ಕ್ರೀಡೆ

ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನವೇ 6 ಲಕ್ಷಕ್ಕೂ ಅಧಿಕ ಟಿಕೆಟ್‌ ಮಾರಾಟ

ಮೆಲ್ಬೊರ್ನ್‌ : ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 16ರಿಂದ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಟೂರ್ನಿಗೆ ಚಾಲನೆ ಸಿಗಲಿದ್ದು, ಈಗಾಗಲೇ 6 ಲಕ್ಷಕ್ಕೂ ಅಧಿಕ ಟಿಕೆಟ್‌ಗಳು ಸೋಲ್ಡೌಟ್‌ ಆಗಿವೆ. ಈ ಕುರಿತಂತೆ ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಹಲವು ಹೈವೋಲ್ಟೇಜ್ ಪಂದ್ಯಗಳ ಎಲ್ಲಾ ಟಿಕೆಟ್‌ಗಳು ಸೋಲ್ಡೌಟ್ ಆಗಿವೆ.

ಚುಟುಕು ಕ್ರಿಕೆಟ್ ಮಹಾಸಂಗ್ರಾಮವು ಇದೇ ಭಾನುವಾರದಿಂದ ಆರಂಭವಾಗಲಿದ್ದು, ಮೊದಲ ಹಂತದಲ್ಲಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿವೆ. ಅರ್ಹತಾ ಸುತ್ತಿನಲ್ಲಿ ಅಗ್ರ 4 ಸ್ಥಾನ ಪಡೆಯುವ ತಂಡಗಳು ಸೂಪರ್ 12 ಹಂತಕ್ಕೆ ಲಗ್ಗೆಯಿಡಲಿವೆ. ಸೂಪರ್ 12 ಹಂತದ ಪಂದ್ಯಗಳು ಅಕ್ಟೋಬರ್ 22ರಿಂದ ಆರಂಭವಾಗಲಿದೆ. ಆಸ್ಟ್ರೇಲಿಯಾದ ಏಳು ನಗರಗಳಲ್ಲಿ ಟಿ20 ವಿಶ್ವಕಪ್ ಪಂದ್ಯಾವಳಿಗಳು ಜರುಗಲಿವೆ. ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವು ಮೊದಲ ಪಂದ್ಯದಲ್ಲಿ ರನ್ನರ್‌ ಅಪ್‌ ನ್ಯೂಜಿಲೆಂಡ್ ಎದುರು ಮೊದಲ ಪಂದ್ಯವನ್ನಾಡಲಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಸಿಡ್ನಿ ಕ್ರಿಕೆಟ್ ಗ್ರೌಂಡ್ ಆತಿಥ್ಯವನ್ನು ವಹಿಸಲಿದೆ.

ಇನ್ನು ಅಕ್ಟೋಬರ್ 23ರಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಮೆಲ್ಬೊರ್ನ್‌ ಕ್ರಿಕೆಟ್ ಮೈದಾನ ಆತಿಥ್ಯವನ್ನು ವಹಿಸಲಿದೆ. ಈ ಪಂದ್ಯದ ಎಲ್ಲಾ 90,000 ಸಾವಿರ ಟಿಕೆಟ್‌ಗಳು ಈಗಾಗಲೇ ಸೋಲ್ಡೌಟ್ ಆಗಿವೆ. ಇನ್ನು ಹೆಚ್ಚುವರಿ ಸ್ಟ್ಯಾಂಡಿಂಗ್ ರೂಮ್‌ನ ಟಿಕೆಟ್‌ಗಳು ಮಾರಾಟಕ್ಕಿಟ್ಟ 10 ನಿಮಿಷಗಳಲ್ಲೇ ಎಲ್ಲಾ ಟಿಕೆಟ್‌ಗಳು ಸೋಲ್ಡೌಟ್ ಆಗಿವೆ.

ಇನ್ನು ಅಕ್ಟೋಬರ್ 16ರಂದು ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ನಮೀಬಿಯಾ ತಂಡಗಳು ಮುಖಾಮುಖಿಯಾಗಲಿದ್ದು, ಗೀಲಾಂಗ್‌ನಲ್ಲಿ ನಡೆಯಲಿರುವ ಪಂದ್ಯದ ಕೆಲವೇ ಕೆಲವು ಟಿಕೆಟ್‌ಗಳು ಲಭ್ಯವಿವೆ. ಗೀಲಾಂಡ್‌ನ ಕಾರ್ಡಿನಿಯಾ ಪಾರ್ಕ್‌ ಸ್ಟೇಡಿಯಂ ವೀಕ್ಷಕರ ಕೆಪಾಸಿಟಿ 36,000 ಇದೆ. ಇದಾದ ಬಳಿಕ ಎರಡನೇ ಪಂದ್ಯದಲ್ಲಿ ಇದೇ ಮೈದಾನದಲ್ಲಿ ನೆದರ್ಲೆಂಡ್‌ ಹಾಗೂ ಯುಎಇ ತಂಡಗಳು ಸೆಣಸಾಡಲಿವೆ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಸೂಪರ್ ಹಂತಕ್ಕೆ ಈಗಾಗಲೇ 8 ತಂಡಗಳು ನೇರ ಅರ್ಹತೆಯನ್ನು ಪಡೆದಿವೆ. ಇನ್ನುಳಿದ ಎಂಟು ತಂಡಗಳ ಪೈಕಿ 4 ತಂಡಗಳು ಅರ್ಹತಾ ಸುತ್ತಿನ ಪಂದ್ಯಗಳನ್ನಾಡಿ ಸೂಪರ್ 12 ಹಂತಕ್ಕೆ ಪ್ರವೇಶ ಪಡೆಯಲಿವೆ. ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ಹಾಗೂ ಒಮ್ಮೆ ಚಾಂಪಿಯನ್ ಅಗಿರುವ ಶ್ರೀಲಂಕಾ ತಂಡ ಕೂಡಾ ಈ ಬಾರಿ ಅರ್ಹತಾ ಸುತ್ತಿನಲ್ಲಿ ಸೆಣಸಾಟ ನಡೆಸಲಿವೆ. ಇನ್ನು ಈ ಬಾರಿ ಟೀಂ ಇಂಡಿಯಾ, ಇಂಗ್ಲೆಂಡ್, ಪಾಕಿಸ್ತಾನ, ಆತಿಥೇಯ ಆಸ್ಟ್ರೇಲಿಯಾ ಈ ಬಾರಿ ಟಿ20 ವಿಶ್ವಕಪ್ ಗೆಲ್ಲಬಲ್ಲ ನೆಚ್ಚಿನ ತಂಡಗಳಾಗಿ ಗುರುತಿಸಿಕೊಂಡಿವೆ.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago