ಕ್ರೀಡೆ

IPL-2024 ಆರಂಭಕ್ಕೂ ಮುನ್ನಾ ಬಿಗ್‌ ಅಪ್‌ಡೇಟ್‌ ನೀಡಿದ ಎಂಎಸ್‌ ಧೋನಿ

IPLನ 17ನೇ ಆವೃತ್ತಿಯು ಮಾರ್ಚ್ 22 ರಿಂದ ಆರಂಭವಾಗಲಿದೆ. ಈ ಸೀಸನ್​ನ ಮೊದಲ ಪಂದ್ಯ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ.

ಈ ಸೀಸನ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ಧೋನಿ ತಮ್ಮ ಅಭಿಮಾನಿಗಳಿಗೆ ಬಿಗ್‌ ಅಪ್‌ಡೇಟ್‌ ಕೊಟ್ಟಿದ್ದಾರೆ. ತಮ್ಮ ಫೇಸ್ ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಳ್ಳುವ ಮೂಲಕ ಐಪಿಎಲ್ ವಲಯದಲ್ಲಿ ಎಂಎಸ್‌ಡಿ ಸಂಚಲನ ಮೂಡಿಸಿದ್ದಾರೆ.

ಸೋಷಿಯಲ್‌ ಮೀಡಿಯಾ ದಲ್ಲಿ ಅಷ್ಟಾಗಿ ಆಕ್ಟಿವ್‌ ಇರದ ಧೋನಿ ಐಪಿಎಲ್ ಆರಂಭಕ್ಕೂ ಮುನ್ನ ಫೇಸ್ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹೊಸ ಸೀಸನ್‌ಗಾಗಿ ಕಾತುರದಿಂದ ಕಾಯುತ್ತಿದ್ದೇನೆ. ಈ ಆವೃತ್ತಿಯಲ್ಲಿ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಸದ್ಯ ಈ ಪೋಸ್ಟ್‌ ಭಾರಿ ಸದ್ದು ಮಾಡುತ್ತಿದ್ದು, ಧೋನಿಯ ಈ ಹೊಸ ಪಾತ್ರ ಯಾವುದು ಎಂಬುದರ ಬಗ್ಗೆ ಊಹಾಪೋಹಗಳು ಶುರುವಾಗಿವೆ.

ಐದು ಬಾರಿ ಚಾಂಪಿಯನ್‌ ಚೆನ್ನೈ ತಂಡದ ನಾಯಕರಾಗಿದ್ದ ಧೋನಿ, ಈ ಸೀಸನ್ನಲ್ಲಿ ಚೆನ್ನೈ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಎಲ್ಲರೂ ತಿಳಿದಿದ್ದರು. ಆದರೀಗ ಟೂರ್ನಿ ಆರಂಭಕ್ಕೂ ಮುನ್ನ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದಿರುವ ಧೋನಿಯ ಹೇಳಿಕೆ ಅಭಿಮಾನಿಗಳಿಗೆ ಶಾಕ್‌ ನೀಡಿದೆ.

ಎಂಎಸ್‌ಡಿ ನಾಯಕತ್ವವನ್ನು ತೊರೆಯುತ್ತಾರೆಯೇ ಅಥವಾ ನಿವೃತ್ತಿ ಘೋಷಿಸುತ್ತಾರೆಯೇ ಅಥವಾ ಮಾರ್ಗದರ್ಶಕನ ಪಾತ್ರದಲ್ಲಿ ಚೆನ್ನೈ ಪರ ಕಾಣಿಸಿಕೊಳ್ಳಲಿದ್ದಾರೆಯೇ ಎಂಬ ಅನೇಕಾನೇಕ ಪ್ರಶ್ನೆಗಳು ಅಭಿಮಾನಿಗಳ ಮನದಲ್ಲಿ ಉದ್ಭವಸಿದೆ.
ಈ ಎಲ್ಲಾ ಪ್ರಶ್ನೆಗಳಿಗೂ ಮಾ.೨೨ ರಂದು ಉತ್ತರ ಸಿಗಲಿದೆ.

andolana

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

9 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

11 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

12 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

13 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

15 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

16 hours ago