ಕ್ರೀಡೆ

ಇಡಿಐ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್​ಗಳ ಜಯ: ಭಾರತದೊಂದಿಗೆ ಈ ವಿಶ್ವದಾಖಲೆ ಹಂಚಿಕೊಂಡ ಜಿಂಬಾಬ್ವೆ

ಜಿಂಬಾಬ್ವೆ ತಂಡವು ಐಸಿಸಿ ಏಕದಿನ ವಿಶ್ವಕಪ್​ ಕ್ವಾಲಿಫೈಯರ್​ ಟೂರ್ನಮೆಂಟ್​ನಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿದೆ. ಮೊನ್ನೆ 2 ಬಾರಿಯ ವಿಶ್ವಚಾಂಪಿಯನ್​ ವಿಂಡೀಸ್​ಗೆ ಸೋಲುಣಿಸಿದ್ದ ಜಿಂಬಾಬ್ವೆ ಇದೀಗ ಯುಎಸ್​ ತಂಡದ ವಿರುದ್ಧ 304 ರನ್​ಗಳ ಜಯ ಸಾಧಿಸಿ ವಿಶ್ವದಾಖಲೆಗೆ ಪಾತ್ರವಾಗಿದೆ.

ಜಿಂಬಾಬ್ವೆ ಐಸಿಸಿ ಏಕದಿನ ವಿಶ್ವಕಪ್​ ಕ್ವಾಲಿಫೈಯರ್​ ಟೂರ್ನಮೆಂಟ್​ನಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿದೆ. ಮೊನ್ನೆ 2 ಬಾರಿಯ ವಿಶ್ವಚಾಂಪಿಯನ್​ ವಿಂಡೀಸ್​ಗೆ ಸೋಲುಣಿಸಿದ್ದ ಜಿಂಬಾಬ್ವೆ ಇದೀಗ ಯುಎಸ್​ ತಂಡದ ವಿರುದ್ಧ 304 ರನ್​ಗಳ ಜಯ ಸಾಧಿಸಿ ವಿಶ್ವದಾಖಲೆಗೆ ಪಾತ್ರವಾಗಿದೆ.

ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 300 ರನ್​ಗಳ ಅಂತರದಿಂದ ಜಯ ಸಾಧಿಸಿದ 2ನೇ ತಂಡ ಎನಿಸಿಕೊಂಡಿದೆ. ಭಾರತ ತಂಡ ಮಾತ್ರ ಏಕದಿನ ಕ್ರಿಕೆಟ್​ನಲ್ಲಿ 300 (317) ರನ್​ಗಳ ಅಂತರದ ಜಯ ಸಾಧಿಸಿದೆ.

ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 300 ರನ್​ಗಳ ಅಂತರದಿಂದ ಜಯ ಸಾಧಿಸಿದ 2ನೇ ತಂಡ ಎನಿಸಿಕೊಂಡಿದೆ. ಭಾರತ ತಂಡ ಮಾತ್ರ ಏಕದಿನ ಕ್ರಿಕೆಟ್​ನಲ್ಲಿ 300 (317) ರನ್​ಗಳ ಅಂತರದ ಜಯ ಸಾಧಿಸಿದೆ.

ಇನ್ನೂ ಈ ಪಂದ್ಯಕ್ಕೆ ಬರುವುದಾದರೆ ಜಿಂಬಾಬ್ವೆ ಮೊದಲು ಬ್ಯಾಟಿಂಗ್ ಮಾಡಿ 50 ಓವರ್​ಗಳಲ್ಲಿ 408 ರನ್ ​ಗಳಿಸಿತ್ತು. ಇದು ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ ಜಿಂಬಾಬ್ವೆ ತಂಡದ ಮೊದಲ 400 ಪ್ಲಸ್​ ರನ್​ ಆಗಿದೆ.

ತಂಡದ ನಾಯಕ ಸೀನ್ ವಿಲಿಯಮ್ಸನ್​ 101 ಎಸೆತಗಳಲ್ಲಿ 174 ರನ್​ಗಳಿಸಿದರೆ, ಜೋಯ್ಲಾರ್ಡ್​ ಗುಮ್ಬೀ 78, ಸಿಕಂದರ್ ರಾಜಾ 48, ರಿಯಾನ್ ಬರ್ಲ್​ 47 ರನ್​ಗಳಿಸಿದ್ದರು. ಇದಕ್ಕುತ್ತರವಾಗಿ ಯುಎಸ್​ ತಂಡ ಕೇವಲ 104 ರನ್​ಗಳಿಗೆ ಸರ್ವಪತನಗೊಂಡಿತ್ತು. ರಿಚರ್ಡ್​ ನಗರವಾ 25ಕ್ಕೆ2, ಬ್ರಾಡ್ ಇವಾನ್ಸ್ 20ಕ್ಕೆ1, ರಾಜಾ 15ಕ್ಕೆ2, ಲ್ಯೂಕ್ ಜಾಂಗ್ವೆ 21ಕ್ಕೆ1 ಹಾಗೂ ಬರ್ಲ್​18ಕ್ಕೆ 1 ವಿಕೆಟ್ ಪಡೆದಿದ್ದರು.

ಇನ್ನು ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ ಗರಿಷ್ಠ ರನ್​ಗಳ ಅಂತರ ಜಯ ಸಾಧಿಸಿದ ಟಾಪ್ 5 ತಂಡಗಳನ್ನು ನೋಡುವುದಾದರೆ, ಭಾರತ 317ರನ್​ಗಳ ಜಯ vs ಶ್ರೀಲಂಕಾ, ಜಿಂಬಾಬ್ವೆ 304 ರನ್​ಗಳ ಜಯ vs ಅಮೆರಿಕಾ, ನ್ಯೂಜಿಲ್ಯಾಂಡ್​ 290ರನ್​ಗಳ ಜಯ vs ಐರ್ಲೆಂಡ್​, ಆಸ್ಟ್ರೇಲಿಯಾ 275 ರನ್​ಗಳ ಜಯ vs ಅಫ್ಭಾನಿಸ್ತಾನ, ದಕ್ಷಿಣ ಆಫ್ರಿಕಾ 272ರನ್​ಗಳ ಜಯ vs ಜಿಂಬಾಬ್ವೆ.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

33 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

12 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago