ಕ್ರೀಡೆ

ಹುಬ್ಬಳ್ಳಿ ಟೈಗರ್ಸ್ ಗೆಲುವಿನ ಓಟಕ್ಕೆ ಮೈಸೂರು ಲಗಾಮು: ಕರುಣ್ ಪಡೆಗೆ ಸತತ ನಾಲ್ಕನೇ ಗೆಲುವು

ಬೆಂಗಳೂರು : ಮೈಸೂರು ವಾರಿಯರ್ಸ್‌ ತಂಡವು ಹುಬ್ಬಳ್ಳಿ ಟೈಗರ್ಸ್ ತಂಡವನ್ನು ಸೋಲಿಸುವ ಮೂಲಕ ಹುಬ್ಬಳ್ಳಿ ಅಜೇಯ ಓಟಕ್ಕೆ ಲಗಾಮು ಹಾಕಿದೆ. ಜತೆಗೆ ಸತತ ನಾಲ್ಕನೇ ಗೆಲುವು ಸಾಧಿಸಿ ಆತ್ಮವಿಶ್ವಾಸ ವೃದ್ಧಿಸಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟ್ ವಾಡಿದ ಹುಬ್ಬಳ್ಳಿ ಟೈಗರ್ಸ್ ತಂಡವು ಆರಂಭಿಕ ದಾಂಡಿಗ ಲುವ್ನಿತ್ ಸಿಸೋಡಿಯಾ (೬೩ ಎಸೆತಗಳಲ್ಲಿ ೧೦೫ ರನ್) ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ ನಿಗದಿತ ೨೦ ಓವರ್‌ಗಳಲ್ಲಿ ೭ ವಿಕೆಟ್ ಕಳೆದುಕೊಂಡು ೧೮೫ ರನ್ ಕಲೆಹಾಕಿತು. ಬೃಹತ್ ಮೊತ್ತ ಬೆನ್ನತ್ತಿದ ಮೈಸೂರು ವಾರಿಯರ್ಸ್, ಆರಂಭಿಕ ಬ್ಯಾಟರ್ ಆರ್.ಸಮರ್ಥ್ ಅವರ ಸಮರ್ಥ ಆಟದೊಂದಿಗೆ ೭ ಎಸೆತಗಳು ಬಾಕಿ ಇರುವಂತೆಯೇ ೬ ವಿಕೆಟ್‌ಗಳ ಜಯ ದಾಖಲಿಸಿತು.

ಹುಬ್ಬಳ್ಳಿ ಪರ ಆರಂಬಿಕ ದಾಂಡಿಗ ಸಿಸೋಡಿಯಾ ಶತಕಕ್ಕೆ ನಾಯಕ ಮನೀಶ್ ಪಾಂಡೆ ೩೩(೨೧) ಸಾಥ್ ನೀಡಿದರು. ಪ್ರವೀಣ್ ದುಬೆ ೧೬(೬), ನಾಗ ಭರತ್ ೧೨(೧೭) ಆಟದಿಂದ ತಂಡವು ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ನೆರವಾದರು. ಉತ್ತಮ ಬೌಲಿಂಗ್ ಪ್ರದರ್ಶನ ತೋರಿದ ವಾರಿಯರ್ಸ್‌ನ ಸಿಎ ಕಾರ್ತಿಕ್ ೪ ಓವರ್ ಬೌಲಿಂಗ್ ವಾಡಿ ೫೦ ರನ್ ನೀಡಿ ಪ್ರಮುಖ ೪ ವಿಕೆಟ್ ಕಬಳಿಸಿದರು. ಶಶಿಕುವಾರ್, ಮನೋಜ್ ಬಾಂಗಡೆ ತಲಾ ೧ ವಿಕೆಟ್ ಪಡೆದರು.

ಬೃಹತ್ ಮೊತ್ತ ಚೇಸ್ ವಾಡಿದ ವಾರಿಯರ್ಸ್‌ಗೆ ಆರಂಭಿಕ ದಾಂಡಿಗ ಆರ್.ಸಮರ್ಥ್ ಉತ್ತಮ ಆರಂಭ ಒದಗಿಸಿದರು, ೪೨ ಎಸೆತಗಳಲ್ಲಿ ೩ ಸಿಕ್ಸರ್ ಮತ್ತು ೬ ಬೌಂಡರಿ ಮೂಲಕ ೭೩ ರನ್ ಕಲೆಹಾಕಿ ತಂಡದ ಗೆಲುವಿಗೆ ಕಾರಣರಾದರು. ನಾುಂಕ ಕರುಣ್ ನಾುಂರ್ ೪೧(೨೫) ಉತ್ತಮ ಇನ್ನಿಂಗ್ಸ್ ಕಟ್ಟಿದರು. ಅಂತಿಮ ಐದು ಓವರ್‌ಗಳಲ್ಲಿ ೪೨ ರನ್‌ಗಳ ಅಗತ್ಯವಿದ್ದಾಗ, ಶೋಯಬ್ ವ್ಯಾನೇಜರ್ (೨೧*) ಮತ್ತು ಶಿವಕುವಾರ್ ರಕ್ಷಿತ್ (೨೨*) ಅವರ ಜೊತೆಯಾಟದಿಂದ ೧೮.೫ ಓವರ್‌ಗಳಲ್ಲಿ ಆರು ವಿಕೆಟ್‌ಗಳು ಬಾಕಿ ಇರುವಂತೆಯೇ ತಂಡ ಜಯದ ಮಂದಹಾಸ ಬೀರಿತು.

ಸಂಕ್ಷಿಪ್ತ ಸ್ಕೋರ್ :

ಹುಬ್ಬಳ್ಳಿ ಟೈಗರ್ಸ್ : ೨೦ ಓವರ್‌ಗಳಲ್ಲಿ ೧೮೫-೭: ಲುವಿನಿತ್ ಸಿಸೋಡಿಯಾ ೧೦೫(೬೩), ಮನೀಶ್ ಪಾಂಡೆ ೩೩(೨೧), ಪ್ರವೀಣ್ ದುಬೆ೧೬(೬) ಸಿಎ ಕಾರ್ತಿಕ್ ೪-೫೦, ಶಶಿಕುವಾರ್ ೧-೨೫, ಮನೋಜ್ ಭಾಂಡಗೆ ೧-೨೮

ಮೈಸೂರು ವಾರಿಯರ್ಸ್ : ೧೮.೫ ಓವರ್‌ಗಳಲ್ಲಿ ೧೮೮-೪: ಆರ್. ಸಮರ್ಥ್ ೭೩(೪೨), ಕರುಣ್ ನಾಯರ್ ೪೧(೨೫), ಸಿಎ ಕಾರ್ತಿಕ್ ೨೯(೧೮) ಪ್ರವೀಣ್ ದುಬೆ ೩-೩೮.

ಪಂದ್ಯಶ್ರೇಷ್ಠ : ಆರ್. ಸಮರ್ಥ್

andolanait

Recent Posts

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

2 mins ago

ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…

20 mins ago

ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣ: ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌

ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ. ಪ್ರಕರಣ ರದ್ದು…

2 hours ago

ಹಾಸನ| ಫೈನಾನ್ಸ್‌ ಸಿಬ್ಬಂದಿ ಕಿರುಕುಳ ಆರೋಪ: ವಿಷ ಕುಡಿದು ರೈತ ಆತ್ಮಹತ್ಯೆ

ಹಾಸನ: ಮನೆ ಸೀಜ್‌ ಮಾಡುವುದಾಗಿ ಫೈನಾನ್ಸ್‌ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ…

2 hours ago

ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಹೊತ್ತೊಯ್ದ ಚಿರತೆ

ರಾಮನಗರ: ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಹೊರವಲಯದ…

2 hours ago

4 ಲಕ್ಷ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌

ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ…

3 hours ago