ಕ್ರೀಡೆ

ಮೈಸೂರು ವಾರಿಯರ್ಸ್‌ಗೆ ವೀರೋಚಿತ ಸೋಲು, ಅಗ್ರ ಸ್ಥಾನಕ್ಕೆ ಗುಲ್ಬರ್ಗ

ಬೆಂಗಳೂರು: ಮಳೆಯಿಂದಾಗಿ ಕಠಿಣ ಸವಾಲನ್ನು ಎದುರಿಸಿದ ಮೈಸೂರು ವಾರಿಯರ್ಸ್‌ ತಂಡ ಶ್ರೇಯಸ್‌ ಗೋಪಾಲ್‌ ಅವರ ಆಲ್ರೌಂಡ್‌ ಪ್ರದರ್ಶನದ ನಡುವೆಯೂ ಗುಲ್ಬರ್ಗ ಮಿಸ್ಟಿಕ್ಸ್‌ ವಿರುದ್ಧ 7 ರನ್‌ಗಳ ವೀರೋಚಿತ ಸೋಲನುಭವಿಸಿದೆ.

ಉತ್ತಮ ಬೌಲಿಂಗ್‌ ಪ್ರದರ್ಶಿಸಿದ ಮನೀಶ್‌ ಪಾಂಡೆ ಪಡೆ ಜಯದೊಂದಿಗೆ ಅಂಕಪಟ್ಟಿಯಲ್ಲಿ ಮೇಲುಗೈ ಸಾಧಿಸಿದೆ.
11 ಓವರ್‌ಗಳಲ್ಲಿ 110 ರನ್‌ ಗಳಿಸಬೇಕಾಗಿದ್ದ ಮೈಸೂರು ವಾರಿಯರ್ಸ್‌ 102 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.
ಗುಲ್ವರ್ಗ ಮೈಸ್ಟಿಕ್ಸ್‌ 17.3 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 148 ರನ್‌ ಗಳಿಸಿತ್ತು. ಮಳೆಯಿಂದಾಗಿ ಮೈಸೂರಿಗೆ 11 ಓವರ್‌ಗಳಲ್ಲಿ 110 ರನ್‌ ಜಯದ ಗುರಿ ನೀಡಲಾಗಿತ್ತು. ಬೌಲಿಂಗ್‌ನಲ್ಲಿ ಮಿಂಚಿದ್ದ ಶ್ರೇಯಸ್‌ ಗೋಪಾಲ್‌, ಬ್ಯಾಟಿಂಗ್‌ನಲ್ಲಿ 32 ರನ್‌ ಸಿಡಿಸಿದರೂ ಜಯ ದಕ್ಕಲಿಲ್ಲ. ಪ್ರತಿಯೊಂದು ಪಂದ್ಯದಲ್ಲೂ ಮಿಂಚುತ್ತಿದ್ದ ಪವನ್‌ ದೇಶಪಾಂಡೆ ಈ ಪಂದ್ಯದಲ್ಲೂ 25 ರನ್‌ ಗಳಿಸಿದರು. ಭರತ್‌ ಧುರಿ 7 ರನ್‌ ಗಳಿಸಲು 8 ಎಸೆತಗಳನ್ನು ಎದುರಿಸಬೇಕಾಯಿತು. ಅಂತಿಮವಾಗಿ ಮೈಸೂರು ವಾರಿಯರ್ಸ್‌ 7 ವಿಕೆಟ್‌ ನಷ್ಟಕ್ಕೆ 102 ರನ್‌ ಗಳಿಸಿತು.
ಮೈಸೂರಿಗೆ 110 ರನ್‌ ಗುರಿ:
ನಾಯಕ ಮನೀಶ್‌ ಪಾಂಡೆ ಅವರ ಅಜೇಯ 57 ರನ್‌ ನೆರವಿನಿಂದ ಗುಲ್ಬರ್ಗ ಮಿಸ್ಟಿಕ್ಸ್‌ ತಂಡ ಮೈಸೂರು ವಾರಿಯರ್ಸ್‌ಗೆ 110 ರನ್‌ಗಳ ಗುರಿ ನೀಡಿದೆ. ಟಾಸ್‌ ಗೆದ್ದ ಮೈಸೂರು ವಾರಿಯರ್ಸ್‌ ಫೀಲ್ಡಿಂಗ್‌ ಆಯ್ದುಕೊಂಡಿತು. ಪ್ರತಿಯೊಂದು ಪಂದ್ಯದಲ್ಲೂ ಉತ್ತಮ ಪ್ರದರ್ಶನ ತೋರಿದ್ದ ಗುಲ್ಬರ್ಗ ಮಿಸ್ಟಿಕ್ಸ್‌ 17.3 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 148 ರನ್‌ ಗಳಿಸಿತ್ತು. ಈ ಸಂದರ್ಭದಲ್ಲಿ ಪಂದ್ಯಕ್ಕೆ ಮಳೆ ಅಡ್ಡಿ ಮಾಡಿತು. ನಿರಂತರವಾಗಿ ಸುರಿದ ಮಳೆಯಿಂದಾಗಿ ಪಂದ್ಯವನ್ನು ವಿಜೆಡಿ ನಿಯಮಕ್ಕೆ ಅಳವಡಿಸಲಾಯಿತು. ಇದರಿಂದ ಮೈಸೂರಿಗೆ 11 ಓವರ್‌ಗಳಲ್ಲಿ 110 ರನ್‌ಗಳ ಗುರಿ ಸಿಕ್ಕಿತು.
ಗುಲ್ಬರ್ಗ ಮಿಸ್ಟಿಕ್ಸ್‌ನ ಆರಂಭ ಉತ್ತಮವಾಗಿರಲಿಲ್ಲ, ಆರಂಭಿಕ ಆಟಗಾರ ರೋಹನ್‌ ಪಾಟೀಲ್‌ ಕೇವಲ 6 ರನ್‌ ಗಳಿಸುತ್ತಲೇ ವಿಕೆಟ್‌ ಕಳದುಕೊಂಡರು. ದೇವದತ್ತ ಪಡಿಕ್ಕಲ್‌ ಅವರಿಗೂ ಈ ದಿನ ಉತ್ತಮವಾಗಿರಲಿಲ್ಲ. 14ರನ್‌ ಗಳಿಸಿ ಶ್ರೇಯಸ್‌ ಗೋಪಾಲ್‌ಗೆ ವಿಕೆಟ್‌ ಒಪ್ಪಿಸಿದರು. ಜೆಸ್ವತ್‌ ಆಚಾರ್ಯ (34) ಹಾಗೂ ಕೃಷ್ಣನ್‌ ಶ್ರೀಜಿತ್‌ (30) ಅವರು ಉತ್ತಮ ಜೊತೆಯಾಟವಾಡಿದರು. ಆದರೆ ನಾಯಕ ಮನೀಶ್‌ ಪಾಂಡೆ ಕೇವಲ 27 ಎಸೆತಗಳನ್ನೆದುರಿಸಿ 3 ಬೌಂಡರಿ ಮತ್ತು 4 ಸಿಕ್ಸರ್‌ ನೆರವಿನಿಂದ ಗಳಿಸಿದ ಅಜೇಯ 57 ರನ್‌ನಲ್ಲಿ ನಾಯಕನ ಜವಾಬ್ದಾರಿ ಎದ್ದುಕಾಣುತ್ತಿತ್ತು. ಇದುವರೆಗಿನ ಪಂದ್ಯಗಳಲ್ಲಿ ಉತ್ತಮ ಬೌಲಿಂಗ್‌ ಪ್ರದರ್ಶಿಸಿದ್ದ ಶ್ರೇಯಸ್‌ ಗೋಪಾಲ್‌ 2 ವಿಕೆಟ್‌ ಗಳಿಸಿದರೂ 45 ರನ್‌ ನೀಡಿ ದುಬಾರಿ ಬೌಲರ್‌ ಎನಿಸಿದರು. ಆದಿತ್ಯ ಗೋಯಲ್‌ ಹಾಗೂ ಶುಭಾಂಗ್‌ ಹೆಗ್ಡೆ ತಲಾ 1 ವಿಕೆಟ್‌ ಗಳಿಸಿದರು.
ಸಂಕ್ಷಿಪ್ತ ಸ್ಕೋರ್‌:
ಗುಲ್ಬರ್ಗ ಮಿಸ್ಟಿಕ್ಸ್‌: 17.3 ಓವರ್‌ಗಳಲ್ಲಿ 4 ವಿಕೆಟ್‌ಗೆ 148 (ಮನೀಶ್‌ ಪಾಂಡೆ 57* ಜಸ್ವತ್‌ ಆಚಾರ್ಯ 34, ಕೃಷ್ಣನ್‌ ಶ್ರೀಜಿತ್‌ 30 ಶ್ರೇಯಸ್‌ ಗೋಪಾಲ್‌ 45ಕ್ಕೆ 2)
ಮೈಸೂರು ವಾರಿಯರ್ಸ್‌: 11 ಓವರ್‌ಗಳಲ್ಲಿ 7 ವಿಕೆಟ್‌ಗೆ 102 (ಶ್ರೇಯಸ್‌ ಗೋಪಾಲ್‌ 32, ಪವನ್‌ ದೇಶಪಾಂಡೆ 25, ಕಾರ್ತಿಕ್‌ 19ಕ್ಕೆ 2, ರಿತೇಶ್‌ ಭಟ್ಕಳ್‌ 8ಕ್ಕೆ 2)

andolanait

Recent Posts

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

5 mins ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

15 mins ago

ನಟ ದರ್ಶನ್‌ ವಿರುದ್ಧ ಸುಳ್ಳು ದಾಖಲೆ ಸೃಷ್ಟಿ ಆರೋಪ: ಕನ್ನಡ ಒಕ್ಕೂಟದಿಂದ ಧರಣಿಗೆ ಕರೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್‌ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ…

29 mins ago

ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ

ಟೆಹರಾನ್:‌ ಇರಾನ್‌ ಮತ್ತು ಇಸ್ರೇಲ್‌ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್‌ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ…

42 mins ago

ನಾಳೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭೇಟಿ

ದಕ್ಷಿಣ ಕನ್ನಡ: ನಾಳೆ(ಮಾರ್ಚ್.‌1) ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರು ಭೇಟಿ ನೀಡಲಿದ್ದಾರೆ.…

52 mins ago

ಮಾರ್ಚ್.‌11ರಿಂದ ಸರ್ಕಾರಿ ವೈದ್ಯರ ಮುಷ್ಕರ

ಬೆಂಗಳೂರು: ಸರ್ಕಾರದ ಶಿಸ್ತುಕ್ರಮಕ್ಕೂ ಕ್ಯಾರೆ ಎನ್ನದ ಸರ್ಕಾರಿ ವೈದ್ಯರು ತಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಮಾ.11ರಿಂದ ನಡೆಸಲು…

59 mins ago