Categories: ಕ್ರೀಡೆ

ವರ್ಷದ ಬಳಿಕ ಕಮ್‌ಬ್ಯಾಕ್‌ ಮಾಡಿದ ಮಹಮ್ಮದ್ ಶಮಿ

ಮಧ್ಯಪ್ರದೇಶ: ವಿಶ್ವ ಕಪ್‌ ನಂತರ ಗಾಯಗೊಂಡು ಮೈದಾನದಿಂದ ಹೊರಗುಳಿದಿದ್ದ ಶಮಿ ವರ್ಷದ ಬಳಿಕ ರಣಜಿ ಪಂದ್ಯದಲ್ಲಿ ಮಿಂಚಿದ್ದಾರೆ. ಈ ಮೂಲಕ ತಮ್ಮ ಫಿಟ್‌ನೆಸ್‌ ಸಾಬೀತು ಮಾಡಿರುವ ಇವರು ಆಸ್ಟ್ರೇಲಿಯಾದ ಸರಣಿಗೆ ಆಯ್ಕೆಯಾಗುವ ಸಾಧ್ಯತೆ ಇದೆ.

ಇಂದೋರ್‌ನ ಹೋಲ್ಕರ್‌ ಸ್ಟೇಡಿಯಂನಲ್ಲಿ ನಡೆದ ರಣಜಿ ಪಂದ್ಯದಲ್ಲಿ ಬಂಗಾಳ ಪರವಾಗಿ ಆಡಿದ ಮಹಮ್ಮದ್‌ ಶಮಿ ಒಟ್ಟು 7 ವಿಕೆಟ್‌ ಕಬಳಿಸುವ ಮೂಲಕ ಬಂಗಾಳಕ್ಕೆ ಜಯದ ಕಾಣಿಕೆ ನೀಡಿದರು.

ಮಧ್ಯಪ್ರದೇಶ ತಂಡದ ವಿರುದ್ಧ ನಡೆದ ರಣಜಿ ಪಂದ್ಯದಲ್ಲಿ ಬಂಗಾಳ ಮೊದಲ ಇನ್ನಿಂಗ್ಸ್‌ನಲ್ಲಿ 228 ರನ್‌ ಕಲೆಹಾಕಿತ್ತು. ನಂತರ ಬ್ಯಾಟ್‌ ಬೀಸಿದ ಮಧ್ಯ ಪ್ರದೇಶ ತಂಡಕ್ಕೆ ಮಾರಕವಾಗಿ ಪರಿಣಮಿಸಿದ ಶಮಿ ಬಂಗಾಳದ ಪರ 4 ವಿಕೆಟ್‌ ಕಬಳಿಸಿದರು. ಮಧ್ಯಪ್ರದೇಶ ತಂಡವು 167 ರನ್‌ಗಳಿಗೆ ಆಲೌಟ್‌ ಆಯಿತು.

ದ್ವಿತೀಯ ಇನ್ನಿಂಗ್ಸ್‌ನಲ್ಲಿ 226 ರನ್‌ ಕಲೆಹಾಕಿದ ಬಂಗಾಳ, ಮಧ್ಯಪ್ರದೇಶ ತಂಡಕ್ಕೆ 338 ರನ್‌ಗಳ ಗುರಿ ನೀಡಿದರು.

ಬಂಗಾಳ ನೀಡಿದ ಗುರಿಗೆ ಪ್ರತ್ಯುತ್ತರವಾಗಿ ಮಧ್ಯಪ್ರದೇಶ ತಂಡ ಆರಂಭದಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ಆದರೆ ಶಹಬಾಜ್‌ ಅಹ್ಮದ್‌ ಹಾಗೂ ಮಹಮದ್‌ ಶಮಿ ಅವರ ಅನುಭವ ಬೌಲಿಂಗ್‌ ಮುಂದೆ 326 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಬಂಗಾಳದ ಮುಂದೆ ಸೋಲೊಪ್ಪಿಕೊಂಡರು.

ತಂಡದ ಗೆಲುವಿನ ರೂವಾರಿಯಾದ ಮಹಮ್ಮದ್‌ ಶಮಿ ಈ ಪಂದ್ಯದಲ್ಲಿ 44 ಓವರ್‌ಗಳಿಗೆ 156 ರನ್‌ ನೀಡಿ 7 ವಿಕೆಟ್‌ ಕಬಳಿಸಿದರು ಹಾಗೂ ಬ್ಯಾಟಿಂಗ್‌ನಲ್ಲೂ ಮಿಂಚಿದ ಶಮಿ 37ರನ್‌ ಬಾರಿಸುವ ಮೂಲಕ ತಂಡದ ಗೆಲುವಿಗೆ ಕಾಣಿಕೆ ನೀಡಿದ್ದರು.

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

3 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

3 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

16 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

17 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

17 hours ago