ಜಾರ್ಖಂಡ್: ಮಹೇಂದ್ರ ಸಿಂಗ್ ಧೋನಿ (Mahendra Singh Dhoni) ವಿಶ್ವ ಕ್ರಿಕೆಟ್ ಕಂಡ ಚಾಣಾಕ್ಷ ವಿಕೆಟ್ ಕೀಪರ್, ಶ್ರೇಷ್ಠ ನಾಯಕ, ಬೆಸ್ಟ್ ಫಿನಿಷರ್, ಭಾರತೀಯ ಕ್ರಿಕೆಟ್ಗೆ ಸಿಕ್ಕ ಅಪರೂಪದ ಅಟಗಾರ, ಅವರ ಕೊಡುಗೆ ಕ್ರಿಕೆಟ್ಗಷ್ಟೇ ಸೀಮಿತವಲ್ಲ, ಭಾರತಕ್ಕೆ ನೀಡಿದ ಕಾಣಿಕೆಯೂ ಅಪಾರ. ಪ್ರತಿ ಹೆಜ್ಜೆಗೂ ದಾಖಲೆ ಬರೆದ್ದಾರೆ. ವಿಶೇಷ ಅಂದರೆ ನಿವೃತ್ತಿ ಹೊಂದಿದ್ದರೂ ದಾಖಲೆಯ ಮಟ್ಟದಲ್ಲಿ ತೆರಿಗೆ ಪಾವತಿಸುತ್ತಿದ್ದಾರೆ.
ಅಂತಹ ಸೂಪರ್ ಸ್ಟಾರ್ ಆಟಗಾರ ಎಂಎಸ್ ಧೋನಿ ಮತ್ತೊಮ್ಮೆ ಜಾರ್ಖಂಡ್ ರಾಜ್ಯದಲ್ಲಿ (Jharkhand State) ಅತಿ ಹೆಚ್ಚು ತೆರಿಗೆ ಪಾವತಿದಾರರಾಗಿ (Most Taxpayer) ಹೊರ ಹೊಮ್ಮಿದ್ದಾರೆ.
ಈ ವರ್ಷ ಮಾರ್ಚ್ 31ಕ್ಕೆ ಕೊನೆಗೊಂಡ ಹಣಕಾಸು ವರ್ಷದಲ್ಲಿ ಮಹೇಂದ್ರ ಸಿಂಗ್ ಧೋನಿ, 38 ಕೋಟಿ ರೂಪಾಯಿ ತೆರಿಗೆ ಪಾವತಿಸಿದ್ದಾರೆ. ಎಂಬುದು ಆದಾಯ ತೆರಿಗೆ ಇಲಾಖೆಯ ಮಾಹಿತಿ, ಕೂಲ್ ಕ್ಯಾಪ್ಟನ್ ವಾರ್ಷಿಕ ವರಮಾನ 130 ಕೋಟಿ ರೂಪಾಯಿಗೂ ಹೆಚ್ಚು ಎಂದು ತಿಳಿದು ಬಂದಿದೆ.
ಆಗಸ್ಟ್ 15, 2020ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಟೀಮ್ ಇಂಡಿಯಾ ಮಾಜಿ ನಾಯಕ ಧೋನಿ ನಿವೃತ್ತಿ (MS Dhoni Retire) ಘೋಷಿಸಿದ್ದಾರೆ. ಕ್ರಿಕೆಟ್ ರಿಟೈರ್ಮೆಂಟ್ ಘೋಷಿಸಿದರೂ ಧೋನಿ ಅವರ ಆದಾಯದ ಮೇಲೆ ಯಾವುದೇ ರೀತಿಯ ಪೆಟ್ಟು ಬಿದ್ದಿಲ್ಲ ಎಂಬುದು ಈ ಮೂಲಕ ತಿಳಿಯುತ್ತದೆ. ಧೋನಿ ಇಂಟರ್ನ್ಯಾಷನಲ್ ಕ್ರಿಕೆಟ್ ಶುರು ಮಾಡಿದಾಗಿನಿಂದ ನಿರಂತರವಾಗಿ ಜಾರ್ಖಂಡ್ನಲ್ಲಿ ಅತಿ ಹೆಚ್ಚು ತೆರಿಗೆ ಪಾವರಿದಾರನಾಗಿ ಹೊರ ಹೊಮ್ಮಿದ್ದಾರೆ.
ಜಾರ್ಖಂಡ್ ರಾಜ್ಯದಲ್ಲಿ MS ಧೋನಿ ಕಳೆದ ವರ್ಷ ಸಹ ಹೆಚ್ಚು ಟ್ಯಾಕ್ಸ್ ಕಟ್ಟಿದ ವ್ಯಕ್ತಿ ಎನಿಸಿದ್ದರು. 2020-21ರ ಸಾಲಿನಲ್ಲಿ ಧೋನಿ 30 ಕೋಟಿ ರೂಪಾಯಿ ಮುಂಗಡ ತೆರಿಗೆ ಪಾವತಿ ಮಾಡಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ ಬಳಿಕವೂ ಆದಾಯದಲ್ಲಿ ಏರಿಕೆ ಕಂಡಿರುವುದು ಅಚ್ಚರಿಯ ಸಂಗತಿ. ಅಷ್ಟೇ ಅಲ್ಲದೆ, ಪಾವತಿಸುವ ಕಟ್ಟು ತೆರಿಗೆ ಮೊತ್ತವೂ ದುಪ್ಪಟ್ಟಾಗಿದೆ. ಈ ಬಾರಿ ಧೋನಿ ತಮ್ಮ ಐಪಿಎಲ್ ವೇತನಕ್ಕಿಂತ 3 ಪಟ್ಟು ಹೆಚ್ಚಿನ ಟ್ಯಾಕ್ಸ್ ಕಟ್ಟಿದ್ದಾರೆ.
ಪ್ರಸ್ತುತ ನಡೆಯುತ್ತಿರುವ 16ನೇ ಆವೃತ್ತಿಯ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಲು 12 ಕೋಟಿ ರೂಪಾಯಿ ವೇತನ ಪಡೆದಿದ್ದಾರೆ, ಆದರೆ ಜಾಹೀರಾತಿನಲ್ಲಿ ಆದಾಯ ಹೆಚ್ಚಾಗುತ್ತಿದೆ. ಧೋನಿ ಅವರಿಂದ ಜಾಹೀರಾತು ಮಾಡಿಸಿಕೊಳ್ಳಲು ವಿವಿಧ ಬ್ರಾಂಡ್ಗಳು, ಕಂಪನಿಗಳು ದುಂಬಾಲು ಬೀಳುತ್ತವೆ. ಈ ಕಾರಣಕ್ಕೆ ಧೋನಿ ಅವರ ವರಮಾನ ವರ್ಷದಿಂದ ವರ್ಷಕ್ಕೆ ಡಬಲ್ ಆಗುತ್ತಿದೆ.
ಭಾರತದ ಶ್ರೀಮಂತ ಕ್ರಿಕೆಟಿಗರ ಪಟ್ಟಿಯಲ್ಲಿ ಧೋನಿ ಹೆಸರು 2ನೇ ಸ್ಥಾನದಲ್ಲಿದೆ. ಮಾಸ್ಟರ್ ಬ್ಲಾಸ್ಟರ್, ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಸಚಿನ್ 1,394 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದರೆ, ಧೋನಿ ಆಸ್ತಿ ಮೌಲ್ಯ 943 ಕೋಟಿ ರೂಪಾಯಿ. ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದು, 918 ಕೋಟಿ ಆಸ್ತಿ ಹೊಂದಿದ್ದಾರೆ.
ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಅದ್ಭುತ ಪ್ರದರ್ಶನ ನೀಡುತ್ತಿದೆ. ಆಡಿರುವ 5 ಪಂದ್ಯಗಳಲ್ಲಿ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 2ರಲ್ಲಿ ಸೋಲು ಕಂಡಿದೆ. ಇಂದು ಸನ್ರೈಸರ್ಸ್ ಹೈದರಾಬಾದ್ (Sunrisers Hyderabad) ಎದುರು ಸೆಣಸಾಟ ನಡೆಸಲಿದೆ. ಧೋನಿಗೆ ಇದೇ ಕೊನೆಯ ಐಪಿಎಲ್ ಎಂದು ಹೇಳಲಾಗುತ್ತಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ಧೋನಿ, ಐಪಿಎಲ್ ನಿಂದಲೂ ಶೀಘ್ರದಲ್ಲೇ ದೂರವಾಗುವ ಸಾಧ್ಯತೆ ಇದೆ.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…