ಕ್ರೀಡೆ

ಹುಬ್ಬಳ್ಳಿ ಟೈಗರ್ಸ್ ಗೆಲುವಿನ ಓಟಕ್ಕೆ ಮೈಸೂರು ಲಗಾಮು: ಕರುಣ್ ಪಡೆಗೆ ಸತತ ನಾಲ್ಕನೇ ಗೆಲುವು

ಬೆಂಗಳೂರು : ಮೈಸೂರು ವಾರಿಯರ್ಸ್‌ ತಂಡವು ಹುಬ್ಬಳ್ಳಿ ಟೈಗರ್ಸ್ ತಂಡವನ್ನು ಸೋಲಿಸುವ ಮೂಲಕ ಹುಬ್ಬಳ್ಳಿ ಅಜೇಯ ಓಟಕ್ಕೆ ಲಗಾಮು ಹಾಕಿದೆ. ಜತೆಗೆ ಸತತ ನಾಲ್ಕನೇ ಗೆಲುವು ಸಾಧಿಸಿ ಆತ್ಮವಿಶ್ವಾಸ ವೃದ್ಧಿಸಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟ್ ವಾಡಿದ ಹುಬ್ಬಳ್ಳಿ ಟೈಗರ್ಸ್ ತಂಡವು ಆರಂಭಿಕ ದಾಂಡಿಗ ಲುವ್ನಿತ್ ಸಿಸೋಡಿಯಾ (೬೩ ಎಸೆತಗಳಲ್ಲಿ ೧೦೫ ರನ್) ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ ನಿಗದಿತ ೨೦ ಓವರ್‌ಗಳಲ್ಲಿ ೭ ವಿಕೆಟ್ ಕಳೆದುಕೊಂಡು ೧೮೫ ರನ್ ಕಲೆಹಾಕಿತು. ಬೃಹತ್ ಮೊತ್ತ ಬೆನ್ನತ್ತಿದ ಮೈಸೂರು ವಾರಿಯರ್ಸ್, ಆರಂಭಿಕ ಬ್ಯಾಟರ್ ಆರ್.ಸಮರ್ಥ್ ಅವರ ಸಮರ್ಥ ಆಟದೊಂದಿಗೆ ೭ ಎಸೆತಗಳು ಬಾಕಿ ಇರುವಂತೆಯೇ ೬ ವಿಕೆಟ್‌ಗಳ ಜಯ ದಾಖಲಿಸಿತು.

ಹುಬ್ಬಳ್ಳಿ ಪರ ಆರಂಬಿಕ ದಾಂಡಿಗ ಸಿಸೋಡಿಯಾ ಶತಕಕ್ಕೆ ನಾಯಕ ಮನೀಶ್ ಪಾಂಡೆ ೩೩(೨೧) ಸಾಥ್ ನೀಡಿದರು. ಪ್ರವೀಣ್ ದುಬೆ ೧೬(೬), ನಾಗ ಭರತ್ ೧೨(೧೭) ಆಟದಿಂದ ತಂಡವು ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ನೆರವಾದರು. ಉತ್ತಮ ಬೌಲಿಂಗ್ ಪ್ರದರ್ಶನ ತೋರಿದ ವಾರಿಯರ್ಸ್‌ನ ಸಿಎ ಕಾರ್ತಿಕ್ ೪ ಓವರ್ ಬೌಲಿಂಗ್ ವಾಡಿ ೫೦ ರನ್ ನೀಡಿ ಪ್ರಮುಖ ೪ ವಿಕೆಟ್ ಕಬಳಿಸಿದರು. ಶಶಿಕುವಾರ್, ಮನೋಜ್ ಬಾಂಗಡೆ ತಲಾ ೧ ವಿಕೆಟ್ ಪಡೆದರು.

ಬೃಹತ್ ಮೊತ್ತ ಚೇಸ್ ವಾಡಿದ ವಾರಿಯರ್ಸ್‌ಗೆ ಆರಂಭಿಕ ದಾಂಡಿಗ ಆರ್.ಸಮರ್ಥ್ ಉತ್ತಮ ಆರಂಭ ಒದಗಿಸಿದರು, ೪೨ ಎಸೆತಗಳಲ್ಲಿ ೩ ಸಿಕ್ಸರ್ ಮತ್ತು ೬ ಬೌಂಡರಿ ಮೂಲಕ ೭೩ ರನ್ ಕಲೆಹಾಕಿ ತಂಡದ ಗೆಲುವಿಗೆ ಕಾರಣರಾದರು. ನಾುಂಕ ಕರುಣ್ ನಾುಂರ್ ೪೧(೨೫) ಉತ್ತಮ ಇನ್ನಿಂಗ್ಸ್ ಕಟ್ಟಿದರು. ಅಂತಿಮ ಐದು ಓವರ್‌ಗಳಲ್ಲಿ ೪೨ ರನ್‌ಗಳ ಅಗತ್ಯವಿದ್ದಾಗ, ಶೋಯಬ್ ವ್ಯಾನೇಜರ್ (೨೧*) ಮತ್ತು ಶಿವಕುವಾರ್ ರಕ್ಷಿತ್ (೨೨*) ಅವರ ಜೊತೆಯಾಟದಿಂದ ೧೮.೫ ಓವರ್‌ಗಳಲ್ಲಿ ಆರು ವಿಕೆಟ್‌ಗಳು ಬಾಕಿ ಇರುವಂತೆಯೇ ತಂಡ ಜಯದ ಮಂದಹಾಸ ಬೀರಿತು.

ಸಂಕ್ಷಿಪ್ತ ಸ್ಕೋರ್ :

ಹುಬ್ಬಳ್ಳಿ ಟೈಗರ್ಸ್ : ೨೦ ಓವರ್‌ಗಳಲ್ಲಿ ೧೮೫-೭: ಲುವಿನಿತ್ ಸಿಸೋಡಿಯಾ ೧೦೫(೬೩), ಮನೀಶ್ ಪಾಂಡೆ ೩೩(೨೧), ಪ್ರವೀಣ್ ದುಬೆ೧೬(೬) ಸಿಎ ಕಾರ್ತಿಕ್ ೪-೫೦, ಶಶಿಕುವಾರ್ ೧-೨೫, ಮನೋಜ್ ಭಾಂಡಗೆ ೧-೨೮

ಮೈಸೂರು ವಾರಿಯರ್ಸ್ : ೧೮.೫ ಓವರ್‌ಗಳಲ್ಲಿ ೧೮೮-೪: ಆರ್. ಸಮರ್ಥ್ ೭೩(೪೨), ಕರುಣ್ ನಾಯರ್ ೪೧(೨೫), ಸಿಎ ಕಾರ್ತಿಕ್ ೨೯(೧೮) ಪ್ರವೀಣ್ ದುಬೆ ೩-೩೮.

ಪಂದ್ಯಶ್ರೇಷ್ಠ : ಆರ್. ಸಮರ್ಥ್

andolanait

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

9 hours ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

10 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

11 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

16 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

16 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

17 hours ago