ಕ್ರೀಡೆ

IPL-2024 ಆರಂಭಕ್ಕೂ ಮುನ್ನಾ ಬಿಗ್‌ ಅಪ್‌ಡೇಟ್‌ ನೀಡಿದ ಎಂಎಸ್‌ ಧೋನಿ

IPLನ 17ನೇ ಆವೃತ್ತಿಯು ಮಾರ್ಚ್ 22 ರಿಂದ ಆರಂಭವಾಗಲಿದೆ. ಈ ಸೀಸನ್​ನ ಮೊದಲ ಪಂದ್ಯ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ.

ಈ ಸೀಸನ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ಧೋನಿ ತಮ್ಮ ಅಭಿಮಾನಿಗಳಿಗೆ ಬಿಗ್‌ ಅಪ್‌ಡೇಟ್‌ ಕೊಟ್ಟಿದ್ದಾರೆ. ತಮ್ಮ ಫೇಸ್ ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಳ್ಳುವ ಮೂಲಕ ಐಪಿಎಲ್ ವಲಯದಲ್ಲಿ ಎಂಎಸ್‌ಡಿ ಸಂಚಲನ ಮೂಡಿಸಿದ್ದಾರೆ.

ಸೋಷಿಯಲ್‌ ಮೀಡಿಯಾ ದಲ್ಲಿ ಅಷ್ಟಾಗಿ ಆಕ್ಟಿವ್‌ ಇರದ ಧೋನಿ ಐಪಿಎಲ್ ಆರಂಭಕ್ಕೂ ಮುನ್ನ ಫೇಸ್ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹೊಸ ಸೀಸನ್‌ಗಾಗಿ ಕಾತುರದಿಂದ ಕಾಯುತ್ತಿದ್ದೇನೆ. ಈ ಆವೃತ್ತಿಯಲ್ಲಿ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಸದ್ಯ ಈ ಪೋಸ್ಟ್‌ ಭಾರಿ ಸದ್ದು ಮಾಡುತ್ತಿದ್ದು, ಧೋನಿಯ ಈ ಹೊಸ ಪಾತ್ರ ಯಾವುದು ಎಂಬುದರ ಬಗ್ಗೆ ಊಹಾಪೋಹಗಳು ಶುರುವಾಗಿವೆ.

ಐದು ಬಾರಿ ಚಾಂಪಿಯನ್‌ ಚೆನ್ನೈ ತಂಡದ ನಾಯಕರಾಗಿದ್ದ ಧೋನಿ, ಈ ಸೀಸನ್ನಲ್ಲಿ ಚೆನ್ನೈ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಎಲ್ಲರೂ ತಿಳಿದಿದ್ದರು. ಆದರೀಗ ಟೂರ್ನಿ ಆರಂಭಕ್ಕೂ ಮುನ್ನ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದಿರುವ ಧೋನಿಯ ಹೇಳಿಕೆ ಅಭಿಮಾನಿಗಳಿಗೆ ಶಾಕ್‌ ನೀಡಿದೆ.

ಎಂಎಸ್‌ಡಿ ನಾಯಕತ್ವವನ್ನು ತೊರೆಯುತ್ತಾರೆಯೇ ಅಥವಾ ನಿವೃತ್ತಿ ಘೋಷಿಸುತ್ತಾರೆಯೇ ಅಥವಾ ಮಾರ್ಗದರ್ಶಕನ ಪಾತ್ರದಲ್ಲಿ ಚೆನ್ನೈ ಪರ ಕಾಣಿಸಿಕೊಳ್ಳಲಿದ್ದಾರೆಯೇ ಎಂಬ ಅನೇಕಾನೇಕ ಪ್ರಶ್ನೆಗಳು ಅಭಿಮಾನಿಗಳ ಮನದಲ್ಲಿ ಉದ್ಭವಸಿದೆ.
ಈ ಎಲ್ಲಾ ಪ್ರಶ್ನೆಗಳಿಗೂ ಮಾ.೨೨ ರಂದು ಉತ್ತರ ಸಿಗಲಿದೆ.

andolana

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago