IPLನ 17ನೇ ಆವೃತ್ತಿಯು ಮಾರ್ಚ್ 22 ರಿಂದ ಆರಂಭವಾಗಲಿದೆ. ಈ ಸೀಸನ್ನ ಮೊದಲ ಪಂದ್ಯ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ.
ಈ ಸೀಸನ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ಧೋನಿ ತಮ್ಮ ಅಭಿಮಾನಿಗಳಿಗೆ ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ. ತಮ್ಮ ಫೇಸ್ ಬುಕ್ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಳ್ಳುವ ಮೂಲಕ ಐಪಿಎಲ್ ವಲಯದಲ್ಲಿ ಎಂಎಸ್ಡಿ ಸಂಚಲನ ಮೂಡಿಸಿದ್ದಾರೆ.
ಸೋಷಿಯಲ್ ಮೀಡಿಯಾ ದಲ್ಲಿ ಅಷ್ಟಾಗಿ ಆಕ್ಟಿವ್ ಇರದ ಧೋನಿ ಐಪಿಎಲ್ ಆರಂಭಕ್ಕೂ ಮುನ್ನ ಫೇಸ್ಬುಕ್ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹೊಸ ಸೀಸನ್ಗಾಗಿ ಕಾತುರದಿಂದ ಕಾಯುತ್ತಿದ್ದೇನೆ. ಈ ಆವೃತ್ತಿಯಲ್ಲಿ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಸದ್ಯ ಈ ಪೋಸ್ಟ್ ಭಾರಿ ಸದ್ದು ಮಾಡುತ್ತಿದ್ದು, ಧೋನಿಯ ಈ ಹೊಸ ಪಾತ್ರ ಯಾವುದು ಎಂಬುದರ ಬಗ್ಗೆ ಊಹಾಪೋಹಗಳು ಶುರುವಾಗಿವೆ.
ಐದು ಬಾರಿ ಚಾಂಪಿಯನ್ ಚೆನ್ನೈ ತಂಡದ ನಾಯಕರಾಗಿದ್ದ ಧೋನಿ, ಈ ಸೀಸನ್ನಲ್ಲಿ ಚೆನ್ನೈ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಎಲ್ಲರೂ ತಿಳಿದಿದ್ದರು. ಆದರೀಗ ಟೂರ್ನಿ ಆರಂಭಕ್ಕೂ ಮುನ್ನ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದಿರುವ ಧೋನಿಯ ಹೇಳಿಕೆ ಅಭಿಮಾನಿಗಳಿಗೆ ಶಾಕ್ ನೀಡಿದೆ.
ಎಂಎಸ್ಡಿ ನಾಯಕತ್ವವನ್ನು ತೊರೆಯುತ್ತಾರೆಯೇ ಅಥವಾ ನಿವೃತ್ತಿ ಘೋಷಿಸುತ್ತಾರೆಯೇ ಅಥವಾ ಮಾರ್ಗದರ್ಶಕನ ಪಾತ್ರದಲ್ಲಿ ಚೆನ್ನೈ ಪರ ಕಾಣಿಸಿಕೊಳ್ಳಲಿದ್ದಾರೆಯೇ ಎಂಬ ಅನೇಕಾನೇಕ ಪ್ರಶ್ನೆಗಳು ಅಭಿಮಾನಿಗಳ ಮನದಲ್ಲಿ ಉದ್ಭವಸಿದೆ.
ಈ ಎಲ್ಲಾ ಪ್ರಶ್ನೆಗಳಿಗೂ ಮಾ.೨೨ ರಂದು ಉತ್ತರ ಸಿಗಲಿದೆ.
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…