ಕ್ರೀಡೆ

ಅಲ್ಕರಾಝ್-ಝೆರ್ವೆವ್ ಪಂದ್ಯ ನೋಡಿ ಆನಂದಿಸಿದ ಎಂ.ಎಸ್.ಧೋನಿ

ನ್ಯೂಯಾರ್ಕ್: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2023ರ ಯು.ಎಸ್. ಓಪನ್‌ನಲ್ಲಿ ಕಾರ್ಲೊಸ್ ಅಲ್ಕರಾಝ್ ಹಾಗೂ ಅಲೆಕ್ಸಾಂಡರ್ ಝ್ವೆರೆವ್ ನಡುವಿನ ಕ್ವಾರ್ಟರ್ ಫೈನಲ್ ಪಂದ್ಯವನ್ನು ವೀಕ್ಷಿಸಿ ಆನಂದಿಸಿದರು.

ಯು.ಎಸ್. ಓಪನ್‌ನ ಅಧಿಕೃತ ಪ್ರಸಾರ ಸಂಸ್ಥೆಯು ಅಲ್ಕರಾಝ್ ಹಾಗೂ ಝ್ವೆರೆವ್ ನಡುವಿನ ಕ್ವಾರ್ಟರ್ ಫೈನಲ್ ಪಂದ್ಯದ ವೀಡಿಯೊವನ್ನು ಹಂಚಿಕೊಂಡಿದ್ದು, ಪ್ರೇಕ್ಷಕರ ಗ್ಯಾಲರಿನಲ್ಲಿ ಕುಳಿತಿದ್ದ ಧೋನಿ ರೋಚಕ ಸ್ಪರ್ಧೆಯನ್ನು ವೀಕ್ಷಿಸುತ್ತಿರುವ ಕ್ಷಣವನ್ನು ಸೆರೆ ಹಿಡಿದಿದೆ.

ಅರ್ಥರ್ ಅಶೆ ಸ್ಟೇಡಿಯಮ್‌ನಲ್ಲಿ 2011ರ ವಿಶ್ವಕಪ್ ವಿಜೇತ ತಂಡದ ನಾಯಕನೊಂದಿಗೆ ಸೆಲ್ಫಿ ತೆಗೆದುಕೊಂಡ ಅಭಿಮಾನಿಯೊಬ್ಬ ಅದನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾನೆ. ವಿಶ್ವದ ನಂ.1 ಆಟಗಾರ ಧೋನಿ ಜರ್ಮನಿಯ ಝ್ವೆರೆವ್‌ರನ್ನು ಕ್ವಾರ್ಟರ್ ಫೈನಲ್‌ನಲ್ಲಿ ಮಣಿಸಿದ್ದು ಸೆಮಿ ಫೈನಲ್‌ನಲ್ಲಿ ಡೇನಿಯಲ್ ಮೆಡ್ವೆಡೆವ್ ಸವಾಲನ್ನು ಎದುರಿಸಲಿದ್ದಾರೆ.

ಧೋನಿ ಈ ವರ್ಷಾರಂಭದಲ್ಲಿ ಚೆನ್ನೈಸೂಪರ್ ಕಿಂಗ್ಸ್ ತಂಡ ಐಪಿಎಲ್ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಜಯ ಸಾಧಿಸಿ ಐದನೇ ಬಾರಿ ಪ್ರಶಸ್ತಿ ಜಯಿಸುವಲ್ಲಿ ನೆರವಾಗಿದ್ದರು. ಸಿಎಸ್‌ಕೆ 2023ರ ಐಪಿಎಲ್ ಪ್ರಶಸ್ತಿ ಗೆದ್ದ ನಂತರ ಧೋನಿ ಅವರು ಮುಂದಿನ ವರ್ಷದ ಐಪಿಎಲ್‌ನಲ್ಲೂ ಆಡುವುದಾಗಿ ಹೇಳಿದ್ದರು.

andolanait

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

1 hour ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

1 hour ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

2 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

3 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

4 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

4 hours ago