ನವದೆಹಲಿ : ಶ್ರೀಲಂಕಾ ವಿರುದ್ಧ ಭಾನುವಾರ ನಡೆದ ಏಶ್ಯಕಪ್ ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಭಾರತದ ವೇಗದ ಬೌಲರ್ ಮುಹಮ್ಮದ್ ಸಿರಾಜ್ ಮತ್ತೊಮ್ಮೆ ವಿಶ್ವದ ನಂ.1 ಏಕದಿನ ಬೌಲರ್ ಆಗಿ ಹೊರಹೊಮ್ಮಿದ್ದಾರೆ.
ಸಿರಾಜ್ ಎರಡನೇ ಬಾರಿ ನಂ.1 ಸ್ಥಾನಕ್ಕೇರಿದ್ದಾರೆ. ಈ ಹಿಂದೆ 2023 ರ ಜನವರಿ ಹಾಗೂ ಮಾರ್ಚ್ ನಡುವೆ ಅಗ್ರ ಸ್ಥಾನದಲ್ಲಿದ್ದರು. ನಂತರ ನಂ.1 ಸ್ಥಾನ ಆಸ್ಟ್ರೇಲಿಯದ ಜೋಶ್ ಹೇಝಲ್ ವುಡ್ ಪಾಲಾಯಿತು.
ಏಶ್ಯಕಪ್ ನಲ್ಲಿ 12.20ರ ಸರಾಸರಿಯಲ್ಲಿ ಹತ್ತು ವಿಕೆಟ್ ಗಳನ್ನು ಕಬಳಿಸಿದ ನಂತರ ಸಿರಾಜ್ ರ್ಯಾಂಕಿಂಗ್ ನಲ್ಲಿ ಎಂಟು ಸ್ಥಾನ ಭಡ್ತಿ ಪಡೆದಿದ್ದಾರೆ.
21 ರನ್ ಗೆ 6 ವಿಕೆಟ್ ಕಬಳಿಸಿದ್ದ ಸಿರಾಜ್ ಶ್ರೀಲಂಕಾವನ್ನು ಏಶ್ಯಕಪ್ ಫೈನಲ್ ನಲ್ಲಿ 50 ರನ್ ಗಳಿಗೆ ಆಲೌಟ್ ಮಾಡಲು ಪ್ರಮುಖ ಪಾತ್ರವಹಿಸಿದ್ದರು. ಒಂದೇ ಓವರ್ ನಲ್ಲಿ ನಾಲ್ಕು-ವಿಕೆಟ್ ಗಳನ್ನು ಕಬಳಿಸಿದ್ದ ಸಿರಾಜ್ ಅವರು ಡ್ರೀಮ್ ಸ್ಪೆಲ್ ಎಸೆದಿದ್ದರು.
ಜೀವಾವಧಿ ಶಿಕ್ಷೆಯ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಜೀವಾವಧಿ ಶಿಕ್ಷೆ ಎಂದರೆ, ಅಪರಾಽ ತನ್ನ ಜೀವನ ಪರ್ಯಂತ…
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್ಸಿ), ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ಪ್ರತಿ…
50ಕ್ಕೂ ಹೆಚ್ಚು ಸ್ಟಿಂಗ್ ಆಪರೇಷನ್ ; 20 ವೈದ್ಯರುಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿ ಮಹಾರಾಷ್ಟ್ರದ ಭೀಡ್ ಜಿಲ್ಲೆಯ ಪಾರ್ಲಿ ಗ್ರಾಮದ…
ಮೈಸೂರಿನ ಭಾರತ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಆಂದೋಲನ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮ ಮೈಸೂರು : ಕ್ಯಾನ್ಸರ್…
ಬೆಂಗಳೂರು : ಫಾರಿನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿ ಪ್ರಿಯಕರನ ಕೈಕಾಲು ಕಟ್ಟಿದ ಪ್ರಿಯತಮೆ ಆತನನ್ನು ಬೆಂಕಿ…
ಕೊಡಗು : ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ…