ಕ್ರೀಡೆ

ಕ್ರಿಕೆಟಿಗರಾದ ವಿರಾಟ್‌ ಕೊಹ್ಲಿ, ಧೋನಿ ಪತ್ನಿ & ಮಕ್ಕಳ ಕುರಿತು ‘ಸ್ತ್ರೀ ದ್ವೇಷಿ’ ಹೇಳಿಕೆ : FIR ದಾಖಲಿಸುವಂತೆ ಮಹಿಳಾ ಆಯೋಗ ಆಗ್ರಹ

ನವದೆಹಲಿ: ಕ್ರಿಕೆಟಿಗರಾದ ಮಹೇಂದ್ರ ಸಿಂಗ್‌ ಧೋನಿ ಹಾಗೂ ವಿರಾಟ್‌ ಕೊಹ್ಲಿ ಅವರ ಪತ್ನಿ ಮತ್ತು ಮಕ್ಕಳನ್ನು ಗುರಿಯಾಗಿಸಿ ‘ಸ್ತ್ರೀ ದ್ವೇಷಿ’ ಹೇಳಿಕೆಗಳನ್ನು ನೀಡುವವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿ ದೆಹಲಿ ಮಹಿಳಾ ಆಯೋಗವು (ಡಿಸಿಡಬ್ಲ್ಯೂ) ನಗರ ಪೊಲೀಸರಿಗೆ ನೋಟಿಸ್‌ ನೀಡಿದೆ.

ಧೋನಿ ಅವರ 7 ವರ್ಷದ ಮಗಳು ಮತ್ತು ಕೊಹ್ಲಿ ಅವರ ಎರಡು ವರ್ಷದ ಮಗಳನ್ನು ಗುರಿಯಾಗಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಹಂಚಿಕೊಳ್ಳುತ್ತಿರುವವರ ವಿರುದ್ಧ ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

‘ಎರಡೂ ಮಕ್ಕಳು ಮತ್ತು ಅವರ ತಾಯಿಯಂದಿರ ಕುರಿತಂತೆ ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟರ್‌ನಲ್ಲಿ ಹಂಚಿಕೆಯಾಗಿರುವ ಪೋಸ್ಟ್‌ಗಳು ಅಶ್ಲೀಲ, ಸ್ತ್ರೀದ್ವೇಷಿ ಮತ್ತು ನಿಂದನಾತ್ಮಕವಾಗಿವೆ. ಇದು ಅತ್ಯಂತ ಗಂಭೀರ ವಿಷಯವಾಗಿದ್ದು, ತುರ್ತಾಗಿ ಕ್ರಮ ಕೈಗೊಳ್ಳಬೇಕಿದೆ’ ಎಂದು ಆಯೋಗವು ತನ್ನ ನೋಟಿಸ್‌ನಲ್ಲಿ ತಿಳಿಸಿದೆ. ತೆಗೆದುಕೊಳ್ಳಲಾದ ಕ್ರಮದ ಕುರಿತು ವಿಸ್ತೃತ ವರದಿಯನ್ನು ಜನವರಿ 16ರ ಒಳಗಾಗಿ ನೀಡುವಂತೆ ಹೇಳಲಾಗಿದೆ. ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್‌ ಅವರು ಇದೇ ವಿಚಾರವಾಗಿ ಬುಧವಾರ ಟ್ವೀಟ್‌ ಮಾಡಿದ್ದರು.’ದೇಶದ ಇಬ್ಬರು ಹಿರಿಯ ಆಟಗಾರರಾದ ವಿರಾಟ್‌ ಕೊಹ್ಲಿ ಮತ್ತು ಧೋನಿ ಅವರ ಮಕ್ಕಳ ಚಿತ್ರಗಳನ್ನು ಟ್ವಿಟರ್‌ನ ಕೆಲವು ಖಾತೆಗಳಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಅಸಭ್ಯವಾಗಿ ಕಾಮೆಂಟ್‌ ಹಾಕಲಾಗುತ್ತಿದೆ. 7 ವರ್ಷ ಮತ್ತು 2 ವರ್ಷದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲವಾಗಿ ಕಾಮೆಂಟ್ ಮಾಡಲಾಗುತ್ತಿದೆ. ನಿಮಗೆ ಆಟಗಾರ ಇಷ್ಟವಾಗದಿದ್ದರೆ, ಅವರ ಹೆಣ್ಣು ಮಕ್ಕಳನ್ನು ನಿಂದಿಸುವಿರಾ? ಎಫ್‌ಐಆರ್‌ ದಾಖಲಿಸುವಂತೆ ಪೊಲೀಸರಿಗೆ ನೋಟಿಸ್‌ ನೀಡಲಾಗಿದೆ’ ಎಂದು ಸ್ವಾತಿ ತಿಳಿಸಿದ್ದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago