ಕ್ರೀಡೆ

ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನವೇ 6 ಲಕ್ಷಕ್ಕೂ ಅಧಿಕ ಟಿಕೆಟ್‌ ಮಾರಾಟ

ಮೆಲ್ಬೊರ್ನ್‌ : ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 16ರಿಂದ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಟೂರ್ನಿಗೆ ಚಾಲನೆ ಸಿಗಲಿದ್ದು, ಈಗಾಗಲೇ 6 ಲಕ್ಷಕ್ಕೂ ಅಧಿಕ ಟಿಕೆಟ್‌ಗಳು ಸೋಲ್ಡೌಟ್‌ ಆಗಿವೆ. ಈ ಕುರಿತಂತೆ ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಹಲವು ಹೈವೋಲ್ಟೇಜ್ ಪಂದ್ಯಗಳ ಎಲ್ಲಾ ಟಿಕೆಟ್‌ಗಳು ಸೋಲ್ಡೌಟ್ ಆಗಿವೆ.

ಚುಟುಕು ಕ್ರಿಕೆಟ್ ಮಹಾಸಂಗ್ರಾಮವು ಇದೇ ಭಾನುವಾರದಿಂದ ಆರಂಭವಾಗಲಿದ್ದು, ಮೊದಲ ಹಂತದಲ್ಲಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿವೆ. ಅರ್ಹತಾ ಸುತ್ತಿನಲ್ಲಿ ಅಗ್ರ 4 ಸ್ಥಾನ ಪಡೆಯುವ ತಂಡಗಳು ಸೂಪರ್ 12 ಹಂತಕ್ಕೆ ಲಗ್ಗೆಯಿಡಲಿವೆ. ಸೂಪರ್ 12 ಹಂತದ ಪಂದ್ಯಗಳು ಅಕ್ಟೋಬರ್ 22ರಿಂದ ಆರಂಭವಾಗಲಿದೆ. ಆಸ್ಟ್ರೇಲಿಯಾದ ಏಳು ನಗರಗಳಲ್ಲಿ ಟಿ20 ವಿಶ್ವಕಪ್ ಪಂದ್ಯಾವಳಿಗಳು ಜರುಗಲಿವೆ. ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವು ಮೊದಲ ಪಂದ್ಯದಲ್ಲಿ ರನ್ನರ್‌ ಅಪ್‌ ನ್ಯೂಜಿಲೆಂಡ್ ಎದುರು ಮೊದಲ ಪಂದ್ಯವನ್ನಾಡಲಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಸಿಡ್ನಿ ಕ್ರಿಕೆಟ್ ಗ್ರೌಂಡ್ ಆತಿಥ್ಯವನ್ನು ವಹಿಸಲಿದೆ.

ಇನ್ನು ಅಕ್ಟೋಬರ್ 23ರಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಮೆಲ್ಬೊರ್ನ್‌ ಕ್ರಿಕೆಟ್ ಮೈದಾನ ಆತಿಥ್ಯವನ್ನು ವಹಿಸಲಿದೆ. ಈ ಪಂದ್ಯದ ಎಲ್ಲಾ 90,000 ಸಾವಿರ ಟಿಕೆಟ್‌ಗಳು ಈಗಾಗಲೇ ಸೋಲ್ಡೌಟ್ ಆಗಿವೆ. ಇನ್ನು ಹೆಚ್ಚುವರಿ ಸ್ಟ್ಯಾಂಡಿಂಗ್ ರೂಮ್‌ನ ಟಿಕೆಟ್‌ಗಳು ಮಾರಾಟಕ್ಕಿಟ್ಟ 10 ನಿಮಿಷಗಳಲ್ಲೇ ಎಲ್ಲಾ ಟಿಕೆಟ್‌ಗಳು ಸೋಲ್ಡೌಟ್ ಆಗಿವೆ.

ಇನ್ನು ಅಕ್ಟೋಬರ್ 16ರಂದು ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ನಮೀಬಿಯಾ ತಂಡಗಳು ಮುಖಾಮುಖಿಯಾಗಲಿದ್ದು, ಗೀಲಾಂಗ್‌ನಲ್ಲಿ ನಡೆಯಲಿರುವ ಪಂದ್ಯದ ಕೆಲವೇ ಕೆಲವು ಟಿಕೆಟ್‌ಗಳು ಲಭ್ಯವಿವೆ. ಗೀಲಾಂಡ್‌ನ ಕಾರ್ಡಿನಿಯಾ ಪಾರ್ಕ್‌ ಸ್ಟೇಡಿಯಂ ವೀಕ್ಷಕರ ಕೆಪಾಸಿಟಿ 36,000 ಇದೆ. ಇದಾದ ಬಳಿಕ ಎರಡನೇ ಪಂದ್ಯದಲ್ಲಿ ಇದೇ ಮೈದಾನದಲ್ಲಿ ನೆದರ್ಲೆಂಡ್‌ ಹಾಗೂ ಯುಎಇ ತಂಡಗಳು ಸೆಣಸಾಡಲಿವೆ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಸೂಪರ್ ಹಂತಕ್ಕೆ ಈಗಾಗಲೇ 8 ತಂಡಗಳು ನೇರ ಅರ್ಹತೆಯನ್ನು ಪಡೆದಿವೆ. ಇನ್ನುಳಿದ ಎಂಟು ತಂಡಗಳ ಪೈಕಿ 4 ತಂಡಗಳು ಅರ್ಹತಾ ಸುತ್ತಿನ ಪಂದ್ಯಗಳನ್ನಾಡಿ ಸೂಪರ್ 12 ಹಂತಕ್ಕೆ ಪ್ರವೇಶ ಪಡೆಯಲಿವೆ. ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ಹಾಗೂ ಒಮ್ಮೆ ಚಾಂಪಿಯನ್ ಅಗಿರುವ ಶ್ರೀಲಂಕಾ ತಂಡ ಕೂಡಾ ಈ ಬಾರಿ ಅರ್ಹತಾ ಸುತ್ತಿನಲ್ಲಿ ಸೆಣಸಾಟ ನಡೆಸಲಿವೆ. ಇನ್ನು ಈ ಬಾರಿ ಟೀಂ ಇಂಡಿಯಾ, ಇಂಗ್ಲೆಂಡ್, ಪಾಕಿಸ್ತಾನ, ಆತಿಥೇಯ ಆಸ್ಟ್ರೇಲಿಯಾ ಈ ಬಾರಿ ಟಿ20 ವಿಶ್ವಕಪ್ ಗೆಲ್ಲಬಲ್ಲ ನೆಚ್ಚಿನ ತಂಡಗಳಾಗಿ ಗುರುತಿಸಿಕೊಂಡಿವೆ.

andolana

Recent Posts

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

1 hour ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

2 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

7 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

9 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

9 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

10 hours ago