ಕ್ರೀಡೆ

ಕಳೆದ ಬಾರಿಯ ಫೈನಲ್ಸ್ ಸೋಲಿಗೆ ಸೇಡು ತೀರಿಸಿಕೊಂಡ ಮೈಸೂರು ವಾರಿಯರ್ಸ್

ಬೆಂಗಳೂರು: ಪ್ರತಿಷ್ಠಿತ ಮಹಾರಾಜ ಕಪ್‌ನ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಮೈಸೂರು ವಾರಿಯರ್ಸ್‌ ತಂಡ ಹುಬ್ಬಳ್ಳಿ ಟೈಗರ್ಸ್‌ ತಂಡವನ್ನು 9 ರನ್‌ಗಳಿಂದ ಸೋಲಿಸುವ ಮೂಲಕ ಮೈಸೂರು ತಂಡ ಫೈನಲ್‌ ಪ್ರವೇಶಿಸಿದೆ. ಈ ಮೂಲಕ ಈಗಾಗಲೇ ಫೈನಲ್‌ ಪ್ರವೇಶ ಪಡೆದಿರುವ ಬೆಂಗಳೂರು ತಂಡವನ್ನು ನಾಳೆ ಎದುರಿಸಲಿದೆ.

ಇಂದು ನಡೆದ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮೈಸೂರು ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 177 ರನ್‌ ಗಳಿಸಿತು. ಮೈಸೂರು ತಂಡದ ಪರ ಆಕರ್ಷಕ ಬ್ಯಾಟಿಂಗ್‌ ನಡೆಸಿದ ಆರಂಭಿಕ ಆಟಗಾರ ಎಸ್.ಯು ಕಾರ್ತಿಕ್‌ 53 ರನ್‌ ಗಳಿಸಿದರು. ಮಧ್ಯಮ ಕ್ರಮಾಂಕದ ಆಟಗಾರ ಶ್ರೀನಿವಾಸ್‌ ಶರತ್‌, ಸುಮಿತ್‌ ಗಳಿಸುವ ಮೂಲಕ ತಂಡದ ಮೊತ್ತವನ್ನು 177ಕ್ಕೆ ತಲುಪಿಸಿದರು. ಇನ್ನು ಹುಬ್ಳಿ ಪರವಾಗಿ ಕುಮಾರ್‌ 3, ವಿದ್ವತ್‌ ಕಾವೇರಪ್ಪ 2 ಮತ್ತು ನಿಶ್ಚಿಂತ್‌ ಪೈ ಹಾಗೂ ಕಾರಿಯಪ್ಪ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ಸೆಪ್ಟೆಂಬರ್‌.1ರಂದು ಚಿನ್ನಸ್ವಾಮಿ ಮೈದಾನದಲ್ಲಿ ಫೈನಲ್‌ ಪಂದ್ಯ ಆಯೋಜಿಸಲಾಗಿದೆ. ಈ ಫೈನಲ್‌ ಪಂದ್ಯದಲ್ಲಿ ಟೂರ್ನಿಯ 2 ಬಲಿಷ್ಠ ತಂಡಗಳಾದ ಬೆಂಗಳೂರು ಬ್ಲಾಸ್ಟರ್ಸ್‌ ಹಾಗೂ ಮೈಸೂರು ವಾರಿಯರ್ಸ್‌ ತಂಡಗಳು ಮುಖಾಮುಖಿಯಾಗಲಿದ್ದು, ವಿಜಯಲಕ್ಷ್ಮಿ ಯಾವ ತಂಡದ ಪಾಲಾಗಳಿದ್ದಾಳೆ ಎಂಬುದನ್ನು ಕಾದುನೋಡಬೇಕಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

2 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

4 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

9 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

9 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

10 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

10 hours ago