ಕ್ರೀಡೆ

ಕೈತಪ್ಪಿದ ಪದಕ: ಕಾರಣ ವಿವರಿಸಿದ ಮೀರಾಬಾಯಿ ಚಾನು

ಪ್ಯಾರಿಸ್:‌ ಭಾರತದ ವೆಯ್ಟ್‌ ಲಿಫ್ಟಿಂಗ್‌ ತಾರೆ ಮೀರಾಬಾಯಿ ಚಾನು ಸತತ ಎರಡನೇ ಭಾರಿ ಒಲಿಂಪಿಕ್ಸ್‌ ಕ್ರೀಡಾ ಕೂಟದಲ್ಲಿ ಪದಕ ಪಡೆಯುವ ಅವಕಾಶವನ್ನು ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡರು.

ಕಳೆದ ಬಾರಿಯ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಮೀರಾಬಾಯಿ ಚಾನು ಈ ಬಾರಿ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ 199 ಕೆಜಿ ಭಾರ ಎತ್ತುವ ಮೂಲಕ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಚಾನು ಕೇವಲ ಒಂದು ಕೆಜಿ ಅಂತರದಲ್ಲಿ ಮೂರನೇ ಸ್ಥಾನವನ್ನು ಕಳೆದುಕೊಂಡಿದ್ದು ಭಾರತದ ಪದಕದ ನಿರೀಕ್ಷೆ ಭಗ್ನಗೊಂಡಿದೆ.

ಚೀನಾದ ಜಿಹುಯಿ ಹೌ ಅವರು 206 ಕೆಜಿ ತೂಕ ಎತ್ತಿ ಮತ್ತೊಮ್ಮೆ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು. ಉಳಿದಂತೆ ರೊಮೇನಿಯಾದ ಮಿಹೇಲಾ ವೆಲೆಂಟಿನಾ 205 ಕೆಜಿ ತೂಕ ಎತ್ತಿ ಬೆಳ್ಳಿ ಪದಕ ಪಡೆದರು. ಇನ್ನು ಪದಕ ಕೈತಪ್ಪಿದಕ್ಕೆ ವಿಷಾದ ವ್ಯಕ್ತಪಡಿಸಿರುವ ಮೀರಾಬಾಯಿ ಚಾನು, ಮುಂದಿನ ಬಾರಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಟ್ಟಿನ ನೋವಿನಿಂದ ಬಳಲುತ್ತಿದ್ದೆ
ಪ್ಯಾರಿಸ್‌ ಒಲಿಂಪಿಕ್ಸ್‌ ರೇಸ್‌ನಿಂದ ಔಟ್‌ ಆದ ಬಳಿಕ ಮಾತನಾಡಿರುವ ಚಾನು, ವೇಟ್‌ ಲಿಫ್ಟಿಂಗ್‌ ವೇಳೆ ಮುಟ್ಟಿನ ನೋವಿನಿಂದ ಬಳಲುತ್ತಿದ್ದೆ. ಇದು ನನ್ನ ಮೂರನೇ ದಿನವಾಗಿತ್ತು. ಹೀಗಾಗಿ ಅದು ನನ್ನ ಆಟದ ಮೇಲೆ ಪರಿಣಾಮ ಬೀರಿತ್ತು ಎಂದು ಹೇಳಿದ್ದಾರೆ.

ಮಹಿಳಾ ಆಟಗಾರ್ತಿಯರಿಗೆ ಏನದರೊಂದು ಸಮಸ್ಯೆ ಕಾಡುತ್ತಲೇ ಇರುತ್ತದೆ. ಒಮ್ಮೆ ಗಾಯಗಳಿಂದ ಇನ್ನೊಮ್ಮೆ ಮಹಿಳೆಯರ ವೈಯಕ್ತಿಕ ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ ಎಂದಿದ್ದಾರೆ.

ಪದಕ ಗೆಲ್ಲಲು ನಾನು ಕೈಲಾದಷ್ಟು ಪ್ರಯತ್ನಿಸಿದೆ ಆದರೆ, ನನ್ನ ಅದೃಷ್ಟ ಸರಿ ಇರಲಿಲ್ಲ. ಮುಂದಿನ ಬಾರಿ ದೇಶಕ್ಕಾಗಿ ಪದಕ ಗೆಲ್ಲಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

2 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

3 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

5 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

6 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

7 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

7 hours ago