ಕ್ರೀಡೆ

ಮಹಾರಾಜ ಟ್ರೋಫಿ 2024: ಗಂಗೋತ್ರಿ ಗ್ಲೇಡ್ಸ್‌ನಲ್ಲಿ ಸಮರಾಭ್ಯಾಸ ಆರಂಭಿಸಿದ ಮೈಸೂರು ವಾರಿಯರ್ಸ್‌

ಮೈಸೂರು: ಮಹಾರಾಜ ಟ್ರೋಫಿ (ಕೆಎಸ್‌ಸಿಎ) ಟಿ20 2024ರ ಪಂದ್ಯಾವಳಿಗೆ ಎಲ್ಲಾ ಸಿದ್ದತೆಗಳು ಭರದಿಂದ ಸಾಗುತ್ತಿವೆ. ಇದೇ ಆಗಸ್ಟ್‌ 15 ರಿಂದ ಆರಂಭವಾಗಲಿರುವ ಮಹಾರಾಜ ಟ್ರೋಫಿ 2024ರ ಪಂದ್ಯಾವಳಿ ಆರಂಭಕ್ಕೂ ಮುನ್ನಾ ಇಂದು (ಶುಕ್ರವಾರ, ಆ.1) ನಗರದ ಮಾನಸ ಗಂಗೋತ್ರಿಯಲ್ಲಿನ ಗ್ಲೇಡ್ಸ್‌ ಮೈದಾನದಲ್ಲಿ ಮೈಸೂರು ವಾರಿಯರ್ಸ್‌ ತಂಡ ತನ್ನ ಅಭ್ಯಾಸ ಆರಂಭಿಸಿದೆ.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಗಸ್ಟ್‌ 15 ರಿಂದ ಸೆಪ್ಟೆಂಬರ್ 1 ವರೆಗೆ ಈ ಟೂರ್ನಿ ನಡೆಯಲಿದ್ದು, ಇದಕ್ಕಾಗಿ ಮೈಸೂರಿನಲ್ಲಿ ಸಮರಭ್ಯಾಸ ನಡೆಸುತ್ತಿದ್ದಾರೆ.

ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರ ವರೆಗೆ ಅಭ್ಯಾಸ ನಡೆಸಿದ ವಾರಿಯರ್ಸ್‌ ತಂಡ ಹೆಡ್‌ ಕೋಚ್‌ ಅನುಪಸ್ಥಿತಿಯಲ್ಲಿ ಅಭ್ಯಾಸ ನಡೆಸಿದ್ದಾರೆ. ಇನ್ನು ಅನುಭವಿ ಆಲ್‌ ರೌಂಡರ್‌ ಗೌತಮ್‌, ರಾಹುಲ್‌ ದ್ರಾವಿಡ್‌ ಪುತ್ರ ಸಮಿತ್‌ ದ್ರಾವಿಡ್‌ ಕಾರಣಾಂತರಗಳಿಂದ ಅಭ್ಯಾಸಕ್ಕೆ ಆಗಮಿಸಿಲ್ಲ.

ಈ ಪಂದ್ಯಾವಳಿಯಲ್ಲಿ ಮೈಸೂರು ವಾರಿಯರ್ಸ್ ತಂಡವು ಹುಬ್ಬಳ್ಳಿ ಟೈಗರ್ಸ್, ಬೆಂಗಳೂರು ಬ್ಲಾನ್ಸರ್ನ್, ಮಂಗಳೂರು ಡ್ರಾಗನ್ಸ್, ಗುಲ್ಬರ್ಗಾ ಮಿಸ್ಟಿಕ್ಸ್, ಮತ್ತು ಶಿವಮೊಗ್ಗ ಲಯನ್ಸ್ ಸೇರಿದಂತೆ ಐದು ತಂಡಗಳ ವಿರುದ್ಧ ಆಡಲಿದೆ.

ಮೈಸೂರು ವಾರಿಯರ್ಸ್ ತಂಡದ ಅಟಗಾರರ ಹೆಸರುಗಳು ಹೀಗಿವೆ:

1. ಕಾರ್ತಿಕ್.ಸಿ ಅಜಿತ್
2. ಕಾರ್ತಿಕ್.ಎಸ್.ಯು
3. ಕರುಣ್ ನಾಯರ್
4. ಸಮಿತ್ ದ್ರಾವಿಡ್
5. ಹರ್ಷಿಲ್‌ ಧರ್ಮನಿ
6. ಮನೋಜ್ ಭಾಂಡಗೆ
7. ಜಗದೀಶ ಸುಚಿತ್
8. ಗೌತಮ ಕೃಷ್ಣಪ್ಪ
9. ವಿದ್ಯಾಧರ ಪಾಟೀಲ
10. ವೆಂಕಟೇಶ ಎಂ
11. ಗೌತಮ ಮಿಶ್ರಾ
12. ಧನುಷ್ಯ ಗೌಡ
13. ದೀಪಕ್ ದೇವಾಡಿಗ
14. ಸುಮಿತ್ ಕುಮಾರ್
15. ಸ್ಮಯನ್ ಶ್ರೀವಾಸ್ತವ
16. ಜಾಸ್ಪರ್ ಇ ಜಿ
17. ಸರ್ಫರಾಜ್ ಅಶ್ರಫ್
18. ಪ್ರಸಿದ್ಧ ಕೃಷ್ಣ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು| ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…

6 mins ago

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

5 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

5 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

5 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

5 hours ago