ನವದೆಹಲಿ : ಶ್ರೀಲಂಕಾ ವಿರುದ್ಧ ಭಾನುವಾರ ನಡೆದ ಏಶ್ಯಕಪ್ ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಭಾರತದ ವೇಗದ ಬೌಲರ್ ಮುಹಮ್ಮದ್ ಸಿರಾಜ್ ಮತ್ತೊಮ್ಮೆ ವಿಶ್ವದ ನಂ.1 ಏಕದಿನ ಬೌಲರ್ ಆಗಿ ಹೊರಹೊಮ್ಮಿದ್ದಾರೆ.
ಸಿರಾಜ್ ಎರಡನೇ ಬಾರಿ ನಂ.1 ಸ್ಥಾನಕ್ಕೇರಿದ್ದಾರೆ. ಈ ಹಿಂದೆ 2023 ರ ಜನವರಿ ಹಾಗೂ ಮಾರ್ಚ್ ನಡುವೆ ಅಗ್ರ ಸ್ಥಾನದಲ್ಲಿದ್ದರು. ನಂತರ ನಂ.1 ಸ್ಥಾನ ಆಸ್ಟ್ರೇಲಿಯದ ಜೋಶ್ ಹೇಝಲ್ ವುಡ್ ಪಾಲಾಯಿತು.
ಏಶ್ಯಕಪ್ ನಲ್ಲಿ 12.20ರ ಸರಾಸರಿಯಲ್ಲಿ ಹತ್ತು ವಿಕೆಟ್ ಗಳನ್ನು ಕಬಳಿಸಿದ ನಂತರ ಸಿರಾಜ್ ರ್ಯಾಂಕಿಂಗ್ ನಲ್ಲಿ ಎಂಟು ಸ್ಥಾನ ಭಡ್ತಿ ಪಡೆದಿದ್ದಾರೆ.
21 ರನ್ ಗೆ 6 ವಿಕೆಟ್ ಕಬಳಿಸಿದ್ದ ಸಿರಾಜ್ ಶ್ರೀಲಂಕಾವನ್ನು ಏಶ್ಯಕಪ್ ಫೈನಲ್ ನಲ್ಲಿ 50 ರನ್ ಗಳಿಗೆ ಆಲೌಟ್ ಮಾಡಲು ಪ್ರಮುಖ ಪಾತ್ರವಹಿಸಿದ್ದರು. ಒಂದೇ ಓವರ್ ನಲ್ಲಿ ನಾಲ್ಕು-ವಿಕೆಟ್ ಗಳನ್ನು ಕಬಳಿಸಿದ್ದ ಸಿರಾಜ್ ಅವರು ಡ್ರೀಮ್ ಸ್ಪೆಲ್ ಎಸೆದಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…