ಕ್ರೀಡೆ

ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನವೇ 6 ಲಕ್ಷಕ್ಕೂ ಅಧಿಕ ಟಿಕೆಟ್‌ ಮಾರಾಟ

ಮೆಲ್ಬೊರ್ನ್‌ : ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 16ರಿಂದ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಟೂರ್ನಿಗೆ ಚಾಲನೆ ಸಿಗಲಿದ್ದು, ಈಗಾಗಲೇ 6 ಲಕ್ಷಕ್ಕೂ ಅಧಿಕ ಟಿಕೆಟ್‌ಗಳು ಸೋಲ್ಡೌಟ್‌ ಆಗಿವೆ. ಈ ಕುರಿತಂತೆ ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಹಲವು ಹೈವೋಲ್ಟೇಜ್ ಪಂದ್ಯಗಳ ಎಲ್ಲಾ ಟಿಕೆಟ್‌ಗಳು ಸೋಲ್ಡೌಟ್ ಆಗಿವೆ.

ಚುಟುಕು ಕ್ರಿಕೆಟ್ ಮಹಾಸಂಗ್ರಾಮವು ಇದೇ ಭಾನುವಾರದಿಂದ ಆರಂಭವಾಗಲಿದ್ದು, ಮೊದಲ ಹಂತದಲ್ಲಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿವೆ. ಅರ್ಹತಾ ಸುತ್ತಿನಲ್ಲಿ ಅಗ್ರ 4 ಸ್ಥಾನ ಪಡೆಯುವ ತಂಡಗಳು ಸೂಪರ್ 12 ಹಂತಕ್ಕೆ ಲಗ್ಗೆಯಿಡಲಿವೆ. ಸೂಪರ್ 12 ಹಂತದ ಪಂದ್ಯಗಳು ಅಕ್ಟೋಬರ್ 22ರಿಂದ ಆರಂಭವಾಗಲಿದೆ. ಆಸ್ಟ್ರೇಲಿಯಾದ ಏಳು ನಗರಗಳಲ್ಲಿ ಟಿ20 ವಿಶ್ವಕಪ್ ಪಂದ್ಯಾವಳಿಗಳು ಜರುಗಲಿವೆ. ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವು ಮೊದಲ ಪಂದ್ಯದಲ್ಲಿ ರನ್ನರ್‌ ಅಪ್‌ ನ್ಯೂಜಿಲೆಂಡ್ ಎದುರು ಮೊದಲ ಪಂದ್ಯವನ್ನಾಡಲಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಸಿಡ್ನಿ ಕ್ರಿಕೆಟ್ ಗ್ರೌಂಡ್ ಆತಿಥ್ಯವನ್ನು ವಹಿಸಲಿದೆ.

ಇನ್ನು ಅಕ್ಟೋಬರ್ 23ರಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಮೆಲ್ಬೊರ್ನ್‌ ಕ್ರಿಕೆಟ್ ಮೈದಾನ ಆತಿಥ್ಯವನ್ನು ವಹಿಸಲಿದೆ. ಈ ಪಂದ್ಯದ ಎಲ್ಲಾ 90,000 ಸಾವಿರ ಟಿಕೆಟ್‌ಗಳು ಈಗಾಗಲೇ ಸೋಲ್ಡೌಟ್ ಆಗಿವೆ. ಇನ್ನು ಹೆಚ್ಚುವರಿ ಸ್ಟ್ಯಾಂಡಿಂಗ್ ರೂಮ್‌ನ ಟಿಕೆಟ್‌ಗಳು ಮಾರಾಟಕ್ಕಿಟ್ಟ 10 ನಿಮಿಷಗಳಲ್ಲೇ ಎಲ್ಲಾ ಟಿಕೆಟ್‌ಗಳು ಸೋಲ್ಡೌಟ್ ಆಗಿವೆ.

ಇನ್ನು ಅಕ್ಟೋಬರ್ 16ರಂದು ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ನಮೀಬಿಯಾ ತಂಡಗಳು ಮುಖಾಮುಖಿಯಾಗಲಿದ್ದು, ಗೀಲಾಂಗ್‌ನಲ್ಲಿ ನಡೆಯಲಿರುವ ಪಂದ್ಯದ ಕೆಲವೇ ಕೆಲವು ಟಿಕೆಟ್‌ಗಳು ಲಭ್ಯವಿವೆ. ಗೀಲಾಂಡ್‌ನ ಕಾರ್ಡಿನಿಯಾ ಪಾರ್ಕ್‌ ಸ್ಟೇಡಿಯಂ ವೀಕ್ಷಕರ ಕೆಪಾಸಿಟಿ 36,000 ಇದೆ. ಇದಾದ ಬಳಿಕ ಎರಡನೇ ಪಂದ್ಯದಲ್ಲಿ ಇದೇ ಮೈದಾನದಲ್ಲಿ ನೆದರ್ಲೆಂಡ್‌ ಹಾಗೂ ಯುಎಇ ತಂಡಗಳು ಸೆಣಸಾಡಲಿವೆ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಸೂಪರ್ ಹಂತಕ್ಕೆ ಈಗಾಗಲೇ 8 ತಂಡಗಳು ನೇರ ಅರ್ಹತೆಯನ್ನು ಪಡೆದಿವೆ. ಇನ್ನುಳಿದ ಎಂಟು ತಂಡಗಳ ಪೈಕಿ 4 ತಂಡಗಳು ಅರ್ಹತಾ ಸುತ್ತಿನ ಪಂದ್ಯಗಳನ್ನಾಡಿ ಸೂಪರ್ 12 ಹಂತಕ್ಕೆ ಪ್ರವೇಶ ಪಡೆಯಲಿವೆ. ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ಹಾಗೂ ಒಮ್ಮೆ ಚಾಂಪಿಯನ್ ಅಗಿರುವ ಶ್ರೀಲಂಕಾ ತಂಡ ಕೂಡಾ ಈ ಬಾರಿ ಅರ್ಹತಾ ಸುತ್ತಿನಲ್ಲಿ ಸೆಣಸಾಟ ನಡೆಸಲಿವೆ. ಇನ್ನು ಈ ಬಾರಿ ಟೀಂ ಇಂಡಿಯಾ, ಇಂಗ್ಲೆಂಡ್, ಪಾಕಿಸ್ತಾನ, ಆತಿಥೇಯ ಆಸ್ಟ್ರೇಲಿಯಾ ಈ ಬಾರಿ ಟಿ20 ವಿಶ್ವಕಪ್ ಗೆಲ್ಲಬಲ್ಲ ನೆಚ್ಚಿನ ತಂಡಗಳಾಗಿ ಗುರುತಿಸಿಕೊಂಡಿವೆ.

andolana

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

11 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

12 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

12 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

12 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

12 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

12 hours ago