Categories: ಕ್ರೀಡೆ

ವರ್ಷದ ಬಳಿಕ ಕಮ್‌ಬ್ಯಾಕ್‌ ಮಾಡಿದ ಮಹಮ್ಮದ್ ಶಮಿ

ಮಧ್ಯಪ್ರದೇಶ: ವಿಶ್ವ ಕಪ್‌ ನಂತರ ಗಾಯಗೊಂಡು ಮೈದಾನದಿಂದ ಹೊರಗುಳಿದಿದ್ದ ಶಮಿ ವರ್ಷದ ಬಳಿಕ ರಣಜಿ ಪಂದ್ಯದಲ್ಲಿ ಮಿಂಚಿದ್ದಾರೆ. ಈ ಮೂಲಕ ತಮ್ಮ ಫಿಟ್‌ನೆಸ್‌ ಸಾಬೀತು ಮಾಡಿರುವ ಇವರು ಆಸ್ಟ್ರೇಲಿಯಾದ ಸರಣಿಗೆ ಆಯ್ಕೆಯಾಗುವ ಸಾಧ್ಯತೆ ಇದೆ.

ಇಂದೋರ್‌ನ ಹೋಲ್ಕರ್‌ ಸ್ಟೇಡಿಯಂನಲ್ಲಿ ನಡೆದ ರಣಜಿ ಪಂದ್ಯದಲ್ಲಿ ಬಂಗಾಳ ಪರವಾಗಿ ಆಡಿದ ಮಹಮ್ಮದ್‌ ಶಮಿ ಒಟ್ಟು 7 ವಿಕೆಟ್‌ ಕಬಳಿಸುವ ಮೂಲಕ ಬಂಗಾಳಕ್ಕೆ ಜಯದ ಕಾಣಿಕೆ ನೀಡಿದರು.

ಮಧ್ಯಪ್ರದೇಶ ತಂಡದ ವಿರುದ್ಧ ನಡೆದ ರಣಜಿ ಪಂದ್ಯದಲ್ಲಿ ಬಂಗಾಳ ಮೊದಲ ಇನ್ನಿಂಗ್ಸ್‌ನಲ್ಲಿ 228 ರನ್‌ ಕಲೆಹಾಕಿತ್ತು. ನಂತರ ಬ್ಯಾಟ್‌ ಬೀಸಿದ ಮಧ್ಯ ಪ್ರದೇಶ ತಂಡಕ್ಕೆ ಮಾರಕವಾಗಿ ಪರಿಣಮಿಸಿದ ಶಮಿ ಬಂಗಾಳದ ಪರ 4 ವಿಕೆಟ್‌ ಕಬಳಿಸಿದರು. ಮಧ್ಯಪ್ರದೇಶ ತಂಡವು 167 ರನ್‌ಗಳಿಗೆ ಆಲೌಟ್‌ ಆಯಿತು.

ದ್ವಿತೀಯ ಇನ್ನಿಂಗ್ಸ್‌ನಲ್ಲಿ 226 ರನ್‌ ಕಲೆಹಾಕಿದ ಬಂಗಾಳ, ಮಧ್ಯಪ್ರದೇಶ ತಂಡಕ್ಕೆ 338 ರನ್‌ಗಳ ಗುರಿ ನೀಡಿದರು.

ಬಂಗಾಳ ನೀಡಿದ ಗುರಿಗೆ ಪ್ರತ್ಯುತ್ತರವಾಗಿ ಮಧ್ಯಪ್ರದೇಶ ತಂಡ ಆರಂಭದಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ಆದರೆ ಶಹಬಾಜ್‌ ಅಹ್ಮದ್‌ ಹಾಗೂ ಮಹಮದ್‌ ಶಮಿ ಅವರ ಅನುಭವ ಬೌಲಿಂಗ್‌ ಮುಂದೆ 326 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಬಂಗಾಳದ ಮುಂದೆ ಸೋಲೊಪ್ಪಿಕೊಂಡರು.

ತಂಡದ ಗೆಲುವಿನ ರೂವಾರಿಯಾದ ಮಹಮ್ಮದ್‌ ಶಮಿ ಈ ಪಂದ್ಯದಲ್ಲಿ 44 ಓವರ್‌ಗಳಿಗೆ 156 ರನ್‌ ನೀಡಿ 7 ವಿಕೆಟ್‌ ಕಬಳಿಸಿದರು ಹಾಗೂ ಬ್ಯಾಟಿಂಗ್‌ನಲ್ಲೂ ಮಿಂಚಿದ ಶಮಿ 37ರನ್‌ ಬಾರಿಸುವ ಮೂಲಕ ತಂಡದ ಗೆಲುವಿಗೆ ಕಾಣಿಕೆ ನೀಡಿದ್ದರು.

ಆಂದೋಲನ ಡೆಸ್ಕ್

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

12 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

12 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

12 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

13 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

13 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

13 hours ago