾತ್ಮಕವಾಗಿವೆ. ಇದು ಅತ್ಯಂತ ಗಂಭೀರ ವಿಷಯವಾಗಿದ್ದು, ತುರ್ತಾಗಿ ಕ್ರಮ ಕೈಗೊಳ್ಳಬೇಕಿದೆ’ ಎಂದು ಆಯೋಗವು ತನ್ನ ನೋಟಿಸ್‌ನಲ್ಲಿ ತಿಳಿಸಿದೆ. ತೆಗೆದುಕೊಳ್ಳಲಾದ ಕ್ರಮದ ಕುರಿತು ವಿಸ್ತೃತ ವರದಿಯನ್ನು ಜನವರಿ 16ರ ಒಳಗಾಗಿ ನೀಡುವಂತೆ ಹೇಳಲಾಗಿದೆ. ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್‌ ಅವರು ಇದೇ ವಿಚಾರವಾಗಿ ಬುಧವಾರ ಟ್ವೀಟ್‌ ಮಾಡಿದ್ದರು.’ದೇಶದ ಇಬ್ಬರು ಹಿರಿಯ ಆಟಗಾರರಾದ ವಿರಾಟ್‌ ಕೊಹ್ಲಿ ಮತ್ತು ಧೋನಿ ಅವರ ಮಕ್ಕಳ ಚಿತ್ರಗಳನ್ನು ಟ್ವಿಟರ್‌ನ ಕೆಲವು ಖಾತೆಗಳಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಅಸಭ್ಯವಾಗಿ ಕಾಮೆಂಟ್‌ ಹಾಕಲಾಗುತ್ತಿದೆ. 7 ವರ್ಷ ಮತ್ತು 2 ವರ್ಷದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲವಾಗಿ ಕಾಮೆಂಟ್ ಮಾಡಲಾಗುತ್ತಿದೆ. ನಿಮಗೆ ಆಟಗಾರ ಇಷ್ಟವಾಗದಿದ್ದರೆ, ಅವರ ಹೆಣ್ಣು ಮಕ್ಕಳನ್ನು ನಿಂದಿಸುವಿರಾ? ಎಫ್‌ಐಆರ್‌ ದಾಖಲಿಸುವಂತೆ ಪೊಲೀಸರಿಗೆ ನೋಟಿಸ್‌ ನೀಡಲಾಗಿದೆ’ ಎಂದು ಸ್ವಾತಿ ತಿಳಿಸಿದ್ದರು.

andolanait

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

2 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

2 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

2 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

2 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

2 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

3 hours ago