ಮೈಸೂರು: ಮಹಾರಾಜ ಟ್ರೋಫಿ (ಕೆಎಸ್ಸಿಎ) ಟಿ20 2024ರ ಪಂದ್ಯಾವಳಿಗೆ ಎಲ್ಲಾ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಇದೇ ಆಗಸ್ಟ್ 15 ರಿಂದ ಆರಂಭವಾಗಲಿರುವ ಮಹಾರಾಜ ಟ್ರೋಫಿ 2024ರ ಪಂದ್ಯಾವಳಿ ಆರಂಭಕ್ಕೂ ಮುನ್ನಾ ಇಂದು (ಶುಕ್ರವಾರ, ಆ.1) ನಗರದ ಮಾನಸ ಗಂಗೋತ್ರಿಯಲ್ಲಿನ ಗ್ಲೇಡ್ಸ್ ಮೈದಾನದಲ್ಲಿ ಮೈಸೂರು ವಾರಿಯರ್ಸ್ ತಂಡ ತನ್ನ ಅಭ್ಯಾಸ ಆರಂಭಿಸಿದೆ.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಗಸ್ಟ್ 15 ರಿಂದ ಸೆಪ್ಟೆಂಬರ್ 1 ವರೆಗೆ ಈ ಟೂರ್ನಿ ನಡೆಯಲಿದ್ದು, ಇದಕ್ಕಾಗಿ ಮೈಸೂರಿನಲ್ಲಿ ಸಮರಭ್ಯಾಸ ನಡೆಸುತ್ತಿದ್ದಾರೆ.
ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರ ವರೆಗೆ ಅಭ್ಯಾಸ ನಡೆಸಿದ ವಾರಿಯರ್ಸ್ ತಂಡ ಹೆಡ್ ಕೋಚ್ ಅನುಪಸ್ಥಿತಿಯಲ್ಲಿ ಅಭ್ಯಾಸ ನಡೆಸಿದ್ದಾರೆ. ಇನ್ನು ಅನುಭವಿ ಆಲ್ ರೌಂಡರ್ ಗೌತಮ್, ರಾಹುಲ್ ದ್ರಾವಿಡ್ ಪುತ್ರ ಸಮಿತ್ ದ್ರಾವಿಡ್ ಕಾರಣಾಂತರಗಳಿಂದ ಅಭ್ಯಾಸಕ್ಕೆ ಆಗಮಿಸಿಲ್ಲ.
ಈ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್ ತಂಡವು ಹುಬ್ಬಳ್ಳಿ ಟೈಗರ್ಸ್, ಬೆಂಗಳೂರು ಬ್ಲಾನ್ಸರ್ನ್, ಮಂಗಳೂರು ಡ್ರಾಗನ್ಸ್, ಗುಲ್ಬರ್ಗಾ ಮಿಸ್ಟಿಕ್ಸ್, ಮತ್ತು ಶಿವಮೊಗ್ಗ ಲಯನ್ಸ್ ಸೇರಿದಂತೆ ಐದು ತಂಡಗಳ ವಿರುದ್ಧ ಆಡಲಿದೆ.
ಮೈಸೂರು ವಾರಿಯರ್ಸ್ ತಂಡದ ಅಟಗಾರರ ಹೆಸರುಗಳು ಹೀಗಿವೆ:
1. ಕಾರ್ತಿಕ್.ಸಿ ಅಜಿತ್
2. ಕಾರ್ತಿಕ್.ಎಸ್.ಯು
3. ಕರುಣ್ ನಾಯರ್
4. ಸಮಿತ್ ದ್ರಾವಿಡ್
5. ಹರ್ಷಿಲ್ ಧರ್ಮನಿ
6. ಮನೋಜ್ ಭಾಂಡಗೆ
7. ಜಗದೀಶ ಸುಚಿತ್
8. ಗೌತಮ ಕೃಷ್ಣಪ್ಪ
9. ವಿದ್ಯಾಧರ ಪಾಟೀಲ
10. ವೆಂಕಟೇಶ ಎಂ
11. ಗೌತಮ ಮಿಶ್ರಾ
12. ಧನುಷ್ಯ ಗೌಡ
13. ದೀಪಕ್ ದೇವಾಡಿಗ
14. ಸುಮಿತ್ ಕುಮಾರ್
15. ಸ್ಮಯನ್ ಶ್ರೀವಾಸ್ತವ
16. ಜಾಸ್ಪರ್ ಇ ಜಿ
17. ಸರ್ಫರಾಜ್ ಅಶ್ರಫ್
18. ಪ್ರಸಿದ್ಧ ಕೃಷ್ಣ
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…