ಮುಂಬೈ: ನವೆಂಬರ್.23ರಂದು ನಡೆಯಲಿರುವ ಟಿ20 ಕ್ರಿಕೆಟ್ ಟೂರ್ನಿಗೆ ಮುಂಬೈ ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಅವರನ್ನು ಮುಂಬೈ ಕ್ರಿಕೆಟ್ ಸಂಸ್ಥೆ ನೇಮಕ ಮಾಡಲಾಗಿದೆ.
2023ರ ಏಕದಿನ ವಿಶ್ವಕಪ್ ನಂತರ ಅವರು ಗಾಯದ ಸಮಸ್ಯೆಯಿಂದ ಭಾರತ ಕ್ರಿಕೆಟ್ ತಂಡದಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಈಗ ಗಾಯದ ಸಮಸ್ಯೆಯಿಂದ ಹೊರಬಂದಿರುವ ಅವರು ಭಾರತ ತಂಡದಲ್ಲಿ ಮತ್ತೆ ತಮ್ಮ ಕ್ರಿಕೆಟ್ ಇನ್ನಿಂಗ್ಸ್ ಆರಂಭಿಸುವ ಅವಕಾಶಕ್ಕಾಗಿ ಕಾಯುತ್ತಿದ್ದಾರೆ.
ಡೊಮೆಸ್ಟಿಕ್ ಟೂರ್ನಿಗಳಲ್ಲಿ ಅತ್ಯುತ್ತಮ ಲಯದಲ್ಲಿರುವ ಶ್ರೇಯಸ್ ಅಯ್ಯರ್ ರಣಜಿ ಟೂರ್ನಿಯಲ್ಲಿ ಮುಂಬೈ ತಂಡದ ಪರವಾಗಿ 452 ರನ್ ಗಳಿಸಿದರು. ಒಡಿಶಾ ತಂಡದ ಎದುರು 233 ರನ್ ಗಳಿಸಿದ್ದರು.
ಇದೇ ತಿಂಗಳು ನಡೆಯುವ ಸೈಯದ್ ಮುಷ್ತಾಕ್ ಟಿ20 ಟೂರ್ನಿಯಲ್ಲಿ ಮುಂಬೈ ತಂಡವನ್ನು ಮುನ್ನಡೆಸುವ ಜೊತೆಗೆ ವೈಯುಕ್ತಿಕವಾಗಿಯೂ ತಮ್ಮ ಸಾಮರ್ಥ್ಯ ತೋರಿಸಿ ಭಾರತ ತಂಡದ ಜೆರ್ಸಿ ತೊಡಲು ಸಿದ್ದವಾಗಿದ್ದಾರೆ.
ರಣಜಿ ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಅಜಿಂಕ್ಯ ರಹಾನೆ ಕೂಡ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಹನೂರು : ಕಾಡಾನೆ ದಾಳಿಗೆ ಹಲವಾರು ವರ್ಷಗಳಿಂದ ಪೋಷಣೆ ಮಾಡಿದ್ದ ತೆಂಗು, ಬಾಳೆ, ಮಾವು, ಅಡಿಕೆ ಬೆಳೆ ನಾಶವಾಗಿ ರೈತನಿಗೆ…
ಮೈಸೂರು : ರಾಜ್ಯದ ಅನೇಕ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಆದರೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.94 ಫಲಿತಾಂಶ ಬಂದಿದ್ದು ಹೇಗೆ. ಹಠಕ್ಕೆ…
ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್…
ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…
ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…
ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ ನವೀನ್…