ಕ್ರೀಡೆ

ನನ್ನ ಹುಟ್ಟು ಹಬ್ಬಕ್ಕೆ ಉಡುಗೊರೆಯಾಗಿ ವಿಶ್ವಕಪ್‌ ನೀಡಿದ್ದಕ್ಕೆ ಧನ್ಯವಾದಗಳು: ವೈರಲ್‌ ಆಯ್ತು ಎಂಎಸ್‌ಡಿ ಪೋಸ್ಟ್‌!

ನವದೆಹಲಿ: ಕೆನ್ಸಿಂಗ್ಟನ್‌ ಓವಲ್‌ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ದಕ್ಷಿಣಾ ಆಫ್ರಿಕಾ ವಿರುದ್ಧ 7 ರನ್‌ಗಳ ಅಂತರದಿಂದ ಗೆದ್ದ ಟೀಂ ಇಂಡಿಯಾಗೆ ಅಭಿನಂದನೆಗಳ ಮಹಾಪೂರವೆ ಹರಿದು ಬರುತ್ತಿದೆ.

ಗಾಡ್‌ ಆಫ್‌ ಕ್ರಿಕೆಟ್‌ ಸಚಿನ್‌ ತೆಂಡುಲ್ಕರ್‌, ವಿರೇಂದ್ರ ಸೆಹ್ವಾಗ್‌, ಸಿಕ್ಸರ್‌ ಕಿಂಗ್‌ ಯುವರಾಜ್‌ ಸಿಂಗ್‌ ಸೇರಿದಂತೆ ಹಲವು ಹಿರಿಯ ಕ್ರಿಕೇಟಿಗರು ಶುಭ ಕೋರಿ, ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.

ಇನ್ನು ಇದರಲ್ಲಿ ವಿಶೇಷ ಎಂಬಂತೆ ಎಲ್ಲಾ ಮೂರು ಮಾದರಿಯಲ್ಲಿ ವಿಶ್ವಕಪ್‌ ಗೆದ್ದಿರುವ ಟೀಂ ಇಂಡಿಯಾದ ಏಕೈಕ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರು ವರ್ಷಗಳು ಕಳೆದ ಬಳಿಕ ಮೊದಲ ಬಾರಿಗೆ ಸೋಷಿಯಲ್‌ ಮೀಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ.

ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ ಶುಭ ಕೋರಿರುವ ಧೋನಿ, ನನ್ನ ಹುಟ್ಟು ಹಬ್ಬಕ್ಕೆ ಉಡುಗೊರೆಯಾಗಿ ವಿಶ್ವಕಪ್‌ ನೀಡಿದ್ದಕ್ಕೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ರೋಹಿತ್‌ ಅಂಡ್‌ ಟೀಂ ವಿಶ್ವಕಪ್‌ ಗೆದ್ದ ಫೋಟೋ ಹಂಚಿಕೊಂಡಿರುವ ಧೋನಿ, “ವರ್ಲ್ಡ್ ಕಪ್ ಚಾಂಪಿಯನ್ಸ್ 2024. ನನ್ನ ಹೃದಯ ಬಡಿತ ಹೆಚ್ಚಾಗಿದೆ, ಶಾಂತವಾಗಿ, ಆತ್ಮ ವಿಶ್ವಾಸವನ್ನು ಹೊಂದಿದ್ದಕ್ಕಾಗಿ ಮತ್ತು ನೀವು ಏನು ಮಾಡಿದ್ದೀರಿ ಎಂಬುದನ್ನು ಚೆನ್ನಾಗಿ ಮಾಡಿದ್ದೀರಿ. ಮನೆಗೆ ಹಿಂದಿರುಗಿದ ಎಲ್ಲಾ ಭಾರತೀಯರಿಂದ ಮತ್ತು ಪ್ರಪಂಚದ ಎಲ್ಲೆಡೆಯಿಂದ ವಿಶ್ವಕಪ್ ಅನ್ನು ಮನೆಗೆ ತಂದಿದ್ದಕ್ಕಾಗಿ ನಿಮಗೆ ದೊಡ್ಡ ಧನ್ಯವಾದಗಳು. ನಿಮ್ಮ ಅಮೂಲ್ಯ ಹುಟ್ಟುಹಬ್ಬದ ಉಡುಗೊರೆಗಾಗಿ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಇನ್ನು ಈ ಪೋಸ್ಟ್‌ ಎಲ್ಲಡೆ ವೈರಲ್‌ ಆಗಿದ್ದು, ಅಭಿಮಾನಿಗಳು ಧೋನಿ ಅವರು ಮತ್ತೆ ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟಿವ್‌ ಆಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

https://www.instagram.com/p/C8z9ctJSGqU/?utm_source=ig_web_copy_link

ಸಚಿನ್‌ ಟ್ವೀಟ್‌: ವೆಸ್ಟ್ ಇಂಡೀಸ್‌ನಲ್ಲಿ ಭಾರತೀಯ ಕ್ರಿಕೆಟ್‌ಗೆ ಜೀವನವು ಪೂರ್ಣ ವೃತ್ತವಾಗಿದೆ. 2007ರ ODI ವಿಶ್ವಕಪ್‌ನಲ್ಲಿನ ನಮ್ಮ ತಗ್ಗುಗಳಿಂದ ಹಿಡಿದು 2024ರಲ್ಲಿ T20WC ಗೆಲ್ಲುವವರೆಗೆ ಕ್ರಿಕೆಟ್ ಶಕ್ತಿಯಾಗುವುದರವರೆಗೆ. 2011ರ ವಿಶ್ವಕಪ್ ಗೆಲುವಿನಿಂದ ವಂಚಿತರಾದ ನನ್ನ ಸ್ನೇಹಿತ ರಾಹುಲ್ ದ್ರಾವಿಡ್‌ಗೆ ತುಂಬಾ ಸಂತೋಷವಾಗಿದೆ ಆದರೆ ಈ T20 ವಿಶ್ವಕಪ್ ಗೆಲುವಿಗೆ ಅವರ ಕೊಡುಗೆ ಅಪಾರವಾಗಿದೆ.

ರೋಹಿತ್‌ ಶರ್ಮಾ ಓರ್ವ ಅದ್ಭುತ ನಾಯಕತ್ವ! 2023ರ ODI ವಿಶ್ವಕಪ್‌ನ ಸೋಲನ್ನು ಹಿಂದೆ ಹಾಕುವುದು ಮತ್ತು ನಮ್ಮ ಎಲ್ಲಾ ಆಟಗಾರರನ್ನು T20 ವಿಶ್ವಕಪ್‌ಗೆ ಪ್ರೇರೇಪಿಸುವಂತೆ ಮಾಡಿರುವುದು ನಿಜಕ್ಕೂ ಶ್ಲಾಘನೀಯ.

ಜಸ್ಪ್ರೀತ್ ಬುಮ್ರ, ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿ ಜೊತೆಗೆ ವಿರಾಟ್‌ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಇಬ್ಬರೂ ಅರ್ಹರು. ಇದೊಂದು ಒಟ್ಟು ತಂಡದ ಪ್ರಯತ್ನವಾಗಿದ್ದು, ಎಲ್ಲಾ ಆಟಗಾರರು, ತರಬೇತುದಾರರು, ಸಹಾಯಕ ಸಿಬ್ಬಂದಿ, ಮತ್ತು ಹೃತ್ಪೂರ್ವಕ ಅಭಿನಂದನೆಗಳು.

https://x.com/sachin_rt/status/1807143208067162270

ವಿರೇಂದ್ರ ಸೆಹ್ವಾಗ್‌ ಟ್ವೀಟ್‌: ಹೌದು ! ಕಾಯುವಿಕೆ ಕೊನೆಗೊಳ್ಳುತ್ತದೆ. ಇದನ್ನು ಗೆಲ್ಲಲು ಏನು ಪುನರಾಗಮನ. ನಾವು 13 ವರ್ಷಗಳ ನಂತರ ವಿಶ್ವಕಪ್ ಗೆದ್ದಿದ್ದೇವೆ ಮತ್ತು 17 ವರ್ಷಗಳ ನಂತರ ಟಿ20 ವಿಶ್ವಕಪ್ ಗೆದ್ದಿದ್ದೇವೆ. ಐಪಿಎಲ್ ಆರಂಭವಾದ ನಂತರ ನಮಗೆ ಮೊದಲ ಟಿ20 ವಿಶ್ವಕಪ್ ಗೆದ್ದಿದೆ.

https://x.com/virendersehwag/status/1807112419388608725

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

4 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

5 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago