ಕ್ರೀಡೆ

ಕ್ರಿಕೆಟಿಗರಾದ ವಿರಾಟ್‌ ಕೊಹ್ಲಿ, ಧೋನಿ ಪತ್ನಿ & ಮಕ್ಕಳ ಕುರಿತು ‘ಸ್ತ್ರೀ ದ್ವೇಷಿ’ ಹೇಳಿಕೆ : FIR ದಾಖಲಿಸುವಂತೆ ಮಹಿಳಾ ಆಯೋಗ ಆಗ್ರಹ

ನವದೆಹಲಿ: ಕ್ರಿಕೆಟಿಗರಾದ ಮಹೇಂದ್ರ ಸಿಂಗ್‌ ಧೋನಿ ಹಾಗೂ ವಿರಾಟ್‌ ಕೊಹ್ಲಿ ಅವರ ಪತ್ನಿ ಮತ್ತು ಮಕ್ಕಳನ್ನು ಗುರಿಯಾಗಿಸಿ ‘ಸ್ತ್ರೀ ದ್ವೇಷಿ’ ಹೇಳಿಕೆಗಳನ್ನು ನೀಡುವವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿ ದೆಹಲಿ ಮಹಿಳಾ ಆಯೋಗವು (ಡಿಸಿಡಬ್ಲ್ಯೂ) ನಗರ ಪೊಲೀಸರಿಗೆ ನೋಟಿಸ್‌ ನೀಡಿದೆ.

ಧೋನಿ ಅವರ 7 ವರ್ಷದ ಮಗಳು ಮತ್ತು ಕೊಹ್ಲಿ ಅವರ ಎರಡು ವರ್ಷದ ಮಗಳನ್ನು ಗುರಿಯಾಗಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಹಂಚಿಕೊಳ್ಳುತ್ತಿರುವವರ ವಿರುದ್ಧ ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

‘ಎರಡೂ ಮಕ್ಕಳು ಮತ್ತು ಅವರ ತಾಯಿಯಂದಿರ ಕುರಿತಂತೆ ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟರ್‌ನಲ್ಲಿ ಹಂಚಿಕೆಯಾಗಿರುವ ಪೋಸ್ಟ್‌ಗಳು ಅಶ್ಲೀಲ, ಸ್ತ್ರೀದ್ವೇಷಿ ಮತ್ತು ನಿಂದನಾತ್ಮಕವಾಗಿವೆ. ಇದು ಅತ್ಯಂತ ಗಂಭೀರ ವಿಷಯವಾಗಿದ್ದು, ತುರ್ತಾಗಿ ಕ್ರಮ ಕೈಗೊಳ್ಳಬೇಕಿದೆ’ ಎಂದು ಆಯೋಗವು ತನ್ನ ನೋಟಿಸ್‌ನಲ್ಲಿ ತಿಳಿಸಿದೆ. ತೆಗೆದುಕೊಳ್ಳಲಾದ ಕ್ರಮದ ಕುರಿತು ವಿಸ್ತೃತ ವರದಿಯನ್ನು ಜನವರಿ 16ರ ಒಳಗಾಗಿ ನೀಡುವಂತೆ ಹೇಳಲಾಗಿದೆ. ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್‌ ಅವರು ಇದೇ ವಿಚಾರವಾಗಿ ಬುಧವಾರ ಟ್ವೀಟ್‌ ಮಾಡಿದ್ದರು.’ದೇಶದ ಇಬ್ಬರು ಹಿರಿಯ ಆಟಗಾರರಾದ ವಿರಾಟ್‌ ಕೊಹ್ಲಿ ಮತ್ತು ಧೋನಿ ಅವರ ಮಕ್ಕಳ ಚಿತ್ರಗಳನ್ನು ಟ್ವಿಟರ್‌ನ ಕೆಲವು ಖಾತೆಗಳಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಅಸಭ್ಯವಾಗಿ ಕಾಮೆಂಟ್‌ ಹಾಕಲಾಗುತ್ತಿದೆ. 7 ವರ್ಷ ಮತ್ತು 2 ವರ್ಷದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲವಾಗಿ ಕಾಮೆಂಟ್ ಮಾಡಲಾಗುತ್ತಿದೆ. ನಿಮಗೆ ಆಟಗಾರ ಇಷ್ಟವಾಗದಿದ್ದರೆ, ಅವರ ಹೆಣ್ಣು ಮಕ್ಕಳನ್ನು ನಿಂದಿಸುವಿರಾ? ಎಫ್‌ಐಆರ್‌ ದಾಖಲಿಸುವಂತೆ ಪೊಲೀಸರಿಗೆ ನೋಟಿಸ್‌ ನೀಡಲಾಗಿದೆ’ ಎಂದು ಸ್ವಾತಿ ತಿಳಿಸಿದ್ದರು.

andolanait

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

5 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

18 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

20 hours ago