ಕ್ರೀಡೆ

ಮಹಾರಾಜ ಟ್ರೋಫಿ: 2024: ಮೈಸೂರು ವಾರಿಯರ್ಸ್ ತಂಡ ಪ್ರಕಟ

ಬೆಂಗಳೂರು: ಮಹಾರಾಜ ಟ್ರೋಫಿ (ಕೆಎಸ್‌ಸಿಎ) ಟಿ20 2024ರ ಪಂದ್ಯಾವಳಿಯಲ್ಲಿ ಆಡಲಿರುವ ಆಟಗಾರರ ಪಟ್ಟಿಯನ್ನು ಮೈಸೂರು ವಾರಿಯರ್ಸ್ ತಂಡ ಪ್ರಕಟಿಸಿದೆ. ಭಾರತದ ಪ್ರಮುಖ ಅಗರಬತ್ತಿ ತಯಾರಕರು ಮತ್ತು ಮೈಸೂರು ವಾರಿಯರ್ನನ ಮಾಲೀಕರಾಗಿರುವ ಎನ್‌ಆರ್ ಗ್ರೂಪ್, ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 2024ರಲ್ಲಿ ಮೈಸೂರು ವಾರಿಯರ್ಸ್ ತಂಡದ ಪರವಾಗಿ ಅಡಲು 18 ಅಟಗಾರರ ಜೊತೆ ಒಪ್ಪಂದ ಮಾಡಿಕೊಂಡಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಗುರುವಾರ (ಜು.25 ನಡೆದ ಹರಾಜು ಪ್ರಕ್ರಿಯೆಯಲ್ಲಿ ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಈ ಆಟಗಾರರರು ಆಗಸ್ಟ್ 15 ರಿಂದ ಸೆಪ್ಟೆಂಬರ್ ರವರೆಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಮಹಾರಾಜ ಟ್ರೋಫಿಯ ಮೂರನೇ ಆವೃತ್ತಿಯಲ್ಲಿ ಮೈಸೂರು ತಂಡದ ಪರವಾಗಿ ಆಡಲಿದ್ದಾರೆ.

ಹರಾಜು ಪ್ರಕ್ರಿಯೆ ಬಳಿಕ ಮಾತನಾಡಿದ ಮೈಸೂರು ವಾರಿಯರ್ಸ್‌ ಮಾಲೀಕ ಅರ್ಜುನ್ ರಂಗ, “ಮಹಾರಾಜ ಟ್ರೋಫಿಯ ಮೂರನೇ ಆವೃತ್ತಿಯಲ್ಲಿ ಮೈಸೂರು ವಾರಿಯರ್ಸ್ ತಂಡದ ಪರವಾಗಿ ಆಡಲು ರಾಜ್ಯದ ಅತ್ಯುತ್ತಮ ಆಟಗಾರರನ್ನು ಆಯ್ಕೆ ಮಾಡಿರುವುದು ನಮಗೆ ಖುಷಿ ಕೊಟ್ಟಿದೆ. ಈ ವರ್ಷ ನಾವು ಪ್ರಶಸ್ತಿ ಗೆಲ್ಲುವ ನಂಬಿಕೆ ಇದೆ” ಎಂದು ಹೇಳಿದರು.

ಮೈಸೂರು ವಾರಿಯರ್ಸ್‌ ಮಾಲೀಕರು ಮತ್ತು ರಂಗ ಸನ್ಸ್ ಏರೋಸ್ಪೇಸ್‌ ಸಿಇಓ ಶ್ರೀ ಪವನ್ ರಂಗ ಮಾತನಾಡಿ, “ಆಯ್ಕೆಗೊಂಡಿರುವ ಆಟಗಾರರು ಎನ್‌ಆರ್ ಗ್ರೂಪ್ ಅಧೀನದ ಮೈಸೂರು ವಾರಿಯರ್ಸ್ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲಿದ್ದಾರೆ ಎಂಬ ಭರವಸೆ ನಮಗಿದೆ” ಎಂದು ಹೇಳಿದರು.

ಈ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್ ತಂಡವು ಹುಬ್ಬಳ್ಳಿ ಟೈಗರ್ಸ್, ಬೆಂಗಳೂರು ಬ್ಲಾನ್ಸರ್ನ್, ಮಂಗಳೂರು ಡ್ರಾಗನ್ಸ್, ಗುಲ್ಬರ್ಗಾ ಮಿಸ್ಟಿಕ್ಸ್, ಮತ್ತು ಶಿವಮೊಗ್ಗ ಲಯನ್ಸ್ ಸೇರಿದಂತೆ ಐದು ತಂಡಗಳ ವಿರುದ್ಧ ಆಡಲಿದೆ.

ಮೈಸೂರು ವಾರಿಯರ್ಸ್ ತಂಡದ ಅಟಗಾರರ ಹೆಸರುಗಳು ಹೀಗಿವೆ:
ಕ್ರಮ ಸಂಖ್ಯೆ

ಮೈಸೂರು ವಾರಿಯರ್ಸ್

1. ಕಾರ್ತಿಕ್.ಸಿ ಅಜಿತ್
2. ಕಾರ್ತಿಕ್.ಎಸ್.ಯು
3. ಕರುಣ್ ನಾಯರ್
4. ಸಮಿತ್ ದ್ರಾವಿಡ್
5. ಹರ್ಷಿಲ್‌ ಧರ್ಮನಿ
6. ಮನೋಜ್ ಭಾಂಡಗೆ
7. ಜಗದೀಶ ಸುಚಿತ್
8. ಗೌತಮ ಕೃಷ್ಣಪ್ಪ
9. ವಿದ್ಯಾಧರ ಪಾಟೀಲ
10. ವೆಂಕಟೇಶ ಎಂ
11. ಗೌತಮ ಮಿಶ್ರಾ
12. ಧನುಷ್ಯ ಗೌಡ
13. ದೀಪಕ್ ದೇವಾಡಿಗ
14. ಸುಮಿತ್ ಕುಮಾರ್
15. ಸ್ಮಯನ್ ಶ್ರೀವಾಸ್ತವ
16. ಜಾಸ್ಪರ್ ಇ ಜಿ
17. ಸರ್ಫರಾಜ್ ಅಶ್ರಫ್
18. ಪ್ರಸಿದ್ಧ ಕೃಷ್ಣ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

8 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

8 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

9 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

9 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

21 hours ago