Categories: ಕ್ರೀಡೆ

ವರ್ಷದ ಬಳಿಕ ಕಮ್‌ಬ್ಯಾಕ್‌ ಮಾಡಿದ ಮಹಮ್ಮದ್ ಶಮಿ

ಮಧ್ಯಪ್ರದೇಶ: ವಿಶ್ವ ಕಪ್‌ ನಂತರ ಗಾಯಗೊಂಡು ಮೈದಾನದಿಂದ ಹೊರಗುಳಿದಿದ್ದ ಶಮಿ ವರ್ಷದ ಬಳಿಕ ರಣಜಿ ಪಂದ್ಯದಲ್ಲಿ ಮಿಂಚಿದ್ದಾರೆ. ಈ ಮೂಲಕ ತಮ್ಮ ಫಿಟ್‌ನೆಸ್‌ ಸಾಬೀತು ಮಾಡಿರುವ ಇವರು ಆಸ್ಟ್ರೇಲಿಯಾದ ಸರಣಿಗೆ ಆಯ್ಕೆಯಾಗುವ ಸಾಧ್ಯತೆ ಇದೆ.

ಇಂದೋರ್‌ನ ಹೋಲ್ಕರ್‌ ಸ್ಟೇಡಿಯಂನಲ್ಲಿ ನಡೆದ ರಣಜಿ ಪಂದ್ಯದಲ್ಲಿ ಬಂಗಾಳ ಪರವಾಗಿ ಆಡಿದ ಮಹಮ್ಮದ್‌ ಶಮಿ ಒಟ್ಟು 7 ವಿಕೆಟ್‌ ಕಬಳಿಸುವ ಮೂಲಕ ಬಂಗಾಳಕ್ಕೆ ಜಯದ ಕಾಣಿಕೆ ನೀಡಿದರು.

ಮಧ್ಯಪ್ರದೇಶ ತಂಡದ ವಿರುದ್ಧ ನಡೆದ ರಣಜಿ ಪಂದ್ಯದಲ್ಲಿ ಬಂಗಾಳ ಮೊದಲ ಇನ್ನಿಂಗ್ಸ್‌ನಲ್ಲಿ 228 ರನ್‌ ಕಲೆಹಾಕಿತ್ತು. ನಂತರ ಬ್ಯಾಟ್‌ ಬೀಸಿದ ಮಧ್ಯ ಪ್ರದೇಶ ತಂಡಕ್ಕೆ ಮಾರಕವಾಗಿ ಪರಿಣಮಿಸಿದ ಶಮಿ ಬಂಗಾಳದ ಪರ 4 ವಿಕೆಟ್‌ ಕಬಳಿಸಿದರು. ಮಧ್ಯಪ್ರದೇಶ ತಂಡವು 167 ರನ್‌ಗಳಿಗೆ ಆಲೌಟ್‌ ಆಯಿತು.

ದ್ವಿತೀಯ ಇನ್ನಿಂಗ್ಸ್‌ನಲ್ಲಿ 226 ರನ್‌ ಕಲೆಹಾಕಿದ ಬಂಗಾಳ, ಮಧ್ಯಪ್ರದೇಶ ತಂಡಕ್ಕೆ 338 ರನ್‌ಗಳ ಗುರಿ ನೀಡಿದರು.

ಬಂಗಾಳ ನೀಡಿದ ಗುರಿಗೆ ಪ್ರತ್ಯುತ್ತರವಾಗಿ ಮಧ್ಯಪ್ರದೇಶ ತಂಡ ಆರಂಭದಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ಆದರೆ ಶಹಬಾಜ್‌ ಅಹ್ಮದ್‌ ಹಾಗೂ ಮಹಮದ್‌ ಶಮಿ ಅವರ ಅನುಭವ ಬೌಲಿಂಗ್‌ ಮುಂದೆ 326 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಬಂಗಾಳದ ಮುಂದೆ ಸೋಲೊಪ್ಪಿಕೊಂಡರು.

ತಂಡದ ಗೆಲುವಿನ ರೂವಾರಿಯಾದ ಮಹಮ್ಮದ್‌ ಶಮಿ ಈ ಪಂದ್ಯದಲ್ಲಿ 44 ಓವರ್‌ಗಳಿಗೆ 156 ರನ್‌ ನೀಡಿ 7 ವಿಕೆಟ್‌ ಕಬಳಿಸಿದರು ಹಾಗೂ ಬ್ಯಾಟಿಂಗ್‌ನಲ್ಲೂ ಮಿಂಚಿದ ಶಮಿ 37ರನ್‌ ಬಾರಿಸುವ ಮೂಲಕ ತಂಡದ ಗೆಲುವಿಗೆ ಕಾಣಿಕೆ ನೀಡಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾನ್ಫಿಡೆಂಟ್ ಮಾಲೀಕನಿಗೆ ಬದುಕುವ ಕಾನ್ಫಿಡೆಂಟ್ ಇಲ್ಲದಾಯಿತೇ?

ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…

1 hour ago

ಓದುಗರ ಪತ್ರ: ಗಬ್ಬು ನಾರುತ್ತಿರುವ ಚಾ.ನಗರದ ಮೋರಿಗಳು

ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ…

1 hour ago

ಓದುಗರ ಪತ್ರ: ಡಾ.ಜಯಮಾಲ ಅವರಿಗೆ ಅಭಿನಂದನೆಗಳು

ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು…

1 hour ago

ಓದುಗರ ಪತ್ರ: ಕಸಾಪ ಗೌರವಕ್ಕೆ ಚ್ಯುತಿ ತಂದ ಜೋಶಿ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ…

1 hour ago

ಫೆ.೫ರಂದು ಶ್ರೀ ಶಂಭುಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ  ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…

4 hours ago

ಬಿಪಿಎಲ್ ಕಾರ್ಡ್ ಇಲ್ಲದಿದ್ದರೆ ಜಿಲ್ಲಾಸ್ಪತ್ರೆ ದುಬಾರಿ!

ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …

4 hours ago