ಕ್ರೀಡೆ

ಮುಂಬೈ: ವಿಶ್ವಕಪ್‌ ವಿಜಯೋತ್ಸವ ಪರೇಡ್‌ನಲ್ಲಿ 11 ಮಂದಿಗೆ ಗಾಯ

ಮುಂಬೈ: ವೆಸ್ಟ್‌ ಇಂಡೀಸ್‌ ಹಾಗೂ ಅಮೇರಿಕಾ ಸಹಭಾಗಿತ್ವದಲ್ಲಿ ನಡೆದ 9ನೇ ಆವೃತ್ತಿಯ ಟಿ20 ವಿಶ್ವಕಪ್‌ ಜಯಿಸಿದ ಟೀಂ ಇಂಡಿಯಾಗೆ ಭಾರತದಲ್ಲಿ ಭರ್ಜರಿ ಸ್ವಾಗತ ಸಿಕ್ಕಿತು.

ಟೀಂ ಇಂಡಿಯಾ ಆಟಗಾರರು ಗುರುವಾರ (ಜುಲೈ.4) ವೆಸ್ಟ್‌ ಇಂಡೀಸ್‌ ನಿಂದ ಭಾರತಕ್ಕೆ ಆಗಮಿಸಿದ್ದರು. ಮುಂಬೈನ ವಾಂಖೆಡೆ ಕ್ರೀಡಾಂಗಣಕ್ಕೆ ಆಗಮಿಸಿದ ರೋಹಿತ್‌ ಅಂಡ್‌ ಟೀಂಗೆ ಅದ್ದೂರಿ ಸ್ವಾಗತ ದೊರೆಯಿತು.

ಇನ್ನು ವಿಶ್ವಕಪ್‌ ವಿಜಯೋತ್ಸವ ಆಚರಿಸಿದ ಟೀಂ ಇಂಡಿಯಾ ಮರೀನ್‌ ಡ್ರೈವ್‌ ಬೀಚ್‌ನಿಂದ 9 ಕಿಮೀ ವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಹೊರಡಲಾಯಿತು.

ಈ ವಿಜಯೋತ್ಸವ ಪೆರೇಡ್‌ ಮಾರ್ಗದಲ್ಲಿ ಲಕ್ಷಾಂತರ ಮಂದಿ ಅಭಿಮಾನಿಗಳು ಜಮಾಯಿಸಿದ್ದು, ಹನ್ನೊಂದಕ್ಕು ಅಧಿಕ ಮಂದಿಗೆ ಕಾಲ್ತುಳಿತದಿಂದ ಗಾಯಗೊಂಡಿದ್ದಾರೆ. ಗಾಐಗೊಂಡವರ ಪೈಕಿ ಒಂಭತ್ತು ಮಂದಿಯನ್ನು ಸರ್ಕಾರಿ ಜಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಪರೀತ ಜನಸಂದಣಿಯಿಂದ ಗಾಯಗಳ ಜೊತೆಯಲ್ಲಿ ಉಸಿರಾಟ ತೊಂದರೆಯನ್ನು ನೆರೆದಿದ್ದ ಅಭಿಮಾನಿಗಳು ಅನುಭವಿಸಿದ್ದಾರೆ. ಈ ಬಗ್ಗೆ ಜೆಜೆ ಗ್ರೂಪ್‌ ಆಫ್‌ ಆಸ್ಪಟಲ್‌ ಡೀನ್‌ ಮಾಹಿತಿ ನೀಡಿದ್ದಾರೆ.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

8 mins ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

13 mins ago

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

54 mins ago

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

1 hour ago

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌…

1 hour ago

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

2 hours ago