ಕ್ರೀಡೆ

ಚೆನ್ನೈ ತಂಡವನ್ನು 9 ವಿಕೆಟ್‌ಗಳ ಅಂತರದಲ್ಲಿ ಮಣಿಸಿದ ಮುಂಬೈ

ಮುಂಬೈ: ರೋಹಿತ್‌ ಶರ್ಮಾ ಹಾಗೂ ಸೂರ್ಯಕುಮಾರ್‌ ಯಾದವ್‌ ಅವರ ಅಮೋಘ ಬ್ಯಾಟಿಂಗ್‌ ಬಲದಿಂದ ಮುಂಬೈ ಇಂಡಿಯನ್ಸ್‌ ತಂಡ 9 ವಿಕೆಟ್ಗಳ ಅಂತರದಿಂದ ಚೆನ್ನೈ ಸೂಪರ್‌ಕಿಂಗ್ಸ್‌ ತಂಡವನ್ನು ಮಣಿಸಿತು.

ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಚೆನ್ನೈ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 176 ರನ್‌ ಗಳಿಸಿತು. ಈ ಮೊತ್ತ ಬೆನ್ನತ್ತಿದ ಮುಂಬೈ 15.4 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್‌ ಕಳೆದುಕೊಂಡು 177 ರನ್‌ ಬಾರಿಸಿ ಗೆಲುವಿನ ನಗೆ ಬೀರಿತು.

ಚೆನ್ನೈ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಚೆನ್ನೈಗೆ ಆರಂಭಿಕ ಆಘಾತ ಎದುರಾಯಿತು. ರಚಿನ್‌ 5(9), ರಸೀದ್‌ 19(20) ರನ್‌ ಗಳಿಸಿ ಔಟಾದರು.

ಬಳಿಕ ಬಂದ ಆಯೂಷ್‌ 32(15), ಶಿವಂ ದುಬೆ 50(32) ರನ್‌, ನಾಯಕ ಧೋನಿ 4(6) ರನ್‌ ಗಳಿಸಿ ಔಟಾದರು. ಮತ್ತೊಂದೆಡೆ ನಾಟ್‌ಔಟ್‌ ಆಗಿ ಬ್ಯಾಟ್‌ ಬೀಸಿದ ರವೀಂದ್ರ ಜೆಡೇಜಾ 35 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್‌ ಸಹಿತ 53 ರನ್‌ ಬಾರಿಸಿದರು. ಓವರ್‌ಟನ್‌ 4(3) ರನ್‌ ಗಳಿಸಿ ನಾಟ್‌ಔಟ್‌ ಆಗಿ ಉಳಿದರು.

ಮುಂಬೈ ಪರ ಬುಮ್ರಾ ಎರಡು, ಚಾಹರ್‌, ಅಶ್ವಾನಿ ಕುಮಾರ್‌ ಮತ್ತು ಸ್ಯಾಂಟ್ನರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಮುಂಬೈ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಮುಂಬೈಗೆ ಮಾಜಿ ನಾಯಕ ರೋಹಿತ್‌ ಶರ್ಮಾ ಹಾಗೂ ಸ್ಟಾರ್‌ ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌ ಉತ್ತಮ ಜೊತೆಯಾಟ ನೀಡುವ ಮೂಲಕ ತಂಡದ ಗೆಲುವಿಗೆ ಸಹಕರಿಸಿದರು.

ಈ ಜೋಡಿ ನಾಟ್‌ ಔಟ್‌ ಆಗಿ ಪಂದ್ಯವನ್ನು ಗೆದ್ದುಕೊಟ್ಟರು. ರೋಹಿತ್‌ 45 ಎಸತ, 4 ಬೌಂಡರಿ ಮತ್ತು 6 ಸಿಕ್ಸರ್‌ ಸಹಿತ 76 ರನ್‌ ಬಾರಿಸಿದರೇ, ಸೂರ್ಯ 30 ಎಸೆತಗಳಲ್ಲಿ 6 ಬೌಂಡರಿ, 5 ಸಿಕ್ಸರ್‌ ಸಹಿತ 68 ರನ್‌ ಚಚ್ಚಿದರು. ಆರಂಭಿಕ ಬ್ಯಾಟರ್‌ ರಿಕೆಲ್ಟನ್‌ 24(19) ರನ್‌ ಗಳಿಸಿ ಔಟಾದರು.

ಸಿಎಸ್‌ಕೆ ಪರ ರವೀಂದ್ರ ಜಡೇಜಾ ಒಂದು ವಿಕೆಟ್‌ ಪಡೆದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

4 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

4 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

4 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

4 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

4 hours ago