ಕ್ರೀಡೆ

ಹೆಂಡತಿ ಮತ್ತು ಮಗಳೊಂದಿಗೆ ಯುರೋಪ್‌ಗೆ ಹಾರಿದ ಕ್ಯಾಪ್ಟನ್‌ ಕೂಲ್‌

ಟೀಂ ಇಂಡಿಯಾದ ಮಾಜಿ ನಾಯಕ, ಕ್ಯಾಪ್ಟನ್‌ ಕೂಲ್‌ ಎಂಎಸ್‌ಡಿ (ಮಹೇಂದ್ರ ಸಿಂಗ್‌ ಧೋನಿ) ಅವರು ಕುಟುಂಬದೊಂದಿಗೆ ಸಮಯ ಕಳೆಯಲು ವಿದೇಶಕ್ಕೆ ಹಾರಿದ್ದಾರೆ.

ಹೌದು, ಈಗಾಗಲೇ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೊಷಿಸಿರುವ ಮಾಸ್ಟರ್‌ ಮೈಂಡ್‌ ಧೋನಿ ಅವರು ಸದ್ಯ ಐಪಿಎಲ್‌ನಿಂದ ಹೊರಬಂದು ಫ್ಯಾಮಿಲಿಯೊಂದಿಗೆ ಸಮಯ ಕಳೆಯುತ್ತಿದ್ದಾರೆ.

2024ರ 17ನೇ ಐಪಿಎಲ್‌ ಸೀಸನ್‌ನಲ್ಲಿ ಸಿಎಸ್‌ಕೆ (ಚೆನ್ನೈಸೂಪರ್‌ ಕಿಂಗ್ಸ್‌) ತಂಡ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. 2023ರ ಸೀಸನ್‌ನ ವಿನ್ನರ್‌ ಆಗಿದ್ದ ಸಿಎಸ್‌ಕೆ ಈ ಬಾರಿ ಕ್ವಾಲಿಫೈಯರ್‌ ಕೂಡಾ ಆಗಲಿಲ್ಲ. ನಿರ್ಣಾಯಕ ಹಂತದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ವಿರುದ್ಧ ಹೀನಾಯವಾಗಿ ಸೋತು ಲೀಗ್‌ನಿಂದ ಹೊರಬಿದ್ದಿತ್ತು.

ಇದೆಲ್ಲದರ ನಡುವೆ ಧೋನಿ ಐಪಿಎಲ್‌ನಿಂದಲೂ ನಿವೃತ್ತಿ ಹೊಂದುತ್ತಾರೆ ಎಂದು ಎಲ್ಲರೂ ಊಹಿಸಿದ್ದರು. ಇದಕ್ಕೆ ಉತ್ತರ ನೀಡಿದ್ದ ಧೋನಿ, ಇನ್ನು 9 ತಿಂಗಳ ಕಾಲಾವಕಾಶ ಇದ್ದು, ಕಾದು ನೋಡಬೇಕಿದೆ ಎಂದು ಹೇಳುವ ಮೂಲಕ ಇನ್ನೊಂದು ಸೀಸನ್‌ ಐಪಿಎಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆಯೇ ಅಥವಾ ಇಲ್ಲವೇ ಎಂಬ ಕುತೂಹಲಕ್ಕೆ ಎಡೆಮಾಡಿಕೊಟ್ಟಿದ್ದಾರೆ.

ಇದೆಲ್ಲದರ ನಡುವೆ ಸದ್ಯ ಕುಟುಂಬದೊಂದಿಗೆ ವಿದೇಶಕ್ಕೆ ಹಾರಿರುವ ಎಂಎಸ್‌ ಧೋನಿ ಅಲ್ಲಿ ಸುಂದರ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಸದ್ಯ ಧೋನಿ ಜರ್ಮನಿ, ಇಟಲಿ ಭಾಗಗಳಲ್ಲಿ ಪ್ರವಾಸ ಕೈಗೊಂಡಿದ್ದು, ಅಲ್ಲಿ ಸೌಂದರ್ಯವನ್ನು ಸವಿಯುವ ಮೂಲಕ ಕ್ರಿಕೆಟ್‌ನಿಂದ ಹೊರ ಬಂದಿದ್ದಾರೆ.

ಧೋನಿ ಅವರು ಎಲ್ಲೇ ಸುತ್ತಾಡಿದರು ಆ ಬಗ್ಗೆ ಅವರು ಎಲ್ಲಿಯೂ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ. ಆದರೆ ಅವರ ಪತ್ನಿ ಸಾಕ್ಷಿ ಧೋನಿ ಇದಕ್ಕೆ ತದ್ವಿರುದ್ಧವಾಗಿದ್ದಾರೆ. ಇಟಲಿಯಲ್ಲಿ ಕಳೆಯುತ್ತಿರುವ ಸುಂದರ ಕ್ಷಣಗಳನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಎಂಎಸ್‌ಡಿ ಅಭಿಮಾನಿಗಳು ಸಾಕ್ಷಿಗೆ ಕೃತಜ್ಞನತೆ ತಿಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

9 mins ago

ಗಾಂಧಿ ಅನುಸಂಧಾನದ ವೈರುಧ್ಯಗಳು

ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…

18 mins ago

ನಮ್ಮ ತಂದೆಯ ಮರಣ ಮತ್ತು ನನ್ನ ಇಮ್ಮಡಿ ಅವಮಾನ

ಗಾಂಧಿ ಅಭಿಯಾನ ಅರಿವಿನ ಯಾನ  ನಾನು ಮೊದಲೇ ಹೇಳಿರುವಂತೆ, ನಮ್ಮ ತಂದೆ ಭಗಂದರ ರೋಗದಿಂದ ನರಳುತ್ತಿದ್ದರು. ಅವರ ಶುಶ್ರೂಷೆಯ ಅಧಿಕಾಂಶದ ಹೊರೆ…

34 mins ago

ಸಂಪಾದನೆ ಎಂಬ ಧರ್ಮ ಸಂಕಟಕ್ಕೆ ಸಿಲುಕಿ…

ದೇವನೂರ ಮಹಾದೇವ ‘ಹಾಡುಪಾಡು ರಾಮು’ ಎಂದೇ ಖ್ಯಾತರಾಗಿದ್ದ ಟಿ.ಎಸ್.ರಾಮಸ್ವಾಮಿಯವರು ನೆಲಗನ್ನಡಕ್ಕೆ ಅನುವಾದಿಸಿರುವ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿಯ ಲೋಕಾರ್ಪಣೆ ಶನಿವಾರ ಸಂಜೆ…

4 hours ago

ಪ್ರವಾಸಿಗರಿಗೆ ಮುಕ್ತವಾದ ಮಾಂದಲ್‌ಪಟ್ಟಿ

ನವೀನ್ ಡಿಸೋಜ ೪ ತಿಂಗಳಿನಿಂದ ಬಂದ್ ಆಗಿದ್ದ ಮುಗಿಲುಪೇಟೆ ಖ್ಯಾತಿಯ ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ…

4 hours ago

ಯತೀಂದ್ರಗೆ ನಗರಾಭಿವೃದ್ಧಿ; ಮೈಸೂರಿಗೆ ಯೋಜನೆಗಳ ಸಮೃದ್ಧಿ?

ಕೆ.ಬಿ.ರಮೇಶನಾಯಕ ಮೈಸೂರು: ತವರಿನವರೇ ಮುಖ್ಯಮಂತ್ರಿಯಾಗಿದ್ದಾಗ ಹತ್ತಾರು ಯೋಜನೆಗಳು ಮಂಜೂರಾಗಿದ್ದರೆ, ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ…

4 hours ago