ಪ್ಯಾರಿಸ್: ಭಾರತದ ವೆಯ್ಟ್ ಲಿಫ್ಟಿಂಗ್ ತಾರೆ ಮೀರಾಬಾಯಿ ಚಾನು ಸತತ ಎರಡನೇ ಭಾರಿ ಒಲಿಂಪಿಕ್ಸ್ ಕ್ರೀಡಾ ಕೂಟದಲ್ಲಿ ಪದಕ ಪಡೆಯುವ ಅವಕಾಶವನ್ನು ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡರು.
ಕಳೆದ ಬಾರಿಯ ಟೋಕಿಯೊ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಮೀರಾಬಾಯಿ ಚಾನು ಈ ಬಾರಿ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 199 ಕೆಜಿ ಭಾರ ಎತ್ತುವ ಮೂಲಕ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಚಾನು ಕೇವಲ ಒಂದು ಕೆಜಿ ಅಂತರದಲ್ಲಿ ಮೂರನೇ ಸ್ಥಾನವನ್ನು ಕಳೆದುಕೊಂಡಿದ್ದು ಭಾರತದ ಪದಕದ ನಿರೀಕ್ಷೆ ಭಗ್ನಗೊಂಡಿದೆ.
ಚೀನಾದ ಜಿಹುಯಿ ಹೌ ಅವರು 206 ಕೆಜಿ ತೂಕ ಎತ್ತಿ ಮತ್ತೊಮ್ಮೆ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು. ಉಳಿದಂತೆ ರೊಮೇನಿಯಾದ ಮಿಹೇಲಾ ವೆಲೆಂಟಿನಾ 205 ಕೆಜಿ ತೂಕ ಎತ್ತಿ ಬೆಳ್ಳಿ ಪದಕ ಪಡೆದರು. ಇನ್ನು ಪದಕ ಕೈತಪ್ಪಿದಕ್ಕೆ ವಿಷಾದ ವ್ಯಕ್ತಪಡಿಸಿರುವ ಮೀರಾಬಾಯಿ ಚಾನು, ಮುಂದಿನ ಬಾರಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುಟ್ಟಿನ ನೋವಿನಿಂದ ಬಳಲುತ್ತಿದ್ದೆ
ಪ್ಯಾರಿಸ್ ಒಲಿಂಪಿಕ್ಸ್ ರೇಸ್ನಿಂದ ಔಟ್ ಆದ ಬಳಿಕ ಮಾತನಾಡಿರುವ ಚಾನು, ವೇಟ್ ಲಿಫ್ಟಿಂಗ್ ವೇಳೆ ಮುಟ್ಟಿನ ನೋವಿನಿಂದ ಬಳಲುತ್ತಿದ್ದೆ. ಇದು ನನ್ನ ಮೂರನೇ ದಿನವಾಗಿತ್ತು. ಹೀಗಾಗಿ ಅದು ನನ್ನ ಆಟದ ಮೇಲೆ ಪರಿಣಾಮ ಬೀರಿತ್ತು ಎಂದು ಹೇಳಿದ್ದಾರೆ.
ಮಹಿಳಾ ಆಟಗಾರ್ತಿಯರಿಗೆ ಏನದರೊಂದು ಸಮಸ್ಯೆ ಕಾಡುತ್ತಲೇ ಇರುತ್ತದೆ. ಒಮ್ಮೆ ಗಾಯಗಳಿಂದ ಇನ್ನೊಮ್ಮೆ ಮಹಿಳೆಯರ ವೈಯಕ್ತಿಕ ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ ಎಂದಿದ್ದಾರೆ.
ಪದಕ ಗೆಲ್ಲಲು ನಾನು ಕೈಲಾದಷ್ಟು ಪ್ರಯತ್ನಿಸಿದೆ ಆದರೆ, ನನ್ನ ಅದೃಷ್ಟ ಸರಿ ಇರಲಿಲ್ಲ. ಮುಂದಿನ ಬಾರಿ ದೇಶಕ್ಕಾಗಿ ಪದಕ ಗೆಲ್ಲಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…