ನವದೆಹಲಿ : ಶ್ರೀಲಂಕಾ ವಿರುದ್ಧ ಭಾನುವಾರ ನಡೆದ ಏಶ್ಯಕಪ್ ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಭಾರತದ ವೇಗದ ಬೌಲರ್ ಮುಹಮ್ಮದ್ ಸಿರಾಜ್ ಮತ್ತೊಮ್ಮೆ ವಿಶ್ವದ ನಂ.1 ಏಕದಿನ ಬೌಲರ್ ಆಗಿ ಹೊರಹೊಮ್ಮಿದ್ದಾರೆ.
ಸಿರಾಜ್ ಎರಡನೇ ಬಾರಿ ನಂ.1 ಸ್ಥಾನಕ್ಕೇರಿದ್ದಾರೆ. ಈ ಹಿಂದೆ 2023 ರ ಜನವರಿ ಹಾಗೂ ಮಾರ್ಚ್ ನಡುವೆ ಅಗ್ರ ಸ್ಥಾನದಲ್ಲಿದ್ದರು. ನಂತರ ನಂ.1 ಸ್ಥಾನ ಆಸ್ಟ್ರೇಲಿಯದ ಜೋಶ್ ಹೇಝಲ್ ವುಡ್ ಪಾಲಾಯಿತು.
ಏಶ್ಯಕಪ್ ನಲ್ಲಿ 12.20ರ ಸರಾಸರಿಯಲ್ಲಿ ಹತ್ತು ವಿಕೆಟ್ ಗಳನ್ನು ಕಬಳಿಸಿದ ನಂತರ ಸಿರಾಜ್ ರ್ಯಾಂಕಿಂಗ್ ನಲ್ಲಿ ಎಂಟು ಸ್ಥಾನ ಭಡ್ತಿ ಪಡೆದಿದ್ದಾರೆ.
21 ರನ್ ಗೆ 6 ವಿಕೆಟ್ ಕಬಳಿಸಿದ್ದ ಸಿರಾಜ್ ಶ್ರೀಲಂಕಾವನ್ನು ಏಶ್ಯಕಪ್ ಫೈನಲ್ ನಲ್ಲಿ 50 ರನ್ ಗಳಿಗೆ ಆಲೌಟ್ ಮಾಡಲು ಪ್ರಮುಖ ಪಾತ್ರವಹಿಸಿದ್ದರು. ಒಂದೇ ಓವರ್ ನಲ್ಲಿ ನಾಲ್ಕು-ವಿಕೆಟ್ ಗಳನ್ನು ಕಬಳಿಸಿದ್ದ ಸಿರಾಜ್ ಅವರು ಡ್ರೀಮ್ ಸ್ಪೆಲ್ ಎಸೆದಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…