ಟೀಂ ಇಂಡಿಯಾದ ಮಾಜಿ ನಾಯಕ, ಕ್ಯಾಪ್ಟನ್ ಕೂಲ್ ಎಂಎಸ್ಡಿ (ಮಹೇಂದ್ರ ಸಿಂಗ್ ಧೋನಿ) ಅವರು ಕುಟುಂಬದೊಂದಿಗೆ ಸಮಯ ಕಳೆಯಲು ವಿದೇಶಕ್ಕೆ ಹಾರಿದ್ದಾರೆ.
ಹೌದು, ಈಗಾಗಲೇ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೊಷಿಸಿರುವ ಮಾಸ್ಟರ್ ಮೈಂಡ್ ಧೋನಿ ಅವರು ಸದ್ಯ ಐಪಿಎಲ್ನಿಂದ ಹೊರಬಂದು ಫ್ಯಾಮಿಲಿಯೊಂದಿಗೆ ಸಮಯ ಕಳೆಯುತ್ತಿದ್ದಾರೆ.
2024ರ 17ನೇ ಐಪಿಎಲ್ ಸೀಸನ್ನಲ್ಲಿ ಸಿಎಸ್ಕೆ (ಚೆನ್ನೈಸೂಪರ್ ಕಿಂಗ್ಸ್) ತಂಡ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. 2023ರ ಸೀಸನ್ನ ವಿನ್ನರ್ ಆಗಿದ್ದ ಸಿಎಸ್ಕೆ ಈ ಬಾರಿ ಕ್ವಾಲಿಫೈಯರ್ ಕೂಡಾ ಆಗಲಿಲ್ಲ. ನಿರ್ಣಾಯಕ ಹಂತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವಿರುದ್ಧ ಹೀನಾಯವಾಗಿ ಸೋತು ಲೀಗ್ನಿಂದ ಹೊರಬಿದ್ದಿತ್ತು.
ಇದೆಲ್ಲದರ ನಡುವೆ ಧೋನಿ ಐಪಿಎಲ್ನಿಂದಲೂ ನಿವೃತ್ತಿ ಹೊಂದುತ್ತಾರೆ ಎಂದು ಎಲ್ಲರೂ ಊಹಿಸಿದ್ದರು. ಇದಕ್ಕೆ ಉತ್ತರ ನೀಡಿದ್ದ ಧೋನಿ, ಇನ್ನು 9 ತಿಂಗಳ ಕಾಲಾವಕಾಶ ಇದ್ದು, ಕಾದು ನೋಡಬೇಕಿದೆ ಎಂದು ಹೇಳುವ ಮೂಲಕ ಇನ್ನೊಂದು ಸೀಸನ್ ಐಪಿಎಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆಯೇ ಅಥವಾ ಇಲ್ಲವೇ ಎಂಬ ಕುತೂಹಲಕ್ಕೆ ಎಡೆಮಾಡಿಕೊಟ್ಟಿದ್ದಾರೆ.
ಇದೆಲ್ಲದರ ನಡುವೆ ಸದ್ಯ ಕುಟುಂಬದೊಂದಿಗೆ ವಿದೇಶಕ್ಕೆ ಹಾರಿರುವ ಎಂಎಸ್ ಧೋನಿ ಅಲ್ಲಿ ಸುಂದರ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಸದ್ಯ ಧೋನಿ ಜರ್ಮನಿ, ಇಟಲಿ ಭಾಗಗಳಲ್ಲಿ ಪ್ರವಾಸ ಕೈಗೊಂಡಿದ್ದು, ಅಲ್ಲಿ ಸೌಂದರ್ಯವನ್ನು ಸವಿಯುವ ಮೂಲಕ ಕ್ರಿಕೆಟ್ನಿಂದ ಹೊರ ಬಂದಿದ್ದಾರೆ.
ಧೋನಿ ಅವರು ಎಲ್ಲೇ ಸುತ್ತಾಡಿದರು ಆ ಬಗ್ಗೆ ಅವರು ಎಲ್ಲಿಯೂ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ. ಆದರೆ ಅವರ ಪತ್ನಿ ಸಾಕ್ಷಿ ಧೋನಿ ಇದಕ್ಕೆ ತದ್ವಿರುದ್ಧವಾಗಿದ್ದಾರೆ. ಇಟಲಿಯಲ್ಲಿ ಕಳೆಯುತ್ತಿರುವ ಸುಂದರ ಕ್ಷಣಗಳನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಎಂಎಸ್ಡಿ ಅಭಿಮಾನಿಗಳು ಸಾಕ್ಷಿಗೆ ಕೃತಜ್ಞನತೆ ತಿಳಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…