ಬೆಂಗಳೂರು: ಮಹಾರಾಜ ಟ್ರೋಫಿ (ಕೆಎಸ್ಸಿಎ) ಟಿ20 2024ರ ಪಂದ್ಯಾವಳಿಯಲ್ಲಿ ಆಡಲಿರುವ ಆಟಗಾರರ ಪಟ್ಟಿಯನ್ನು ಮೈಸೂರು ವಾರಿಯರ್ಸ್ ತಂಡ ಪ್ರಕಟಿಸಿದೆ. ಭಾರತದ ಪ್ರಮುಖ ಅಗರಬತ್ತಿ ತಯಾರಕರು ಮತ್ತು ಮೈಸೂರು ವಾರಿಯರ್ನನ ಮಾಲೀಕರಾಗಿರುವ ಎನ್ಆರ್ ಗ್ರೂಪ್, ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 2024ರಲ್ಲಿ ಮೈಸೂರು ವಾರಿಯರ್ಸ್ ತಂಡದ ಪರವಾಗಿ ಅಡಲು 18 ಅಟಗಾರರ ಜೊತೆ ಒಪ್ಪಂದ ಮಾಡಿಕೊಂಡಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಗುರುವಾರ (ಜು.25 ನಡೆದ ಹರಾಜು ಪ್ರಕ್ರಿಯೆಯಲ್ಲಿ ಆಟಗಾರರನ್ನು ಆಯ್ಕೆ ಮಾಡಲಾಗಿದ್ದು, ಈ ಆಟಗಾರರರು ಆಗಸ್ಟ್ 15 ರಿಂದ ಸೆಪ್ಟೆಂಬರ್ ರವರೆಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಮಹಾರಾಜ ಟ್ರೋಫಿಯ ಮೂರನೇ ಆವೃತ್ತಿಯಲ್ಲಿ ಮೈಸೂರು ತಂಡದ ಪರವಾಗಿ ಆಡಲಿದ್ದಾರೆ.
ಹರಾಜು ಪ್ರಕ್ರಿಯೆ ಬಳಿಕ ಮಾತನಾಡಿದ ಮೈಸೂರು ವಾರಿಯರ್ಸ್ ಮಾಲೀಕ ಅರ್ಜುನ್ ರಂಗ, “ಮಹಾರಾಜ ಟ್ರೋಫಿಯ ಮೂರನೇ ಆವೃತ್ತಿಯಲ್ಲಿ ಮೈಸೂರು ವಾರಿಯರ್ಸ್ ತಂಡದ ಪರವಾಗಿ ಆಡಲು ರಾಜ್ಯದ ಅತ್ಯುತ್ತಮ ಆಟಗಾರರನ್ನು ಆಯ್ಕೆ ಮಾಡಿರುವುದು ನಮಗೆ ಖುಷಿ ಕೊಟ್ಟಿದೆ. ಈ ವರ್ಷ ನಾವು ಪ್ರಶಸ್ತಿ ಗೆಲ್ಲುವ ನಂಬಿಕೆ ಇದೆ” ಎಂದು ಹೇಳಿದರು.
ಮೈಸೂರು ವಾರಿಯರ್ಸ್ ಮಾಲೀಕರು ಮತ್ತು ರಂಗ ಸನ್ಸ್ ಏರೋಸ್ಪೇಸ್ ಸಿಇಓ ಶ್ರೀ ಪವನ್ ರಂಗ ಮಾತನಾಡಿ, “ಆಯ್ಕೆಗೊಂಡಿರುವ ಆಟಗಾರರು ಎನ್ಆರ್ ಗ್ರೂಪ್ ಅಧೀನದ ಮೈಸೂರು ವಾರಿಯರ್ಸ್ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲಿದ್ದಾರೆ ಎಂಬ ಭರವಸೆ ನಮಗಿದೆ” ಎಂದು ಹೇಳಿದರು.
ಈ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್ ತಂಡವು ಹುಬ್ಬಳ್ಳಿ ಟೈಗರ್ಸ್, ಬೆಂಗಳೂರು ಬ್ಲಾನ್ಸರ್ನ್, ಮಂಗಳೂರು ಡ್ರಾಗನ್ಸ್, ಗುಲ್ಬರ್ಗಾ ಮಿಸ್ಟಿಕ್ಸ್, ಮತ್ತು ಶಿವಮೊಗ್ಗ ಲಯನ್ಸ್ ಸೇರಿದಂತೆ ಐದು ತಂಡಗಳ ವಿರುದ್ಧ ಆಡಲಿದೆ.
ಮೈಸೂರು ವಾರಿಯರ್ಸ್ ತಂಡದ ಅಟಗಾರರ ಹೆಸರುಗಳು ಹೀಗಿವೆ:
ಕ್ರಮ ಸಂಖ್ಯೆ
ಮೈಸೂರು ವಾರಿಯರ್ಸ್
1. ಕಾರ್ತಿಕ್.ಸಿ ಅಜಿತ್
2. ಕಾರ್ತಿಕ್.ಎಸ್.ಯು
3. ಕರುಣ್ ನಾಯರ್
4. ಸಮಿತ್ ದ್ರಾವಿಡ್
5. ಹರ್ಷಿಲ್ ಧರ್ಮನಿ
6. ಮನೋಜ್ ಭಾಂಡಗೆ
7. ಜಗದೀಶ ಸುಚಿತ್
8. ಗೌತಮ ಕೃಷ್ಣಪ್ಪ
9. ವಿದ್ಯಾಧರ ಪಾಟೀಲ
10. ವೆಂಕಟೇಶ ಎಂ
11. ಗೌತಮ ಮಿಶ್ರಾ
12. ಧನುಷ್ಯ ಗೌಡ
13. ದೀಪಕ್ ದೇವಾಡಿಗ
14. ಸುಮಿತ್ ಕುಮಾರ್
15. ಸ್ಮಯನ್ ಶ್ರೀವಾಸ್ತವ
16. ಜಾಸ್ಪರ್ ಇ ಜಿ
17. ಸರ್ಫರಾಜ್ ಅಶ್ರಫ್
18. ಪ್ರಸಿದ್ಧ ಕೃಷ್ಣ
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…