ಪ್ಯಾರಿಸ್: ಭಾರತದ ವೆಯ್ಟ್ ಲಿಫ್ಟಿಂಗ್ ತಾರೆ ಮೀರಾಬಾಯಿ ಚಾನು ಸತತ ಎರಡನೇ ಭಾರಿ ಒಲಿಂಪಿಕ್ಸ್ ಕ್ರೀಡಾ ಕೂಟದಲ್ಲಿ ಪದಕ ಪಡೆಯುವ ಅವಕಾಶವನ್ನು ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡರು.
ಕಳೆದ ಬಾರಿಯ ಟೋಕಿಯೊ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಮೀರಾಬಾಯಿ ಚಾನು ಈ ಬಾರಿ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 199 ಕೆಜಿ ಭಾರ ಎತ್ತುವ ಮೂಲಕ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಚಾನು ಕೇವಲ ಒಂದು ಕೆಜಿ ಅಂತರದಲ್ಲಿ ಮೂರನೇ ಸ್ಥಾನವನ್ನು ಕಳೆದುಕೊಂಡಿದ್ದು ಭಾರತದ ಪದಕದ ನಿರೀಕ್ಷೆ ಭಗ್ನಗೊಂಡಿದೆ.
ಚೀನಾದ ಜಿಹುಯಿ ಹೌ ಅವರು 206 ಕೆಜಿ ತೂಕ ಎತ್ತಿ ಮತ್ತೊಮ್ಮೆ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು. ಉಳಿದಂತೆ ರೊಮೇನಿಯಾದ ಮಿಹೇಲಾ ವೆಲೆಂಟಿನಾ 205 ಕೆಜಿ ತೂಕ ಎತ್ತಿ ಬೆಳ್ಳಿ ಪದಕ ಪಡೆದರು. ಇನ್ನು ಪದಕ ಕೈತಪ್ಪಿದಕ್ಕೆ ವಿಷಾದ ವ್ಯಕ್ತಪಡಿಸಿರುವ ಮೀರಾಬಾಯಿ ಚಾನು, ಮುಂದಿನ ಬಾರಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುಟ್ಟಿನ ನೋವಿನಿಂದ ಬಳಲುತ್ತಿದ್ದೆ
ಪ್ಯಾರಿಸ್ ಒಲಿಂಪಿಕ್ಸ್ ರೇಸ್ನಿಂದ ಔಟ್ ಆದ ಬಳಿಕ ಮಾತನಾಡಿರುವ ಚಾನು, ವೇಟ್ ಲಿಫ್ಟಿಂಗ್ ವೇಳೆ ಮುಟ್ಟಿನ ನೋವಿನಿಂದ ಬಳಲುತ್ತಿದ್ದೆ. ಇದು ನನ್ನ ಮೂರನೇ ದಿನವಾಗಿತ್ತು. ಹೀಗಾಗಿ ಅದು ನನ್ನ ಆಟದ ಮೇಲೆ ಪರಿಣಾಮ ಬೀರಿತ್ತು ಎಂದು ಹೇಳಿದ್ದಾರೆ.
ಮಹಿಳಾ ಆಟಗಾರ್ತಿಯರಿಗೆ ಏನದರೊಂದು ಸಮಸ್ಯೆ ಕಾಡುತ್ತಲೇ ಇರುತ್ತದೆ. ಒಮ್ಮೆ ಗಾಯಗಳಿಂದ ಇನ್ನೊಮ್ಮೆ ಮಹಿಳೆಯರ ವೈಯಕ್ತಿಕ ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ ಎಂದಿದ್ದಾರೆ.
ಪದಕ ಗೆಲ್ಲಲು ನಾನು ಕೈಲಾದಷ್ಟು ಪ್ರಯತ್ನಿಸಿದೆ ಆದರೆ, ನನ್ನ ಅದೃಷ್ಟ ಸರಿ ಇರಲಿಲ್ಲ. ಮುಂದಿನ ಬಾರಿ ದೇಶಕ್ಕಾಗಿ ಪದಕ ಗೆಲ್ಲಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…