ನವದೆಹಲಿ : ಶ್ರೀಲಂಕಾ ವಿರುದ್ಧ ಭಾನುವಾರ ನಡೆದ ಏಶ್ಯಕಪ್ ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಭಾರತದ ವೇಗದ ಬೌಲರ್ ಮುಹಮ್ಮದ್ ಸಿರಾಜ್ ಮತ್ತೊಮ್ಮೆ ವಿಶ್ವದ ನಂ.1 ಏಕದಿನ ಬೌಲರ್ ಆಗಿ ಹೊರಹೊಮ್ಮಿದ್ದಾರೆ.
ಸಿರಾಜ್ ಎರಡನೇ ಬಾರಿ ನಂ.1 ಸ್ಥಾನಕ್ಕೇರಿದ್ದಾರೆ. ಈ ಹಿಂದೆ 2023 ರ ಜನವರಿ ಹಾಗೂ ಮಾರ್ಚ್ ನಡುವೆ ಅಗ್ರ ಸ್ಥಾನದಲ್ಲಿದ್ದರು. ನಂತರ ನಂ.1 ಸ್ಥಾನ ಆಸ್ಟ್ರೇಲಿಯದ ಜೋಶ್ ಹೇಝಲ್ ವುಡ್ ಪಾಲಾಯಿತು.
ಏಶ್ಯಕಪ್ ನಲ್ಲಿ 12.20ರ ಸರಾಸರಿಯಲ್ಲಿ ಹತ್ತು ವಿಕೆಟ್ ಗಳನ್ನು ಕಬಳಿಸಿದ ನಂತರ ಸಿರಾಜ್ ರ್ಯಾಂಕಿಂಗ್ ನಲ್ಲಿ ಎಂಟು ಸ್ಥಾನ ಭಡ್ತಿ ಪಡೆದಿದ್ದಾರೆ.
21 ರನ್ ಗೆ 6 ವಿಕೆಟ್ ಕಬಳಿಸಿದ್ದ ಸಿರಾಜ್ ಶ್ರೀಲಂಕಾವನ್ನು ಏಶ್ಯಕಪ್ ಫೈನಲ್ ನಲ್ಲಿ 50 ರನ್ ಗಳಿಗೆ ಆಲೌಟ್ ಮಾಡಲು ಪ್ರಮುಖ ಪಾತ್ರವಹಿಸಿದ್ದರು. ಒಂದೇ ಓವರ್ ನಲ್ಲಿ ನಾಲ್ಕು-ವಿಕೆಟ್ ಗಳನ್ನು ಕಬಳಿಸಿದ್ದ ಸಿರಾಜ್ ಅವರು ಡ್ರೀಮ್ ಸ್ಪೆಲ್ ಎಸೆದಿದ್ದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…