Categories: ಕ್ರೀಡೆ

ಭಾರತ ತಂಡದಲ್ಲಿ ಮರಳಿ ಸ್ಥಾನ ಪಡೆಯುವತ್ತ ಗುರಿ‌ಯಿಟ್ಟಿರುವ ಶ್ರೇಯಸ್‌ ಅಯ್ಯರ್

ಮುಂಬೈ: ನವೆಂಬರ್.23ರಂದು ನಡೆಯಲಿರುವ ಟಿ20 ಕ್ರಿಕೆಟ್‌ ಟೂರ್ನಿಗೆ ಮುಂಬೈ ತಂಡದ ನಾಯಕರಾಗಿ ಶ್ರೇಯಸ್‌ ಅಯ್ಯರ್‌ ಅವರನ್ನು ಮುಂಬೈ ಕ್ರಿಕೆಟ್‌ ಸಂಸ್ಥೆ ನೇಮಕ ಮಾಡಲಾಗಿದೆ.

2023ರ ಏಕದಿನ ವಿಶ್ವಕಪ್‌ ನಂತರ ಅವರು ಗಾಯದ ಸಮಸ್ಯೆಯಿಂದ ಭಾರತ ಕ್ರಿಕೆಟ್‌ ತಂಡದಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಈಗ ಗಾಯದ ಸಮಸ್ಯೆಯಿಂದ ಹೊರಬಂದಿರುವ ಅವರು ಭಾರತ ತಂಡದಲ್ಲಿ ಮತ್ತೆ ತಮ್ಮ ಕ್ರಿಕೆಟ್‌ ಇನ್ನಿಂಗ್ಸ್‌ ಆರಂಭಿಸುವ ಅವಕಾಶಕ್ಕಾಗಿ ಕಾಯುತ್ತಿದ್ದಾರೆ.

ಡೊಮೆಸ್ಟಿಕ್‌ ಟೂರ್ನಿಗಳಲ್ಲಿ ಅತ್ಯುತ್ತಮ ಲಯದಲ್ಲಿರುವ ಶ್ರೇಯಸ್‌ ಅಯ್ಯರ್‌ ರಣಜಿ ಟೂರ್ನಿಯಲ್ಲಿ ಮುಂಬೈ ತಂಡದ ಪರವಾಗಿ 452 ರನ್‌ ಗಳಿಸಿದರು. ಒಡಿಶಾ ತಂಡದ ಎದುರು 233 ರನ್‌ ಗಳಿಸಿದ್ದರು.

ಇದೇ ತಿಂಗಳು ನಡೆಯುವ ಸೈಯದ್‌ ಮುಷ್ತಾಕ್‌ ಟಿ20 ಟೂರ್ನಿಯಲ್ಲಿ ಮುಂಬೈ ತಂಡವನ್ನು ಮುನ್ನಡೆಸುವ ಜೊತೆಗೆ ವೈಯುಕ್ತಿಕವಾಗಿಯೂ ತಮ್ಮ ಸಾಮರ್ಥ್ಯ ತೋರಿಸಿ ಭಾರತ ತಂಡದ ಜೆರ್ಸಿ ತೊಡಲು ಸಿದ್ದವಾಗಿದ್ದಾರೆ.

ರಣಜಿ ಕ್ರಿಕೆಟ್‌ ಟೂರ್ನಿಯಲ್ಲಿ ಮುಂಬೈ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಅಜಿಂಕ್ಯ ರಹಾನೆ ಕೂಡ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

4 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

12 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

12 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

12 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

12 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

12 hours ago