ಕ್ರೀಡೆ

ಕಳೆದ ಬಾರಿಯ ಫೈನಲ್ಸ್ ಸೋಲಿಗೆ ಸೇಡು ತೀರಿಸಿಕೊಂಡ ಮೈಸೂರು ವಾರಿಯರ್ಸ್

ಬೆಂಗಳೂರು: ಪ್ರತಿಷ್ಠಿತ ಮಹಾರಾಜ ಕಪ್‌ನ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಮೈಸೂರು ವಾರಿಯರ್ಸ್‌ ತಂಡ ಹುಬ್ಬಳ್ಳಿ ಟೈಗರ್ಸ್‌ ತಂಡವನ್ನು 9 ರನ್‌ಗಳಿಂದ ಸೋಲಿಸುವ ಮೂಲಕ ಮೈಸೂರು ತಂಡ ಫೈನಲ್‌ ಪ್ರವೇಶಿಸಿದೆ. ಈ ಮೂಲಕ ಈಗಾಗಲೇ ಫೈನಲ್‌ ಪ್ರವೇಶ ಪಡೆದಿರುವ ಬೆಂಗಳೂರು ತಂಡವನ್ನು ನಾಳೆ ಎದುರಿಸಲಿದೆ.

ಇಂದು ನಡೆದ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮೈಸೂರು ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 177 ರನ್‌ ಗಳಿಸಿತು. ಮೈಸೂರು ತಂಡದ ಪರ ಆಕರ್ಷಕ ಬ್ಯಾಟಿಂಗ್‌ ನಡೆಸಿದ ಆರಂಭಿಕ ಆಟಗಾರ ಎಸ್.ಯು ಕಾರ್ತಿಕ್‌ 53 ರನ್‌ ಗಳಿಸಿದರು. ಮಧ್ಯಮ ಕ್ರಮಾಂಕದ ಆಟಗಾರ ಶ್ರೀನಿವಾಸ್‌ ಶರತ್‌, ಸುಮಿತ್‌ ಗಳಿಸುವ ಮೂಲಕ ತಂಡದ ಮೊತ್ತವನ್ನು 177ಕ್ಕೆ ತಲುಪಿಸಿದರು. ಇನ್ನು ಹುಬ್ಳಿ ಪರವಾಗಿ ಕುಮಾರ್‌ 3, ವಿದ್ವತ್‌ ಕಾವೇರಪ್ಪ 2 ಮತ್ತು ನಿಶ್ಚಿಂತ್‌ ಪೈ ಹಾಗೂ ಕಾರಿಯಪ್ಪ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ಸೆಪ್ಟೆಂಬರ್‌.1ರಂದು ಚಿನ್ನಸ್ವಾಮಿ ಮೈದಾನದಲ್ಲಿ ಫೈನಲ್‌ ಪಂದ್ಯ ಆಯೋಜಿಸಲಾಗಿದೆ. ಈ ಫೈನಲ್‌ ಪಂದ್ಯದಲ್ಲಿ ಟೂರ್ನಿಯ 2 ಬಲಿಷ್ಠ ತಂಡಗಳಾದ ಬೆಂಗಳೂರು ಬ್ಲಾಸ್ಟರ್ಸ್‌ ಹಾಗೂ ಮೈಸೂರು ವಾರಿಯರ್ಸ್‌ ತಂಡಗಳು ಮುಖಾಮುಖಿಯಾಗಲಿದ್ದು, ವಿಜಯಲಕ್ಷ್ಮಿ ಯಾವ ತಂಡದ ಪಾಲಾಗಳಿದ್ದಾಳೆ ಎಂಬುದನ್ನು ಕಾದುನೋಡಬೇಕಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ; ಫುಟ್‌ಪಾತ್ ಆಕ್ರಮಿಸಿದ್ದ 30 ಅಂಗಡಿಗಳಿಗೆ ಶಾಕ್‌

ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…

1 hour ago

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಪೈರಸಿ ನಿಗ್ರಹಕ್ಕೆ ಟೆಲಿಗ್ರಾಮ್‌ ಆಪ್‌ಗೆ ಅವಧಿ ನೀಡಿದ ಕೇಂದ್ರ

ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 10 ಶುಕ್ರವಾರ

4 hours ago

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

1 day ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

1 day ago