ಕ್ರೀಡೆ

IPL-2024 ಆರಂಭಕ್ಕೂ ಮುನ್ನಾ ಬಿಗ್‌ ಅಪ್‌ಡೇಟ್‌ ನೀಡಿದ ಎಂಎಸ್‌ ಧೋನಿ

IPLನ 17ನೇ ಆವೃತ್ತಿಯು ಮಾರ್ಚ್ 22 ರಿಂದ ಆರಂಭವಾಗಲಿದೆ. ಈ ಸೀಸನ್​ನ ಮೊದಲ ಪಂದ್ಯ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ.

ಈ ಸೀಸನ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ಧೋನಿ ತಮ್ಮ ಅಭಿಮಾನಿಗಳಿಗೆ ಬಿಗ್‌ ಅಪ್‌ಡೇಟ್‌ ಕೊಟ್ಟಿದ್ದಾರೆ. ತಮ್ಮ ಫೇಸ್ ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಳ್ಳುವ ಮೂಲಕ ಐಪಿಎಲ್ ವಲಯದಲ್ಲಿ ಎಂಎಸ್‌ಡಿ ಸಂಚಲನ ಮೂಡಿಸಿದ್ದಾರೆ.

ಸೋಷಿಯಲ್‌ ಮೀಡಿಯಾ ದಲ್ಲಿ ಅಷ್ಟಾಗಿ ಆಕ್ಟಿವ್‌ ಇರದ ಧೋನಿ ಐಪಿಎಲ್ ಆರಂಭಕ್ಕೂ ಮುನ್ನ ಫೇಸ್ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹೊಸ ಸೀಸನ್‌ಗಾಗಿ ಕಾತುರದಿಂದ ಕಾಯುತ್ತಿದ್ದೇನೆ. ಈ ಆವೃತ್ತಿಯಲ್ಲಿ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಸದ್ಯ ಈ ಪೋಸ್ಟ್‌ ಭಾರಿ ಸದ್ದು ಮಾಡುತ್ತಿದ್ದು, ಧೋನಿಯ ಈ ಹೊಸ ಪಾತ್ರ ಯಾವುದು ಎಂಬುದರ ಬಗ್ಗೆ ಊಹಾಪೋಹಗಳು ಶುರುವಾಗಿವೆ.

ಐದು ಬಾರಿ ಚಾಂಪಿಯನ್‌ ಚೆನ್ನೈ ತಂಡದ ನಾಯಕರಾಗಿದ್ದ ಧೋನಿ, ಈ ಸೀಸನ್ನಲ್ಲಿ ಚೆನ್ನೈ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಎಲ್ಲರೂ ತಿಳಿದಿದ್ದರು. ಆದರೀಗ ಟೂರ್ನಿ ಆರಂಭಕ್ಕೂ ಮುನ್ನ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದಿರುವ ಧೋನಿಯ ಹೇಳಿಕೆ ಅಭಿಮಾನಿಗಳಿಗೆ ಶಾಕ್‌ ನೀಡಿದೆ.

ಎಂಎಸ್‌ಡಿ ನಾಯಕತ್ವವನ್ನು ತೊರೆಯುತ್ತಾರೆಯೇ ಅಥವಾ ನಿವೃತ್ತಿ ಘೋಷಿಸುತ್ತಾರೆಯೇ ಅಥವಾ ಮಾರ್ಗದರ್ಶಕನ ಪಾತ್ರದಲ್ಲಿ ಚೆನ್ನೈ ಪರ ಕಾಣಿಸಿಕೊಳ್ಳಲಿದ್ದಾರೆಯೇ ಎಂಬ ಅನೇಕಾನೇಕ ಪ್ರಶ್ನೆಗಳು ಅಭಿಮಾನಿಗಳ ಮನದಲ್ಲಿ ಉದ್ಭವಸಿದೆ.
ಈ ಎಲ್ಲಾ ಪ್ರಶ್ನೆಗಳಿಗೂ ಮಾ.೨೨ ರಂದು ಉತ್ತರ ಸಿಗಲಿದೆ.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ದೇಶವನ್ನು ಒಂದುಗೂಡಿಸಿದ ಖಾದಿ ಮಂತ್ರ

ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ : ನಿದ್ದೆ ಇಲ್ಲದ ಇಂಗ್ಲೆಂಡಿನ ಮೊದಲ ದಿನಗಳು

ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…

3 hours ago

ಮಳೆಗಾಲದಲ್ಲೇ ವೈಟ್‌ ಟಾಪಿಂಗ್‌ ಆಗಬೇಕೆ?

ವಸಂತ್‌ ಕುಮಾರ್‌, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್‌ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 11 , ಶನಿವಾರ

3 hours ago

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

19 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

19 hours ago