ಕ್ರೀಡೆ

ಏಕದಿನ ಬೌಲಿಂಗ್ ‍ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೆ ಮರಳಿದ ಮುಹಮ್ಮದ್ ಸಿರಾಜ್

ನವದೆಹಲಿ : ಶ್ರೀಲಂಕಾ ವಿರುದ್ಧ ಭಾನುವಾರ ನಡೆದ ಏಶ್ಯಕಪ್ ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಭಾರತದ ವೇಗದ ಬೌಲರ್ ಮುಹಮ್ಮದ್ ಸಿರಾಜ್ ಮತ್ತೊಮ್ಮೆ ವಿಶ್ವದ ನಂ.1 ಏಕದಿನ ಬೌಲರ್ ಆಗಿ ಹೊರಹೊಮ್ಮಿದ್ದಾರೆ.

ಸಿರಾಜ್ ಎರಡನೇ ಬಾರಿ ನಂ.1 ಸ್ಥಾನಕ್ಕೇರಿದ್ದಾರೆ. ಈ ಹಿಂದೆ 2023 ರ ಜನವರಿ ಹಾಗೂ ಮಾರ್ಚ್ ನಡುವೆ ಅಗ್ರ ಸ್ಥಾನದಲ್ಲಿದ್ದರು. ನಂತರ ನಂ.1 ಸ್ಥಾನ ಆಸ್ಟ್ರೇಲಿಯದ ಜೋಶ್ ಹೇಝಲ್ ವುಡ್ ಪಾಲಾಯಿತು.

ಏಶ್ಯಕಪ್ ನಲ್ಲಿ 12.20ರ ಸರಾಸರಿಯಲ್ಲಿ ಹತ್ತು ವಿಕೆಟ್ ಗಳನ್ನು ಕಬಳಿಸಿದ ನಂತರ ಸಿರಾಜ್ ರ್ಯಾಂಕಿಂಗ್ ನಲ್ಲಿ ಎಂಟು ಸ್ಥಾನ ಭಡ್ತಿ ಪಡೆದಿದ್ದಾರೆ.

21 ರನ್ ಗೆ 6 ವಿಕೆಟ್ ಕಬಳಿಸಿದ್ದ ಸಿರಾಜ್ ಶ್ರೀಲಂಕಾವನ್ನು ಏಶ್ಯಕಪ್ ಫೈನಲ್ ನಲ್ಲಿ 50 ರನ್ ಗಳಿಗೆ ಆಲೌಟ್ ಮಾಡಲು ಪ್ರಮುಖ ಪಾತ್ರವಹಿಸಿದ್ದರು. ಒಂದೇ ಓವರ್ ನಲ್ಲಿ ನಾಲ್ಕು-ವಿಕೆಟ್ ಗಳನ್ನು ಕಬಳಿಸಿದ್ದ ಸಿರಾಜ್ ಅವರು ಡ್ರೀಮ್ ಸ್ಪೆಲ್ ಎಸೆದಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago