ಕ್ರೀಡೆ

ಏಕದಿನ ಬೌಲಿಂಗ್ ‍ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೆ ಮರಳಿದ ಮುಹಮ್ಮದ್ ಸಿರಾಜ್

ನವದೆಹಲಿ : ಶ್ರೀಲಂಕಾ ವಿರುದ್ಧ ಭಾನುವಾರ ನಡೆದ ಏಶ್ಯಕಪ್ ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಭಾರತದ ವೇಗದ ಬೌಲರ್ ಮುಹಮ್ಮದ್ ಸಿರಾಜ್ ಮತ್ತೊಮ್ಮೆ ವಿಶ್ವದ ನಂ.1 ಏಕದಿನ ಬೌಲರ್ ಆಗಿ ಹೊರಹೊಮ್ಮಿದ್ದಾರೆ.

ಸಿರಾಜ್ ಎರಡನೇ ಬಾರಿ ನಂ.1 ಸ್ಥಾನಕ್ಕೇರಿದ್ದಾರೆ. ಈ ಹಿಂದೆ 2023 ರ ಜನವರಿ ಹಾಗೂ ಮಾರ್ಚ್ ನಡುವೆ ಅಗ್ರ ಸ್ಥಾನದಲ್ಲಿದ್ದರು. ನಂತರ ನಂ.1 ಸ್ಥಾನ ಆಸ್ಟ್ರೇಲಿಯದ ಜೋಶ್ ಹೇಝಲ್ ವುಡ್ ಪಾಲಾಯಿತು.

ಏಶ್ಯಕಪ್ ನಲ್ಲಿ 12.20ರ ಸರಾಸರಿಯಲ್ಲಿ ಹತ್ತು ವಿಕೆಟ್ ಗಳನ್ನು ಕಬಳಿಸಿದ ನಂತರ ಸಿರಾಜ್ ರ್ಯಾಂಕಿಂಗ್ ನಲ್ಲಿ ಎಂಟು ಸ್ಥಾನ ಭಡ್ತಿ ಪಡೆದಿದ್ದಾರೆ.

21 ರನ್ ಗೆ 6 ವಿಕೆಟ್ ಕಬಳಿಸಿದ್ದ ಸಿರಾಜ್ ಶ್ರೀಲಂಕಾವನ್ನು ಏಶ್ಯಕಪ್ ಫೈನಲ್ ನಲ್ಲಿ 50 ರನ್ ಗಳಿಗೆ ಆಲೌಟ್ ಮಾಡಲು ಪ್ರಮುಖ ಪಾತ್ರವಹಿಸಿದ್ದರು. ಒಂದೇ ಓವರ್ ನಲ್ಲಿ ನಾಲ್ಕು-ವಿಕೆಟ್ ಗಳನ್ನು ಕಬಳಿಸಿದ್ದ ಸಿರಾಜ್ ಅವರು ಡ್ರೀಮ್ ಸ್ಪೆಲ್ ಎಸೆದಿದ್ದರು.

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

1 hour ago

2025ರ ನೆನಪು: ಅಗಲಿದ ಗಣ್ಯರ ನೆನಪಿನ ಮಾಲಿಕೆ…

2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ  ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…

1 hour ago

ಆಪರೇಟರ್ ಸಮಯ ಪ್ರಜ್ಞೆ: ನಕಲಿ ಜಿಪಿಎಗೆ ಬ್ರೇಕ್

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…

1 hour ago

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

11 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

13 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

13 hours ago