ಕ್ರೀಡೆ

IPL-2024 ಆರಂಭಕ್ಕೂ ಮುನ್ನಾ ಬಿಗ್‌ ಅಪ್‌ಡೇಟ್‌ ನೀಡಿದ ಎಂಎಸ್‌ ಧೋನಿ

IPLನ 17ನೇ ಆವೃತ್ತಿಯು ಮಾರ್ಚ್ 22 ರಿಂದ ಆರಂಭವಾಗಲಿದೆ. ಈ ಸೀಸನ್​ನ ಮೊದಲ ಪಂದ್ಯ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ.

ಈ ಸೀಸನ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ಧೋನಿ ತಮ್ಮ ಅಭಿಮಾನಿಗಳಿಗೆ ಬಿಗ್‌ ಅಪ್‌ಡೇಟ್‌ ಕೊಟ್ಟಿದ್ದಾರೆ. ತಮ್ಮ ಫೇಸ್ ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಳ್ಳುವ ಮೂಲಕ ಐಪಿಎಲ್ ವಲಯದಲ್ಲಿ ಎಂಎಸ್‌ಡಿ ಸಂಚಲನ ಮೂಡಿಸಿದ್ದಾರೆ.

ಸೋಷಿಯಲ್‌ ಮೀಡಿಯಾ ದಲ್ಲಿ ಅಷ್ಟಾಗಿ ಆಕ್ಟಿವ್‌ ಇರದ ಧೋನಿ ಐಪಿಎಲ್ ಆರಂಭಕ್ಕೂ ಮುನ್ನ ಫೇಸ್ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹೊಸ ಸೀಸನ್‌ಗಾಗಿ ಕಾತುರದಿಂದ ಕಾಯುತ್ತಿದ್ದೇನೆ. ಈ ಆವೃತ್ತಿಯಲ್ಲಿ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಸದ್ಯ ಈ ಪೋಸ್ಟ್‌ ಭಾರಿ ಸದ್ದು ಮಾಡುತ್ತಿದ್ದು, ಧೋನಿಯ ಈ ಹೊಸ ಪಾತ್ರ ಯಾವುದು ಎಂಬುದರ ಬಗ್ಗೆ ಊಹಾಪೋಹಗಳು ಶುರುವಾಗಿವೆ.

ಐದು ಬಾರಿ ಚಾಂಪಿಯನ್‌ ಚೆನ್ನೈ ತಂಡದ ನಾಯಕರಾಗಿದ್ದ ಧೋನಿ, ಈ ಸೀಸನ್ನಲ್ಲಿ ಚೆನ್ನೈ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಎಲ್ಲರೂ ತಿಳಿದಿದ್ದರು. ಆದರೀಗ ಟೂರ್ನಿ ಆರಂಭಕ್ಕೂ ಮುನ್ನ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದಿರುವ ಧೋನಿಯ ಹೇಳಿಕೆ ಅಭಿಮಾನಿಗಳಿಗೆ ಶಾಕ್‌ ನೀಡಿದೆ.

ಎಂಎಸ್‌ಡಿ ನಾಯಕತ್ವವನ್ನು ತೊರೆಯುತ್ತಾರೆಯೇ ಅಥವಾ ನಿವೃತ್ತಿ ಘೋಷಿಸುತ್ತಾರೆಯೇ ಅಥವಾ ಮಾರ್ಗದರ್ಶಕನ ಪಾತ್ರದಲ್ಲಿ ಚೆನ್ನೈ ಪರ ಕಾಣಿಸಿಕೊಳ್ಳಲಿದ್ದಾರೆಯೇ ಎಂಬ ಅನೇಕಾನೇಕ ಪ್ರಶ್ನೆಗಳು ಅಭಿಮಾನಿಗಳ ಮನದಲ್ಲಿ ಉದ್ಭವಸಿದೆ.
ಈ ಎಲ್ಲಾ ಪ್ರಶ್ನೆಗಳಿಗೂ ಮಾ.೨೨ ರಂದು ಉತ್ತರ ಸಿಗಲಿದೆ.

andolana

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

6 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

7 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

7 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

9 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

9 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

9 hours ago